ಗದಗ: ಕರ್ನಾಟಕ ಗೃಹ ಮಂಡಳಿ ಅಧಿಕಾರಿಯನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ಇಂದು ಗದಗನ ಗೃಹ ಮಂಡಳಿ ಕಚೇರಿಯಲ್ಲಿ ನಡೆದಿದೆ.

ಕರ್ನಾಟಕ ಗೃಹ ಮಂಡಳಿಯಿಂದ ಪ್ಲಾಟ್ ಹರಾಜು ಪ್ರಕ್ರಿಯೆ ನಡೆದಿದ್ದು, 40 ಪ್ಲಾಟ್ ಹರಾಜು ಪ್ರಕ್ರಿಯೆಗೆ ಸಾರ್ವಜನಿಕರು ವಿರೋಧ ವ್ಯಕ್ತ ಪಡಿಸಿದ್ದಾರೆ. ಗೃಹ ಮಂಡಳಿಯಿಂದ ಪ್ರತಿ ಚದುರ ಅಡಿಗೆ 550 ರೂ ನಿಂದ ಹರಾಜು ಆರಂಭವಾಗಿದ್ದು, ಮೂಲಭೂತ ಸೌಲಭ್ಯಗಳಿಲ್ಲದೇ ಹರಾಜು ನಡೆಸುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಒಂದು ಪ್ಲಾಟ್ ಗೆ 50 ಸಾವಿರ ಕಟ್ಟಿದ್ರೆ ಮಾತ್ರ ಹರಾಜು ಪ್ರಕ್ರಿಯೇಯಲ್ಲಿ ಅವಕಾಶ ನೀಡಲಾಗಿತ್ತು. ಹೀಗಾಗಿ ಗೃಹ ಮಂಡಳಿಯ ಸಹಾಯಕ ಪ್ರಧಾನ ವ್ಯವಸ್ಥಾಪಕ ಅಧಿಕಾರಿ ಎಸ್.ಎನ್ ಜೋಷಿ ಅವರಿಗೆ ಸಾರ್ವಜನಿಕರು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡರು.
ಇನ್ನು ಹರಾಜು ಪ್ರಕ್ರಿಯೆಯಿಂದ ಗೃಹ ಮಂಡಳಿಯಲ್ಲಿ ಎಲ್ಲಿ ನೋಡಿದರು ಜನವೋ ಜನ ಎನ್ನುವಂತಿತ್ತು. 40 ಪ್ಲಾಟ್ ಗೆ ನೂರಾರು ಜನ ಜಮಾವಣೆಗೊಂಡಿದ್ದರು. ಇದರಿಂದ ಸಾಮಾಜಿಕ ಅಂತರ, ಮಾಸ್ಕ್, ಸೈನಿಟೆಜರ್ ವ್ಯವಸ್ಥೆ ಎಲ್ಲವೂ ಮಾಯವಾಗಿತ್ತು.

Leave a Reply

Your email address will not be published. Required fields are marked *

You May Also Like

ನರೆಗಲ್ಲ: ಅತೀಯಾದ ಮಳೆಯಿಂದ ಕೊಳೆಯುತ್ತಿದೆ ಈರುಳ್ಳಿ

ಹೋಬಳಿಯ ಎಲ್ಲೇಡೆ ಹಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರಿಂದ ಕೃಷಿ ಚಟುವಟಿಕೆಗೆ ತಿವ್ರ ಹಿನ್ನೆಡೆಯಾಗಿದೆ.

ಗದಗನಲ್ಲಿ ಎಸಿಬಿ ದಾಳಿ ಬಿಜೆಪಿ ಯುವ ಮುಖಂಡ ಬಂಧನ

ಗದಗ: ರಾಯಲ್ ವಿಲ್ಲಾ ಹೋಟೆಲ್ ನಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ನರ್ಸಿಂಗ್ ಹುದ್ದೆ ಕೊಡೆಸುತ್ತೇನೆಂದು ಮಹಿಳೆಯೊಬ್ಬರಿಂದ ಹಣ…

ಕೋಟೆನಾಡಿನಲ್ಲಿ ಕೇಂದ್ರದ ವಿರುದ್ಧ ಕೈ ಪ್ರತಿಭಟನೆ

ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಕಾಯ್ದೆ, ಪೆಟ್ರೋಲ್-ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಪಟ್ಟಣದಲ್ಲಿ 400ಕ್ಕೂ ಅಧಿಕ ಟ್ರಾಕ್ಟರ್ ರ‍್ಯಾಲಿ ನಡೆಸುವ ಮೂಲಕ ಕಾಂಗ್ರೆಸ್ ಪಕ್ಷ ದಿಂದ ಪ್ರತಿಭಟನೆ ನಡೆಸಲಾಯಿತು.

ಕುರಿಗಾಹಿ ಮಹಿಳೆಯ ಮೇಲೆ ಅತ್ಯಾಚಾರ, ಕೊಲೆ ಖಂಡಿಸಿ: ವಿಧಾನಸೌಧ ಚಲೋ

ಉತ್ತರಪ್ರಭ ಸುದ್ದಿಗದಗ: ರಾಜ್ಯದಲ್ಲಿ ನಡೆಯುತ್ತಿರುವ ಕುರಿಗಾಹಿಗಳ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಹಾಗೂ ಅವರಿಗೆ ಭದ್ರತೆಯನ್ನು ಕಲ್ಪಿಸಬೆಕೇಂದು…