ಗದಗ: ರಾಜ್ಯ ಸರ್ಕಾರದ ನಿರ್ದೇಶನ ರೀತ್ಯ ಗದಗ ಜಿಲ್ಲೆಯಾದ್ಯಂತ  ಅಗಸ್ಟ 2 ರ ಮಧ್ಯರಾತ್ರಿಯವರೆಗೆ ಪ್ರತಿದಿನ ರಾತ್ರಿ 8 ರಿಂದ ಮುಂಜಾನೆ 5 ಗಂಟೆಯವರೆಗೆ ಅನಿವಾರ್ಯ ಕಾರಣ ಹೊರತುಪಡಿಸಿ ಎಲ್ಲ ವ್ಯಕ್ತಿಗಳ ಸಂಚಾರವನ್ನು ನಿಷೇಧಿಸಿ ಹಾಗೂ ಈ ಅವಧಿಯಲ್ಲಿನ ಎಲ್ಲ ರವಿವಾರಗಳಂದು ಸಂಪೂರ್ಣ ಲಾಕಡೌನ ವಿಧಿಸಿ ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅವರು ಆದೇಶ ಹೊರಡಿಸಿದ್ದಾರೆ.

ಕೋವಿಡ್-19 ಸೋಂಕು ನಿಯಂತ್ರಣದ ಪರಿಣಾಮಕಾರಿ ಅನುಷ್ಟಾನಕ್ಕಾಗಿ ಹಾಗೂ ಸಾರ್ವಜನಿಕ ಆರೊಗ್ಯ ಹಿತ ದೃಷ್ಟಿಯಿಂದ ಸಾಂಕ್ರಾಮಿಕ ರೋಗ ಕಾಯ್ದೆ ಹಾಗೂ ವಿಪತ್ತು ನಿರ್ವಹಣೆ ಕಾಯ್ದೆಯಡಿ ಹೊರಡಿಸಿರುವ ಈ ಆದೇಶ ಉಲ್ಲಂಘಿಸಿದವರ ಮೇಲೆ ಭಾರತೀಯ ದಂಡ ಸಂಹಿತೆ 188ರ ಹಾಗೂ ವಿಪತ್ತು ನಿರ್ವಹಣೆ ಕಾಯ್ದೆ ರೀತ್ಯ ಕ್ರಮ ಜರುಗಿಸಲಾಗುವುದು.  ಇದಲ್ಲದೇ 65 ವರ್ಷ ಮೀರಿದ  ಹಿರಿಯರು, 10 ವರ್ಷದೊಳಗಿನ ಮಕ್ಕಳ, ರೋಗಗ್ರಸ್ಥ ವ್ಯಕ್ತಿ ಗರ್ಭಿಣಿಯರ ಅನಿವಾರ್ಯ ಕಾರಣ ಕೊರತುಪಡಿಸಿ ಮನೆಯಲ್ಲಿಯೇ ಇರುವಂತೆ ಆದೇಶಿಸಲಾಗಿದೆ.  ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ   ಅಧಿಕಾರಿಗಳು, ಉಪವಿಭಾಗಾಧಿಕಾರಿಗಳು ಎಲ್ಲ ತಹಶೀಲ್ದಾರರು, ಸಂಬಂಧಿತ ಇಲಾಖೆಗಳ ಎಲ್ಲ ಅಧಿಕಾರಿಗಳು ಈ ಆದೇಶ ಪಾಲನೆ ಆಗುವಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಿಮೆಂಟ್ ಮಿಕ್ಸರ್ ಟ್ರಕ್ ಮೂಲಕ ಪ್ರಯಾಣ – 18 ಜನರ ಬಂಧನ!

ಕೊರೊನಾ ವೈರಸ್ ನ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಹಲವರು ಮನೆ ತಲುಪಲು ಆಗದೆ ತಾವು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಸಿಲುಕಿದ್ದಾರೆ. ಹೀಗೆ ಸಿಲುಕಿ ಹತಾಶರಾಗಿದ್ದ ಕಾರ್ಮಿಕರ ಗುಂಪೊಂದು ಮಹಾರಾಷ್ಟ್ರದಿಂದ ಲಖನೌಗೆ ತೆರಳುತ್ತಿದ್ದ ಸಿಮೆಂಟ್ ಮಿಕ್ಸರ್ ಟ್ರಕ್‌ ಮೂಲಕ ಪ್ರಯಾಣಿಸಲು ತೆರಳಿ ಸಿಕ್ಕಿ ಬಿದ್ದಿದ್ದಾರೆ.

ಅರಣ್ಯ ಸಂರಕ್ಷಣಾಧಿಕಾರಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ನಡೆಸಲಿರುವ ಕರ್ನಾಟಕ  ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ…

ಗದಗ ಜಿಲ್ಲಾಡಳಿತಕ್ಕೆ 40 ಲಕ್ಷ ವೈದ್ಯಕೀಯ ಸಾಮಾಗ್ರಿ ನೆರವು ನೀಡಿದ ಐಪಿಎಸ್ ಅಧಿಕಾರಿ ಸಜ್ಜನ್.

ಗದಗ: ಮೂಲತಃ ಗದಗ ಜಿಲ್ಲೆಯವರಾದ ತೆಲಂಗಾಣ ರಾಜ್ಯದ ಸೈಬರ್ ಪೋಲಿಸ್ ಆಯುಕ್ತರಾಗಿರುವ ಹಿರಿಯ ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನರ ಅವರು ಕೋವಿಡ್ ಸೋಂಕು ನಿಯಂತ್ರಣಕ್ಕೆ ಅಗತ್ಯವಾಗಿರುವ ಅಂದಾಜು 40 ಲಕ್ಷ ಮೌಲ್ಯದ ವೈಧ್ಯಕೀಯ ಔಷಧಿ ಸಾಮಾಗ್ರಿಗಳನ್ನು ಗದಗ ಜಿಲ್ಲಾಡಳಿತಕ್ಕೆ ಕಳುಹಿಸುವ ಮೂಲಕ ನೆರವು ನೀಡಿದ್ದಾರೆ.