ಗದಗ : ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಖಕ್ಕೆ ಮಾಸ್ಕ ಧಾರಣೆ, ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳುವ, ಗುಂಪು ಸೇರದಿರುವ ಮುಂತಾದ ನಿರ್ದೇಶನಗಳನ್ನು ಉಲ್ಲಂಘಿಸಿದ  ಗದಗ ಬೆಟಗೇರಿ ವ್ಯಾಪ್ತಿಯ ಸಂಘ, ಸಂಸ್ಥೆ, ಹೊಟೆಲ್‍ಗಳ ವಿರುದ್ದ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ತಿಳಿಸಿದ್ದಾರೆ.

ಬೆಟಗೇರಿ ಎಸ್.ಎಸ್.ಕೆ. ವ್ಯಾಯಾಮ ಶಾಲೆ, ಅಕ್ಕಿಸ್ ಫಿಟ್ನೆಸ್ ಜಿಮ್, ನಿಸರ್ಗ ಬಡಾವಣೆಯ ಖಾನ್ಸ್  ಜಿಮ್, ಧನುಷ ಹೊಟೆಲ್, ಕಳಸಾಪೂರ ರಸ್ತೆಯ ಇಕ್ವಿನಾಕ್ಸ ಜಿಮ್, ಗದಗ ಶಹರದ ನ್ಯೂ ಆನಂದ ಮಾಂಸಾಹಾರಿ ಹೊಟೆಲ್ ಇವುಗಳು ಹಾಗೂ  ಲಕ್ಷ್ಮೇಶ್ವರದ ಬಾಲೆಹೊಸೂರು ಗ್ರಾಮದ ಘಂಟಿಚೋರ್  ಸಮಾಜದವರು ಗದಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರತಿಭಟನೆ ಸಮಯದಲ್ಲಿ  ಕೊವಿಡ್-19 ಸೋಂಕು ನಿಯಂತ್ರಣ ನಿಯಮ ಪಾಲನೆಯಲ್ಲಿ ನಿರ್ಲಕ್ಷ್ಯ ತೋರಿದ್ದು ಇವರೆಲ್ಲರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಇನ್ನು ಮುಂದೆಯೂ ಸಹ ಜಿಲ್ಲೆಯ ಸಾರ್ವಜನಿಕರು ಕೇಂದ್ರ ಹಾಗೂ ರಾಜ್ಯ ಸರಕಾರದ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದ ನಿರ್ದೇಶನಗಳನ್ನು ನಿರ್ಲಕ್ಷಿಸಿ ಪಾಲಿಸಲು ವಿಫಲವಾದಲ್ಲಿ ಸಂಬಂಧಪಟ್ಟವರ ವಿರುದ್ದ ಪ್ರಕರಣಗಳನ್ನು ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಕೊಳ್ಳಲಾಗುವುದು ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು  ಎಚ್ಚರಿಕೆ ನೀಡಿರುತ್ತಾರೆ.  

Leave a Reply

Your email address will not be published. Required fields are marked *

You May Also Like

ಮಾಲ್, ಹೋಟೆಲ್ ಜೂ. 21 ರಿಂದ ತೆರೆಯಲು ತಾಂತ್ರಿಕ ಸಮಿತಿ ಸಲಹೆ ಒಪ್ಪಿಗೆ? ಸಲಹೆಗಳೇನ್ನು

ಕೊರೊನಾ ಸೋಂಕು ಕಡಿಮೆಯಾದ ಹಿನ್ನೆಲೆಯಲ್ಲಿ ಜನರು ಗುಂಪು ಗುಂಪು ಸೇರದಂತೆ ಮಾಲ್, ಹೋಟೆಲ್, ಇನ್ನಿತರ ಆರ್ಥಿಕ ಚಟುವಟಿಗಳನ್ನು ಆರಂಭಿಸಬಹುದು ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರಕಾರಕ್ಕೆ ಸಲಹೆ ನೀಡಿದೆ.

ಗದಗ ಜಿಲ್ಲೆಯ ಪಶುವೈದ್ಯರ ಕೊರತೆ ಕುರಿತು ಪರಿಷತ್ತಿನಲ್ಲಿ ಪ್ರತಿಧ್ವನಿ

ಜಿಲ್ಲೆಯಲ್ಲಿ ಪಶು ಚಿಕಿತ್ಸಾಲಯಕ್ಕೆ ವೈದ್ಯರ ಕೊರತೆಯಿದ್ದು, ಖಾಲಿ ಹುದ್ದೆ ಭರ್ತಿಗೆ ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ.ಸಂಕನೂರ ಕೋರಿದರು.

ಸರ್ಕಾರ ಲಿಂ.ತೋಂಟದ ಶ್ರೀಗಳ ಹೆಸರಲ್ಲಿ ಭಾವೈಕ್ಯತೆ ಭವನ ನಿರ್ಮಿಸಲಿ: ಮಲ್ಲಿಕಾರ್ಜುನ ಐಲಿ ಒತ್ತಾಯ

ರಾಜ್ಯ ಸರ್ಕಾರ ಪೂಜ್ಯ ಲಿಂ.ಡಾ.ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಹೆಸರಿನಿಂದ ಶ್ರೀಗಳ ಜನ್ಮದಿನವಾದ ಫೆ.21 ಈ ದಿನವನ್ನು ಭಾವೈಕ್ಯತೆ ದಿನವೆಂದು ಆಚರಿಸಬೇಕು. ಹಾಗೂ ಪ್ರತಿ ವರ್ಷ ಶ್ರೀಗಳ ಹೆಸರಿನಲ್ಲಿ ಭಾವೈಕ್ಯತೆ ಪ್ರಶಸ್ತಿ ನೀಡಬೇಕು ಎಂದು ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಐಲಿ ಒತ್ತಾಯಸಿದ್ದಾರೆ.

ಹಾನಗಲ್ ಬೈ ಎಲಕ್ಷನ್ ನಲ್ಲಿ ಕಾಂಗ್ರಸ್ ಗೆ ಜಯ

ಹಾನಗಲ್: ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ 7598 ಮತಗಳ ಅಂತರದಿಂದ ಗೆಲುವು.ಅಂತಿಮವಾಗಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ…