ಬೆಂಗಳೂರು : ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದೆ. ಈ ಸಂದರ್ಭದಲ್ಲಿ ಮತ್ತೊಮ್ಮೆ ಲಾಕ್ ಡೌನ್ ವಿಷಯ ಮುನ್ನೆಲೆಗೆ ಬಂದಿದೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಆರ್. ಅಶೋಕ್ ಎಲ್ಲದ್ದಕ್ಕೂ 7ನೇ ತಾರೀಖಿನವರೆಗೆ ಕಾಯಿರಿ ಎಂದು ಹೇಳಿದ್ದಾರೆ.
ಕೊರೊನಾ ನಿಯಂತ್ರಣ ಸಂಬಂಧ ವಿಧಾನಸೌಧದಲ್ಲಿ ನಡೆದ ಸಭೆಯ ಬಳಿಕ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಆರ್‌.ಅಶೋಕ್‌ ಮಾತನಾಡಿದರು, ಜು. 7ರ ನಂತರ ಸಿಎಂ ಹಲವು ಬದಲಾವಣೆಗಳನ್ನು ತೆಗೆದುಕೊಳ್ಳಲಿದ್ದಾರೆ. 7ರ ನಂತರ ಮತ್ತಷ್ಟು ಕಠಿಣ ಕ್ರಮಗಳನ್ನು ಪ್ರಕಟಿಸುತ್ತೇವೆ ಎಂದು ತಿಳಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ಜುಲೈ 3 ರಂದು ಕೊನೆಗೊಳ್ಳಲಿವೆ. ಭಾನುವಾರ ಲಾಕ್‌ಡೌನ್‌ ಇದೆ. ಹೀಗಾಗಿ ಜುಲೈ 7 ಮಂಗಳವಾರಿಂದ ಬೆಂಗಳೂರಿನಲ್ಲಿ ಮಾತ್ರ ಲಾಕ್‌ಡೌನ್‌ ಜಾರಿಯಾಗುತ್ತಾ ಎಂಬ ಪ್ರಶ್ನೆ ಸದ್ಯ ಎಲ್ಲರನ್ನೂ ಕಾಡುತ್ತಿದೆ.

ಕೆಲವು ತಜ್ಞರು ಮುಂದಿನ ರಣ ಭೀಕರ ಪರಿಸ್ಥಿತಿ ಎದುರಿಸಲು ಲಾಕ್ ಡೌನ್ ಅಸ್ತ್ರದ ಬಗ್ಗೆಯೂ ಪ್ರಸ್ತಾವನೆ ಮಾಡಿದ್ದಾರೆ. ನಿತ್ಯ ಒಂದು ಸಾವಿರ ಕೇಸ್ ಬಂದರೆ, ಲಾಕ್ ಡೌನ್ ಮಾಡಲೇಬೇಕು ಎಂದು ಹೇಳಿದ್ದಾರೆ. ಆದರೆ, ಲಾಕ್ ಡೌನ್ಗೆಂ ಮಾತ್ರ ಸಿಎಂ ಒಪ್ಪಲಿಲ್ಲ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಸದ್ಯ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, 7ರ ನಂತರ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುವುದನ್ನು ಕಾಯ್ದು ನೋಡಬೇಕಿದೆ.

Leave a Reply

Your email address will not be published. Required fields are marked *

You May Also Like

ಕೃಷಿಗೆ ಉತ್ತೇಜನ ನೀಡಲು ಭೂಕಾಯಿದೆಗೆ ತಿದ್ದುಪಡಿಯಾಗಿದೆ : ಸಚಿವ ಬಿ.ಸಿ.ಪಾಟೀಲ್

ಕಾಂಗ್ರೆಸ್ ಈಗ ಸಂಪೂರ್ಣ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು, ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದೆ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಹಿರೆಕೆರೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್ ಹೇಳುವುದೊಂದು ಮಾಡುವುದು ಇನ್ನೊಂದು. 2019 ರಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯಿದೆ ತಿದ್ದುಪಡಿ ಬಗ್ಗೆ ಸ್ಪಷ್ಟವಾಗಿ ಹೇಳಿತ್ತು ಎಂದರು.

ಇಂದು ಕೂಡ ಶತಕ ಬಾರಿಸಿದ ಸೋಂಕಿತರ ಸಂಖ್ಯೆ!: ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕಿತರು..?

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೊನಾ ಸೋಂಕಿತರ ಸಂಖ್ಯೆ ಶತಕ ಬಾರಿಸಿದೆ. ಇಂದು ಬರೋಬ್ಬರಿ 122…

ಹುಲ್ಲೂರಿನಲ್ಲಿ ಮಳೆಯ ಆರ್ಭಟ: ಧರೆಗುರುಳುತ್ತಿವೆ ಮನೆ-ಮರಗಳು

ಕಳೆದ ಎರ್ಡ್ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮನೆ ಹಾಗೂ ಮರಗಳು ಧರೆಗುರುಳುತ್ತಿವೆ. ಇದರಿಂದ ಗದಗ ಜಿಲ್ಲೆಯ ರೋಣ ತಾಲೂಕಿನ ಹುಲ್ಲೂರು ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ.

ಶಬರಿಮಲೈ ಯಾತ್ರಾರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ

ಅಯ್ಯಪ್ಪಸ್ವಾಮಿ ದೇಗುಲ ಶಬರಿಮಲೈಗೆ ಹೋಗುವ ಮುನ್ನ ಭಕ್ತಾದಿಗಳಿಗೆ ಹೊಸ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ.