ಬೆಂಗಳೂರು: ಅತಂತ್ರರಾಗಿರುವ ಅತಿಥಿ ಉಪನ್ಯಾಸಕರು ಹತಾಶೆಗೊಂಡು ಸುಮಾರು ಎಂಟು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸರ್ಕಾರ ಅತಿಥಿ ಉಪನ್ಯಾಸಕರಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಪತ್ರಿಕೆಗಳಲ್ಲಿ ವರದಿಯಾಗಿರುವ ಸುದ್ದಿಯನ್ನು ಹಂಚಿಕೊಡಿರುವ ಅವರು, ಕರೋನ ಸೋಂಕಿನ ವೇಳೆ ಸಂಕಷ್ಟಕ್ಕೆ ಸಿಲುಕಿರುವ ಪದವಿ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಮೂರು ತಿಂಗಳ ವೇತನ ನೀಡುವ ಮೂಲಕ ಮಾನವೀಯ ನೆಲೆಗಟ್ಟಿನಲ್ಲಿ ತುರ್ತು ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಮೂಲಕ ಕೊರೊನಾ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿರುವವರ ಕಷ್ಟಗಳನ್ನು ಪರಿಹರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನೀರಿನ ಕರ ಹೆಚ್ಚಳಕ್ಕೆ ಕನ್ನಡ ಕ್ರಾಂತಿ ಸೇನೆ ವಿರೋಧ

ವರ್ಷಕ್ಕೆ 950 ರೂ ನೀರಿನ ಕರವನ್ನು ಪುರಸಭೆ ನಿಗದಿ ಮಾಡಿತ್ತು. ಆದರೆ ಇದೀಗ ಏಕಾಏಕಿ 1550 ರೂ, ಏಕಾಏಕಿ ಹೆಚ್ಚಿಗೆ ಮಾಡಿದ್ದು ಎಷ್ಟು ಸರಿ ಎನ್ನುವ ಪ್ರಶ್ನೆ ಉದ್ಭವವಾಗಿದೆ.

ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಮಾಹಿತಿ

ಈಗಾಗಲೇ ರಾಜ್ಯದ ಬಹುತೇಕ ಕಡೆಗಳಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಪ್ರವಾಹ ಭೀತಿ ಜನರನ್ನು ಆವರಿಸಿದೆ. ಇನ್ನು ಜಲಾಶಯಗಳಲ್ಲಿಯೂ ಕೂಡ ಹೆಚ್ಚು ನೀರು ಸಂಗ್ರಹವಾಗುತ್ತಿದೆ. ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ, ಒಳಹರಿವು ಮೊದಲಾದ ಮಾಹಿತಿ ಇಲ್ಲಿದೆ

ರೈತರ ಉತ್ಪನ್ನುಗಳಿಗೆ ಲಾಭದಾಯಕ ಬೆಲೆ ಘೋಷಿಸಿ: ನೆಲಗುಡ್ಡದ

ಉತ್ತರಪ್ರಭ ಸುದ್ದಿಶಿರಹಟ್ಟಿ : ರೈತರ ಉತ್ಪನ್ನುಗಳಿಗೆ ಲಾಭದಾಯಕ ಬೆಲೆ ಘೋಷಿಸಬೇಕೆಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ…

ತಾ.ಪಂ ಇಒ ಲಂಚ ಪಡೆಯುವ ವೇಳೆ ಎಸಿಬಿ ದಾಳಿ

ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದ ತಾ.ಪಂ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ತಾ.ಪಂ ಇಒ ಜನರಿಂದ ಲಂಚ ಪಡೆಯುವ ವೇಳೆ ಎಸಿಬಿ ದಾಳಿ ಮಾಡಿದ್ದು, ಇಒ ಸಿಕ್ಕಿಬಿದ್ದಿದ್ದಾನೆ.