ಬಾಗಲಕೋಟೆ: ನಗರದ ರೋಟರಿ ಕ್ಲಬ್ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಇಂದು ಹಿರಿಯ ಪತ್ರಕ ರ್ತರಾದ ಪ್ರಕಾಶ ಬಾಳಕ್ಕನವರ ಹಾಗೂ ಮಹೇಶ ಅಂಗಡಿ ಅವರನ್ನು ಸನ್ಮಾನಿಸಿತು.
ವಿದ್ಯಾಗಿರಿಯ “ಸಂಜೆ ದರ್ಶನ” ಪತ್ರಿಕಾ ಕಾರ್ಯಾಲ ಯದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪತ್ರಿಕಾ ರಂಗದಲ್ಲಿ ಅನುಪಮ ಸೇವೆ ಸಲ್ಲಿಸಿದ ಇಬ್ಬರನ್ನು ರೋಟರಿ ಕ್ಲಬ್‍ನ ನೂತನ ಅಧ್ಯಕ್ಷ ಸಿ.ಎಚ್.ಕಟಗೇರಿ, ಕಾರ್ಯದರ್ಶಿ ಸೋಮು ಪರಾಂಡೆ, ಖಜಾಂಚಿ ಮಲ್ಲಿಕಾರ್ಜುನ ಹದ್ಲಿ ಅವರುಗಳು ಸನ್ಮಾನಿಸಿ, ಗೌರವಿಸಿದರು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್‍ನ ನಿರ್ದೇಶಕರಾದ ಆರ್.ಎಂ.ಜಡಿಮಠ, ಪ್ರಲ್ಹಾದ ಹುಯಿಲಗೋಳ, ಸಂತೋಷ ಪಾಟೀಲ, ಸುರೇಂದ್ರಕುಮಾರ್, ವಿಶ್ವನಾಥ ವೈಜಾಪೂರ, ಸಂತೋಷ ನಾವಲಗಿ, ಜಗದೀಶ ಪಾಟೀಲ, ಸಂತೋಷ ಮುರನಾಳ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 12 ಕೊರೋನಾ ಪಾಸಿಟಿವ್ ಕೇಸ್ ಪತ್ತೆ

ಕೊರೋನಾ ಸೋಂಕಿಗೆ ಸಂಬಂಧಪಟ್ಟಂತೆ ಇವತ್ತಿನ ಅಂಕಿಸಂಖ್ಯೆಯನ್ನು ಗಮನಿಸಿದರೆ ತುಸು ಸಮಾಧಾನವೇ ಸರಿ.

ರಾಜ್ಯದಲ್ಲಿಂದು 416 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 416 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 8697…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಪ್ರತಿ ಕುಟಂಬಕ್ಕೂ 1 ಕೆಜಿ ಬೆಲ್ಲ!

ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಪಡಿತರ ಕಾರ್ಡ್ ಹೊಂದಿರುವ ಪ್ರತಿ ಕುಟುಂಬಕ್ಕೂ 1 ಕೆಜಿ ಬೆಲ್ಲ ಕೊಡಲು ಕ್ರಮ ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಪತ್ರ ಬರೆದಿದ್ದಾರೆ.

ಪೋಲಿಸ್ ದಾಳಿ : ಕಲ್ಲುಗಣಿ ಸ್ಪೋಟಕ ವಸ್ತುಗಳು ವಶಕ್ಕೆ, ಓರ್ವನ ಬಂಧನ

ಮುಳಗುಂದ ಸಮೀಪದ ಶೀತಾಲಹರಿ ಗ್ರಾಮದ ಹೊರವಲಯದ ಶೆಡ್ಡವೊಂದರ ಮೇಲೆ ಗದಗ ಗ್ರಾಮೀಣ ಸಿಪಿಐ ರವಿಕುಮಾರ ಕಪ್ಪತನವರ ನೇತೃತ್ವದ ತಂಡ ದಾಳಿ ನಡೆಸಿ ಅಪಾರ ಪ್ರಮಾಣದ ಸ್ಪೋಟಕ ವಸ್ತುಗಳು ಸೇರಿದಂತೆ ಓರ್ವ ವ್ಯಕ್ತಿಯನ್ನ ವಶಕ್ಕೆ ಪಡೆದಿರುವ ಘಟನೆ ಗುರುವಾರ ನಡೆದಿದೆ.