ಮುಂಡರಗಿ: ಟೋಲ್ ನಾಕಾ ಹಣದ ವಿಚಾರಕ್ಕೆ ಸಂಬಂಧ ಪಟ್ಟಂತೆ ಟೋಲ್ ಸಿಬ್ಬಂಧಿಗಳು ಗೂಂಡಾಗಿರಿ ನಡೆಸಿದ್ದು ನಾಲ್ವರನ್ನು ಥಳಿಸಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗೇಟ್ ನಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಎರಡು ದೂರು ದಾಖಲಾಗಿವೆ.

ದೂರುದಾರರಾದ ಶಿವಕುಮಾರ್, ಮಾರುತಿ, ನಿಂಗಪ್ಪ ಅವರು ಟೋಲ್ ಬಳಿ ಬಂದಾಗ ಟೋಲ್ ಸಿಬ್ಬಂಧಿ ಹಣ ಕೇಳಿದ್ದಾರೆ. ಅದಕ್ಕೆ ಅವರು ಪಾಸ್ ಟ್ಯಾಗ್ ಇದೆ ಎಂದು ಹೇಳಿದ್ದಕ್ಕೆ ಮದರಸಾಬ ಸಿಂಗನಮಲ್ಲಿ, ಚೇತನ್, ವಿನಾಯಕ, ಶಬ್ಬೀರ್ ನಾಲ್ವರು ಸೇರಿ ತಮಗೆ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ.

ಇನ್ನು ಮತ್ತೊಂದು ದೂರಿನಲ್ಲಿ ಮಾಬುಸಾಬ್ ಎಂಬುವವರು ಸಿಂಗಟಾಲೂರಿನಿಂದ ಮುಂಡರಗಿಗೆ ಬರುವಾಗ ತಾವು ದಿನಕ್ಕೆ ನಾಲ್ಕೈದು ಬಾರಿ ಈ ಮಾರ್ಗವಾಗಿ ಓಡಾಡುವುದರಿಂದ ಟೋಲ್ ಪಾಸ್ ಕೇಳಿದ್ದು, ಇದರಿಂದ ಸಿಟ್ಟಿಗೆದ್ದ ಮದರಸಾಬ ಸಿಂಗನಮಲ್ಲಿ, ಚೇತನ್ ಸೇರಿ ತಮ್ಮ ಮೇಲೆ ದೈಹಿಕ ಹಲ್ಲೆ ಮಾಡಿದ್ದಾರೆಂದು ದೂರು ದಾಖಲಾಗಿದೆ. ದೂರು ದಾರರು ಈಗ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಆರೋಪಿಗಳು ಪರಾರಿಯಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಸಾಪ ಜಿಲ್ಲಾಧ್ಯಕ್ಷ ಶರಣು ಹೇಳಿಕೆ: ಸಾಹಿತ್ಯ ಭವನಗಳ ಕಾಮಗಾರಿ ಪೂರ್ಣಗೊಳಿಸಿದ ಹೆಮ್ಮೆ ಇದೆ

ರಾಜ್ಯಕ್ಕೆ ಮಾದರಿಯಾದ ಜಿಲ್ಲಾ ಸಾಹಿತ್ಯ ಭವನ ಕಳೆದ 24 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರೋಣ ತಾಲೂಕ ಕನ್ನಡ ಸಾಹಿತ್ಯ ಭವನಗಳು ನಮ್ಮ ಅವಧಿಯಲ್ಲಿ ಪೂರ್ಣಗೊಳಿಸಿ ಉದ್ಘಾಟನೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ

ಪ್ರಧಾನಿ ನರೇಂದ್ರ ಮೋದಿ ಅವರ ಸದ್ಯದ ಆಸ್ತಿ ಎಷ್ಟು ಗೊತ್ತಾ?

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷಕ್ಕಿಂತಲೂ ಈ ವರ್ಷ ಶ್ರೀಮಂತರಾಗಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರ ಆಸ್ತಿಯ ಮೌಲ್ಯ ಕಳೆದ ವರ್ಷಕ್ಕಿಂತಲೂ ಈ ವರ್ಷ ಹೆಚ್ಚಾಗಿದೆ. ಈ ವರ್ಷ ಅವರ ಆಸ್ತಿಯ ಮೌಲ್ಯ ರೂ. 36 ಲಕ್ಷ ಹೆಚ್ಚಳವಾಗಿದೆ.

ಎಲ್ಲ ಸಮುದಾಯಗಳ ಅಭಿವೃದ್ಧಿ ಪರ ಬಜೆಟ್ : ಕಾಂತಿಲಾಲ ಬನ್ಸಾಲಿ

ಕೋವಿಡ್ ಸಂಕಷ್ಟದ ನಡುವೆಯೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಆಶಯದೊಂದಿಗೆ ಸಮಾಜದ ಪ್ರತಿಯೊಬ್ಬ ವ್ಯಕ್ತಿಯನ್ನೂ ಗಮನದಲ್ಲಿಟ್ಟುಕೊಂಡು 2021-22ನೇ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯದ ಜನತೆಯ ಪರವಾಗಿ ತುಂಬು ಹೃದಯದ ಧನ್ಯವಾದಗಳು.

ಸರ್ಕಾರದ ಮಾರ್ಗಸೂಚಿ ಬದುಕಿನ ಭಾಗವಾಗಬೇಕು: ಸುಧಾಕರ್

ಕೋವಿಡ್ ರೋಗಕ್ಕೆ ಲಸಿಕೆ ಸಿಗುವತನಕ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಜನರು ಚಾಚೂ ತಪ್ಪದೆ ತಮ್ಮಬದುಕಿನ ಭಾಗವಾಗಿಸಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.