ಗದಗ: ಕರ್ನಾಟಕ ಗೃಹ ಮಂಡಳಿ ಅಧಿಕಾರಿಯನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ಇಂದು ಗದಗನ ಗೃಹ ಮಂಡಳಿ ಕಚೇರಿಯಲ್ಲಿ ನಡೆದಿದೆ.

ಕರ್ನಾಟಕ ಗೃಹ ಮಂಡಳಿಯಿಂದ ಪ್ಲಾಟ್ ಹರಾಜು ಪ್ರಕ್ರಿಯೆ ನಡೆದಿದ್ದು, 40 ಪ್ಲಾಟ್ ಹರಾಜು ಪ್ರಕ್ರಿಯೆಗೆ ಸಾರ್ವಜನಿಕರು ವಿರೋಧ ವ್ಯಕ್ತ ಪಡಿಸಿದ್ದಾರೆ. ಗೃಹ ಮಂಡಳಿಯಿಂದ ಪ್ರತಿ ಚದುರ ಅಡಿಗೆ 550 ರೂ ನಿಂದ ಹರಾಜು ಆರಂಭವಾಗಿದ್ದು, ಮೂಲಭೂತ ಸೌಲಭ್ಯಗಳಿಲ್ಲದೇ ಹರಾಜು ನಡೆಸುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಒಂದು ಪ್ಲಾಟ್ ಗೆ 50 ಸಾವಿರ ಕಟ್ಟಿದ್ರೆ ಮಾತ್ರ ಹರಾಜು ಪ್ರಕ್ರಿಯೇಯಲ್ಲಿ ಅವಕಾಶ ನೀಡಲಾಗಿತ್ತು. ಹೀಗಾಗಿ ಗೃಹ ಮಂಡಳಿಯ ಸಹಾಯಕ ಪ್ರಧಾನ ವ್ಯವಸ್ಥಾಪಕ ಅಧಿಕಾರಿ ಎಸ್.ಎನ್ ಜೋಷಿ ಅವರಿಗೆ ಸಾರ್ವಜನಿಕರು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡರು.
ಇನ್ನು ಹರಾಜು ಪ್ರಕ್ರಿಯೆಯಿಂದ ಗೃಹ ಮಂಡಳಿಯಲ್ಲಿ ಎಲ್ಲಿ ನೋಡಿದರು ಜನವೋ ಜನ ಎನ್ನುವಂತಿತ್ತು. 40 ಪ್ಲಾಟ್ ಗೆ ನೂರಾರು ಜನ ಜಮಾವಣೆಗೊಂಡಿದ್ದರು. ಇದರಿಂದ ಸಾಮಾಜಿಕ ಅಂತರ, ಮಾಸ್ಕ್, ಸೈನಿಟೆಜರ್ ವ್ಯವಸ್ಥೆ ಎಲ್ಲವೂ ಮಾಯವಾಗಿತ್ತು.

Leave a Reply

Your email address will not be published. Required fields are marked *

You May Also Like

60 ಜನರಿರುವ ಕುಟುಂಬಕ್ಕೆ ಎಂಟ್ರಿ ಕೊಟ್ಟ ಸೋಂಕು!

ಧಾರವಾಡ : ಜಿಲ್ಲೆಯಲ್ಲಿ ಕೊರೊನಾ ಹಾವಳಿ ದಿನದಿಂದ ದಿನಕ್ಕ ಏರಿಕೆಯಾಗುತ್ತಿದೆ.  ನವಲಗುಂದ ತಾಲೂಕಿನ ಶಿರಕೋಳ ಗ್ರಾಮಕ್ಕೂ…

ಗದಗ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ನಡೆಯುವ ಗ್ರಾಪಂ ಚುನಾವಣೆ ವಿವರ

ರಾಜ್ಯ ಚುನಾವಣಾ ಆಯೋಗವು ರಾಜ್ಯದ 30 ಜಿಲ್ಲೆಗಳಲ್ಲಿನ ಒಟ್ಟು 6004 ಗ್ರಾಮ ಪಂಚಾಯತಿಗಳಲ್ಲಿ ಅವಧಿ ಮುಕ್ತಾಯವಾಗದ 162 ಗ್ರಾಮ ಪಂಚಾಯತಿಗಳು, ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿರುವ 6 ಗ್ರಾಮ ಪಂಚಾಯತಿಗಳು ಮತ್ತು 33 ಗ್ರಾಮ ಪಂಚಾಯತಿಗಳು ಪೂರ್ಣವಾಗಿ ಹಾಗೂ 41 ಗ್ರಾಮ ಪಂಚಾಯತಿಗಳು ಬಹುಶಃ ನಗರ ಸ್ಥಳೀಯ ಸಂಸ್ಥೆಗೆ ಸೇರ್ಪಡೆಯಾಗಿರುವುದರಿಂದ ಒಟ್ಟು 74 ಗ್ರಾಮ ಪಂಚಾಯತಿಗಳು ಒಟ್ಟಾರೆ 242 ಗ್ರಾಮ ಪಂಚಾಯತಿಗಳನ್ನು ಹೊರತು ಪಡೆಸಿ ಉಳಿದ ಎಲ್ಲ 5762 ಗ್ರಾಮ ಪಂಚಾಯತಿಗಳ 35,884 ಕ್ಷೇತ್ರಗಳಿಂದ ಒಟ್ಟು 92121 ಸ್ಥಾನಗಳಿಗೆ ಈ ಕೆಳಕಂಡ ವೇಳಾ ಪಟ್ಟಿಯಂತೆ ಚುನಾವಣೆ ನಡೆಸಲಾಗುವುದು.

ವಿದ್ಯಾರ್ಥಿಗಳು ಒತ್ತಡ ನಿರ್ವಹಿಸುವ ಕಲೆ ರೂಢಿಸಿಕೊಳ್ಳಬೇಕು

ವಿದ್ಯಾರ್ಥಿಗಳು ಜೀವನದಲ್ಲಿ ಒತ್ತಡ ನಿರ್ವಹಿಸುವ ಕಲೆ ರೂಢಿಸಿಕೊಳ್ಳಬೇಕು. ಕೇವಲ ಪರೀಕ್ಷೆಯಲ್ಲಿ ಪಾಸಾದರೆ ಸಾಲದು, ಜೀವನದ ಪರೀಕ್ಷೆಯಲ್ಲಿ ಯಶಸ್ಸು ಕಾಣಬೇಕು ಎಂದು ಪ್ರಾಚಾರ್ಯ ಎಸ್.ಎಸ್.ಕೆಂಚನಗೌಡರ ಹೇಳಿದರು.