ಜುಲೈ 7ರ ನಂತರ ರಾಜ್ಯದಲ್ಲಿ ಲಾಕ್ ಡೌನ್?


ಬೆಂಗಳೂರು : ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದೆ. ಈ ಸಂದರ್ಭದಲ್ಲಿ ಮತ್ತೊಮ್ಮೆ ಲಾಕ್ ಡೌನ್ ವಿಷಯ ಮುನ್ನೆಲೆಗೆ ಬಂದಿದೆ. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಆರ್. ಅಶೋಕ್ ಎಲ್ಲದ್ದಕ್ಕೂ 7ನೇ ತಾರೀಖಿನವರೆಗೆ ಕಾಯಿರಿ ಎಂದು ಹೇಳಿದ್ದಾರೆ.
ಕೊರೊನಾ ನಿಯಂತ್ರಣ ಸಂಬಂಧ ವಿಧಾನಸೌಧದಲ್ಲಿ ನಡೆದ ಸಭೆಯ ಬಳಿಕ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಆರ್‌.ಅಶೋಕ್‌ ಮಾತನಾಡಿದರು, ಜು. 7ರ ನಂತರ ಸಿಎಂ ಹಲವು ಬದಲಾವಣೆಗಳನ್ನು ತೆಗೆದುಕೊಳ್ಳಲಿದ್ದಾರೆ. 7ರ ನಂತರ ಮತ್ತಷ್ಟು ಕಠಿಣ ಕ್ರಮಗಳನ್ನು ಪ್ರಕಟಿಸುತ್ತೇವೆ ಎಂದು ತಿಳಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ಜುಲೈ 3 ರಂದು ಕೊನೆಗೊಳ್ಳಲಿವೆ. ಭಾನುವಾರ ಲಾಕ್‌ಡೌನ್‌ ಇದೆ. ಹೀಗಾಗಿ ಜುಲೈ 7 ಮಂಗಳವಾರಿಂದ ಬೆಂಗಳೂರಿನಲ್ಲಿ ಮಾತ್ರ ಲಾಕ್‌ಡೌನ್‌ ಜಾರಿಯಾಗುತ್ತಾ ಎಂಬ ಪ್ರಶ್ನೆ ಸದ್ಯ ಎಲ್ಲರನ್ನೂ ಕಾಡುತ್ತಿದೆ.

ಕೆಲವು ತಜ್ಞರು ಮುಂದಿನ ರಣ ಭೀಕರ ಪರಿಸ್ಥಿತಿ ಎದುರಿಸಲು ಲಾಕ್ ಡೌನ್ ಅಸ್ತ್ರದ ಬಗ್ಗೆಯೂ ಪ್ರಸ್ತಾವನೆ ಮಾಡಿದ್ದಾರೆ. ನಿತ್ಯ ಒಂದು ಸಾವಿರ ಕೇಸ್ ಬಂದರೆ, ಲಾಕ್ ಡೌನ್ ಮಾಡಲೇಬೇಕು ಎಂದು ಹೇಳಿದ್ದಾರೆ. ಆದರೆ, ಲಾಕ್ ಡೌನ್ಗೆಂ ಮಾತ್ರ ಸಿಎಂ ಒಪ್ಪಲಿಲ್ಲ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಸದ್ಯ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, 7ರ ನಂತರ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುವುದನ್ನು ಕಾಯ್ದು ನೋಡಬೇಕಿದೆ.

Exit mobile version