ಬೆಂಗಳೂರು : ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದೆ. ಈ ಸಂದರ್ಭದಲ್ಲಿ ಮತ್ತೊಮ್ಮೆ ಲಾಕ್ ಡೌನ್ ವಿಷಯ ಮುನ್ನೆಲೆಗೆ ಬಂದಿದೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಆರ್. ಅಶೋಕ್ ಎಲ್ಲದ್ದಕ್ಕೂ 7ನೇ ತಾರೀಖಿನವರೆಗೆ ಕಾಯಿರಿ ಎಂದು ಹೇಳಿದ್ದಾರೆ.
ಕೊರೊನಾ ನಿಯಂತ್ರಣ ಸಂಬಂಧ ವಿಧಾನಸೌಧದಲ್ಲಿ ನಡೆದ ಸಭೆಯ ಬಳಿಕ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಆರ್‌.ಅಶೋಕ್‌ ಮಾತನಾಡಿದರು, ಜು. 7ರ ನಂತರ ಸಿಎಂ ಹಲವು ಬದಲಾವಣೆಗಳನ್ನು ತೆಗೆದುಕೊಳ್ಳಲಿದ್ದಾರೆ. 7ರ ನಂತರ ಮತ್ತಷ್ಟು ಕಠಿಣ ಕ್ರಮಗಳನ್ನು ಪ್ರಕಟಿಸುತ್ತೇವೆ ಎಂದು ತಿಳಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ಜುಲೈ 3 ರಂದು ಕೊನೆಗೊಳ್ಳಲಿವೆ. ಭಾನುವಾರ ಲಾಕ್‌ಡೌನ್‌ ಇದೆ. ಹೀಗಾಗಿ ಜುಲೈ 7 ಮಂಗಳವಾರಿಂದ ಬೆಂಗಳೂರಿನಲ್ಲಿ ಮಾತ್ರ ಲಾಕ್‌ಡೌನ್‌ ಜಾರಿಯಾಗುತ್ತಾ ಎಂಬ ಪ್ರಶ್ನೆ ಸದ್ಯ ಎಲ್ಲರನ್ನೂ ಕಾಡುತ್ತಿದೆ.

ಕೆಲವು ತಜ್ಞರು ಮುಂದಿನ ರಣ ಭೀಕರ ಪರಿಸ್ಥಿತಿ ಎದುರಿಸಲು ಲಾಕ್ ಡೌನ್ ಅಸ್ತ್ರದ ಬಗ್ಗೆಯೂ ಪ್ರಸ್ತಾವನೆ ಮಾಡಿದ್ದಾರೆ. ನಿತ್ಯ ಒಂದು ಸಾವಿರ ಕೇಸ್ ಬಂದರೆ, ಲಾಕ್ ಡೌನ್ ಮಾಡಲೇಬೇಕು ಎಂದು ಹೇಳಿದ್ದಾರೆ. ಆದರೆ, ಲಾಕ್ ಡೌನ್ಗೆಂ ಮಾತ್ರ ಸಿಎಂ ಒಪ್ಪಲಿಲ್ಲ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಸದ್ಯ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, 7ರ ನಂತರ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುವುದನ್ನು ಕಾಯ್ದು ನೋಡಬೇಕಿದೆ.

Leave a Reply

Your email address will not be published. Required fields are marked *

You May Also Like

16ನೇ ವಯಸ್ಸಿಗೆ ಟಿಕ್ ಟಾಕ್ ಸ್ಟಾರ್ ಈ ನಿರ್ಧಾರ ಕೈಗೊಂಡಿದ್ದೇಕೆ?

ನವದೆಹಲಿ : ಟಿಕ್ಟಾಲಕ್ ಸ್ಟಾರ್ ಸಿಯಾ ಕಕ್ಕರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಹಲವು ಅನುಮಾನಗಳಿಗೆ ದಾರಿ…

ಪಿಎಂ ಕೇರ್ಸ್ ಯಾರೊಬ್ಬರ ಮನೆಯ ಆಸ್ತಿಯಲ್ಲ: ಸಿದ್ದರಾಮಯ್ಯ

ಬೆಂಗಳೂರು: ದೇಶದ ಜನರ ದೇಣಿಗೆಯ ಪಿಎಂ ಕೇರ್ಸ್ ಫಂಡ್ (PMCaresFund) ಯಾರೊಬ್ಬರ ಮನೆಯ ಆಸ್ತಿ ಅಲ್ಲ. ಅದು ಈ ದೇಶದ ಪ್ರಜೆಗಳ ದುಡ್ಡು, ಅದು ಸದುಪಯೋಗವಾಗಬೇಕು ಎಂದು ಹೇಳುವ ಅಧಿಕಾರ ಪ್ರತಿಯೊಬ್ಬರಿಗೆ ಇದೆ. ಅದನ್ನೇ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಸೋನಿಯಾಗಾಂಧಿಯವರು ಹೇಳಿದ್ದಾರೆ ತಪ್ಪೇನಿದೆ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಗದಗ ಚುನಾವಣೆ-2022 ಜಯಗಳಿಸಿದ ಅಭ್ಯರ್ಥಿಗಳು

ಉತ್ತರಪ್ರಭ ಸುದ್ದಿಗದಗ: ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ…

ಗಂಗಾಮತ ಸಮಾಜದ ವಧು-ವರರ ಸಮಾವೇಶ

ನಿಜಶರಣ ಅಂಬಿಗರ ಚೌಡಯ್ಯನವರ ಸಮಾಜದಿಂದ ವಧು-ವರರ ಸಮಾವೇಶ ಜ.31 ರಂದು ಶ್ರೀ ತೋಂಟದ ಸಿದ್ಧಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಪೂಜ್ಯಶ್ರೀ ಷ.ಬ್ರ. ಫಕೀರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಜರುಗಲಿದೆ.