ಮುಂಡರಗಿ: ಟೋಲ್ ನಾಕಾ ಹಣದ ವಿಚಾರಕ್ಕೆ ಸಂಬಂಧ ಪಟ್ಟಂತೆ ಟೋಲ್ ಸಿಬ್ಬಂಧಿಗಳು ಗೂಂಡಾಗಿರಿ ನಡೆಸಿದ್ದು ನಾಲ್ವರನ್ನು ಥಳಿಸಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗೇಟ್ ನಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಎರಡು ದೂರು ದಾಖಲಾಗಿವೆ.

ದೂರುದಾರರಾದ ಶಿವಕುಮಾರ್, ಮಾರುತಿ, ನಿಂಗಪ್ಪ ಅವರು ಟೋಲ್ ಬಳಿ ಬಂದಾಗ ಟೋಲ್ ಸಿಬ್ಬಂಧಿ ಹಣ ಕೇಳಿದ್ದಾರೆ. ಅದಕ್ಕೆ ಅವರು ಪಾಸ್ ಟ್ಯಾಗ್ ಇದೆ ಎಂದು ಹೇಳಿದ್ದಕ್ಕೆ ಮದರಸಾಬ ಸಿಂಗನಮಲ್ಲಿ, ಚೇತನ್, ವಿನಾಯಕ, ಶಬ್ಬೀರ್ ನಾಲ್ವರು ಸೇರಿ ತಮಗೆ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ.

ಇನ್ನು ಮತ್ತೊಂದು ದೂರಿನಲ್ಲಿ ಮಾಬುಸಾಬ್ ಎಂಬುವವರು ಸಿಂಗಟಾಲೂರಿನಿಂದ ಮುಂಡರಗಿಗೆ ಬರುವಾಗ ತಾವು ದಿನಕ್ಕೆ ನಾಲ್ಕೈದು ಬಾರಿ ಈ ಮಾರ್ಗವಾಗಿ ಓಡಾಡುವುದರಿಂದ ಟೋಲ್ ಪಾಸ್ ಕೇಳಿದ್ದು, ಇದರಿಂದ ಸಿಟ್ಟಿಗೆದ್ದ ಮದರಸಾಬ ಸಿಂಗನಮಲ್ಲಿ, ಚೇತನ್ ಸೇರಿ ತಮ್ಮ ಮೇಲೆ ದೈಹಿಕ ಹಲ್ಲೆ ಮಾಡಿದ್ದಾರೆಂದು ದೂರು ದಾಖಲಾಗಿದೆ. ದೂರು ದಾರರು ಈಗ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಆರೋಪಿಗಳು ಪರಾರಿಯಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರದಲ್ಲಿ ಜನೌಷಧಿ ಕೇಂದ್ರ ಉದ್ಘಾಟಿಸಿದ ಸುನೀಲ್ ಮಹಾಂತಶೆಟ್ಟರ್

ಜನರಿಗೆ ಅಗ್ಗದ ದರದಲ್ಲಿ ಗುಣಮಟ್ಟದ ಔಷಧಿಗಳನ್ನು ಕೊಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದ್ದು, ಜನೌಷಧಿ ಮೂಲಕ ಜನರಿಗೆ ಶೇ.10 ರಿಂದ ಶೇ.90ರವರೆಗೆ ರಿಯಾಯತಿ ದರದಲ್ಲಿ ಔಷಧಿ ವಿತರಿಸಲಾಗುತ್ತಿದೆ ಎಂದು ಕೆಸಿಸಿ ಬ್ಯಾಂಕ ನಿರ್ದೇಶಕ ಸುನೀಲ ಮಹಾಂತಶೆಟ್ಟರ ಹೇಳಿದರು.

ಪಾನ ನಿಷೇಧ ಒಂದು ವಿಶ್ಲೇಷಣೆ

ಈಗ ನಲವತ್ತು ದಿವಸದಿಂದ ಬಂದ್ ಆಗಿದ್ದ ಮದ್ಯ ಮಾರಾಟ ಈಗ ಪುನರಾರಂಭವಾಗಿದೆ. ಈಗ ಕೆಲವರು ರಾಜಕೀಯ, ಕೆಲವರು ಸಾಮಾಜಿಕ ಕಳಕಳಿಯಿಂದ ಮತ್ತೆ ಕೆಲವರು ಸುಮ್ಮನೆ ಪ್ರಚಾರದ ಕಾರಣ ಪಾನ ನಿಷೇಧ ಮಾಡಿರಿ ಎಂದು ಸರಕಾರಕ್ಕೆ ಹೇಳುತ್ತಿದ್ದಾರೆ. ಈ ಬಗ್ಗೆ ಧಾರವಾಡದ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಎಸ್.ಎಚ್.ಮಿಟ್ಟಲಕೊಡ ಅವರ ವಿಶ್ಲೇಷಣೆ ಇಲ್ಲಿದೆ…

ಯುವಜನ ಸಂಕಲ್ಪ ಯಾತ್ರೆಗೆ ಅದ್ದೂರಿ ಚಾಲನೆ ಯುವಜನತೆಯಲ್ಲಿ ಉಕ್ಕಿದ ದೇಶ ಭಕ್ತಿ. ಎಲ್ಲೆಲ್ಲೂ ತಿರಂಗಾ ಕಲರವ

ಉತ್ತರಪ್ರಭ ಸುದ್ದಿಆಲಮಟ್ಟಿ: ರಾಷ್ಟ್ರಧರ್ಮ ದೃಷ್ಟಾರ, ನೈಷ್ಟಿಕ ಬ್ರಮ್ಮಚಾರಿ, ಸಮಾಜಮುಖಿಯ ಅದಮ್ಯ ಚೇತನ, ಕನಾ೯ಟಕ ಗಾಂಧಿ ಹಡೇ೯ಕರ…

ಹಡಗಿಗೆ ದೀಪಾಲಂಕಾರ: ಕೋವಿಡ್19 ವಾರಿಯರ್ಸ್ಗೆ ಗೌರವ

ಹಡಗುಗಳನ್ನು ದೀಪಗಳಿಂದ ಅಲಂಕರಿಸುವ ಮೂಲಕ ಕೊರೋನಾ ವಾರಿಯರ್ಸ್ ಗೆ ವಿಶಿಷ್ಟ ರೀತಿಯಿಂದ ಅಭಿನಂದನೆ ಸಲ್ಲಿಸಲಾಯಿತು.