ಲಾಕ್ ಡೌನ್ ಹಿನ್ನೆಲೆ ಜೂನ್ 1 ಕ್ಕೆ ಆರಂಭವಾಗಬೇಕಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಈವರೆಗೆ ಆರಂಭವಾಗಿಲ್ಲ. ಇದರಿಂದ ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ತೀವ್ರ ತೊಂದರೆಗೀಡಾಗಿದ್ದಾರೆ. ತಮ್ಮ ಸಂಕಷ್ಟವನ್ನು ಹೇಳಿಕೊಂಡ ಶಿಕ್ಷಕಿಯರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ತಮಗೂ ಕೂಡ ಸಹಾಯ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಜೊತೆಗೆ ಮಾದ್ಯಮಗಳು ತಮ್ಮನ್ನು ಕಾಣುವ ರೀತಿಯ ಬಗ್ಗೆಯೂ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಖಾಸಗಿ ಶಾಲಾಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರ ಗೋಳುಗಳನ್ನು ಹೇಳಿಮುಗಿಸಲು ಸಾಧ್ಯವಿಲ್ಲ. ಅದರಲ್ಲೂ ಕೊರೊನಾ ನಂತರದ ಅವರ ಪರಿಸ್ಥಿತಿ ಶೋಚನೀಯ ಹಂತ ತಲುಪಿದೆ. ಆದರೆ, ಇವರ ಸಮಸ್ಯೆಗಳ ಕುರಿತು ಗಮನ ಹರಿಸಬೇಕಿದ್ದ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್, ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಮೌನಕ್ಕೆ ಶರಣಾಗಿದ್ದಾರೆ. ಇವರ ಸಮಸ್ಯೆಯನ್ನು ಆಲಿಸುವವರು ಯಾರು ಎಂಬ ಪ್ರಶ್ನೆ ಇದೀಗ ಎದುರಾಗಿದೆ.

ಶಿಕ್ಷಕಿಯೊಬ್ಬರು ಖಾಸಗಿ ಶಾಲಾಕಾಲೇಜುಗಳಲ್ಲಿ ನಿರ್ವಹಿಸುತ್ತಿರುವವರ ಸಮಸ್ಯೆಗಳನ್ನು ಬಿಚ್ಚಿಟ್ಟಿದ್ದಾರೆ. ಇವರ
ಗೋಳು ಸರ್ಕಾರ, ಅಧಿಕಾರಿಗಳು, ಶಿಕ್ಷಣ ಇಲಾಖೆಗೆ ಶೀಘ್ರದಲ್ಲೇ ಮುಟ್ಟಬೇಕಿದೆ. ವಿಡಿಯೋದಲ್ಲಿ ಮಾಧ್ಯಮಗಳು ಎಲ್ಲದಕ್ಕೂ ಕೊಟ್ಟ ಮಾನ್ಯತೆಯ ಜೊತೆಗೆ, ನಮ್ಮ ಸಮಸ್ಯೆಗಳನ್ನು ಕುರಿತು ಏಕೆ ಬೆಳಕು ಚೆಲ್ಲುತ್ತಿಲ್ಲ? ಎಂದು ಪ್ರಶ್ನಿಸಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಬೆವರಿನ ಫಲದಲ್ಲಿ ಬೇರೆಯವರ ಸಂಕಷ್ಟಕ್ಕೂ ಸ್ಪಂದಿಸಿದ ರೋಣದ ಹೂಗಾರ ಮೂಕಪ್ಪ

ರೋಣ: ಕೊಟ್ಟಿದ್ದು ತನಗೆ, ಬಚ್ಚಿಟ್ಟದ್ದು ಪರರಿಗೆ, ಕೊಟ್ಟು ಕೆಟ್ಟಿತೆನಬೇಡ, ಕೊಟ್ಟು ಕುದಿಯಲು ಬೇಡ, ಕೊಟ್ಟು ಹಂಗಿಸಬೇಡ… ಹೀಗೆ ದಾನದ ಬಗ್ಗೆ 12ನೇ ಶತಮಾನದಲ್ಲಿ ಶರಣರು ಸಾರಿ ಹೇಳಿದ್ದಾರೆ. ಆದರೆ ಪಟ್ಟಣದ ವ್ಯಕ್ತಿಯೊಬ್ಬರು ದುಡಿದ ಬೆವರಿನ ಫಲದಲ್ಲಿ ಸಂಕಷ್ಟದಲ್ಲಿರುವವರಿಗೆ, ನೊಂದವರಿಗೆ ನೆರವು ನೀಡಿ, ಶರಣರ ನಿಜ ನಡೆಯನ್ನು ಪಾಲಿಸುವ ಮೂಲಕ ಮಾದರಿಯಾಗಿದ್ದಾರೆ.

ರಾಯಚೂರ ನ್ಯಾಯಾಧೀಶರ ವಜಾಗೊಳಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

ಮುಳಗುಂದ : ಗಣರಾಜ್ಯೋತ್ಸವ ದಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ಸಾಂವಿಧಾನಿಕ ಹುದ್ದೆಗೆ ಅಪಮಾನ ಮಾಡಿದ…

ಆಲಮಟ್ಟಿಯ ಮರಿಮಟ್ಟಿಯಲ್ಲಿ ಜಾನಪದ ಕಲಾವಿದರಿಗೆ ಬಟ್ಟೆ ವಿತರಣಾ ಸಮಾರಂಭ ಜರುಗಿತು

ಉತ್ತರಪ್ರಭಆಲಮಟ್ಟಿ: ಜಾನಪದ ಕಲೆಗಳು ನಮ್ಮ ಪರಂಪರೆಯ ಜೀವಾಳವಾಗಿದ್ದು ಅವು ಮೌಲ್ಯಾಧಾರಿತ ಸಂಸ್ಕೃತಿಯ ಪ್ರತೀಕವಾಗಿವೆ, ಎಂದು ಕನ್ನಡ…

ಯಾವುದೇ ಕ್ಷಣದಲ್ಲಾದರೂ ವಿಜಯ್ ಮಲ್ಯ ಅರೆಸ್ಟ್!!

ವಿದೇಶದಲ್ಲಿ ತಲೆಮರಿಸಿಕೊಂಡಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ಅವರನ್ನು ಶೀಘ್ರದಲ್ಲೇ ಭಾರತಕ್ಕೆ ಕರೆತರಲಾಗುವುದು.