ಗದಗ: ರಾಜ್ಯ ಸರ್ಕಾರದ ನಿರ್ದೇಶನ ರೀತ್ಯ ಗದಗ ಜಿಲ್ಲೆಯಾದ್ಯಂತ  ಅಗಸ್ಟ 2 ರ ಮಧ್ಯರಾತ್ರಿಯವರೆಗೆ ಪ್ರತಿದಿನ ರಾತ್ರಿ 8 ರಿಂದ ಮುಂಜಾನೆ 5 ಗಂಟೆಯವರೆಗೆ ಅನಿವಾರ್ಯ ಕಾರಣ ಹೊರತುಪಡಿಸಿ ಎಲ್ಲ ವ್ಯಕ್ತಿಗಳ ಸಂಚಾರವನ್ನು ನಿಷೇಧಿಸಿ ಹಾಗೂ ಈ ಅವಧಿಯಲ್ಲಿನ ಎಲ್ಲ ರವಿವಾರಗಳಂದು ಸಂಪೂರ್ಣ ಲಾಕಡೌನ ವಿಧಿಸಿ ಗದಗ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಅವರು ಆದೇಶ ಹೊರಡಿಸಿದ್ದಾರೆ.

ಕೋವಿಡ್-19 ಸೋಂಕು ನಿಯಂತ್ರಣದ ಪರಿಣಾಮಕಾರಿ ಅನುಷ್ಟಾನಕ್ಕಾಗಿ ಹಾಗೂ ಸಾರ್ವಜನಿಕ ಆರೊಗ್ಯ ಹಿತ ದೃಷ್ಟಿಯಿಂದ ಸಾಂಕ್ರಾಮಿಕ ರೋಗ ಕಾಯ್ದೆ ಹಾಗೂ ವಿಪತ್ತು ನಿರ್ವಹಣೆ ಕಾಯ್ದೆಯಡಿ ಹೊರಡಿಸಿರುವ ಈ ಆದೇಶ ಉಲ್ಲಂಘಿಸಿದವರ ಮೇಲೆ ಭಾರತೀಯ ದಂಡ ಸಂಹಿತೆ 188ರ ಹಾಗೂ ವಿಪತ್ತು ನಿರ್ವಹಣೆ ಕಾಯ್ದೆ ರೀತ್ಯ ಕ್ರಮ ಜರುಗಿಸಲಾಗುವುದು.  ಇದಲ್ಲದೇ 65 ವರ್ಷ ಮೀರಿದ  ಹಿರಿಯರು, 10 ವರ್ಷದೊಳಗಿನ ಮಕ್ಕಳ, ರೋಗಗ್ರಸ್ಥ ವ್ಯಕ್ತಿ ಗರ್ಭಿಣಿಯರ ಅನಿವಾರ್ಯ ಕಾರಣ ಕೊರತುಪಡಿಸಿ ಮನೆಯಲ್ಲಿಯೇ ಇರುವಂತೆ ಆದೇಶಿಸಲಾಗಿದೆ.  ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ   ಅಧಿಕಾರಿಗಳು, ಉಪವಿಭಾಗಾಧಿಕಾರಿಗಳು ಎಲ್ಲ ತಹಶೀಲ್ದಾರರು, ಸಂಬಂಧಿತ ಇಲಾಖೆಗಳ ಎಲ್ಲ ಅಧಿಕಾರಿಗಳು ಈ ಆದೇಶ ಪಾಲನೆ ಆಗುವಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗಜೇಂದ್ರಗಡದಲ್ಲಿ ಮುಷ್ಕರ: ಪೊಲೀಸ್-ಪ್ರತಿಭಟನಾಕಾರರ ಮದ್ಯೆ ಮಾತಿನ ಚಕಮಕಿ

ರೈತ, ಕಾರ್ಮಿಕ, ವಿದ್ಯುತ್, ಎಪಿಎಂಸಿ ಕಾಯ್ದೆ, ಬೆಲೆ ನಿಯಂತ್ರಣ ಕಾಯ್ದೆ, ಭೂ ಸುಧಾರಣೆ ಕಾಯ್ದೆ ಸೇರಿದಂತೆ ಜನ ವಿರೋದಿ ನೀತಿ ಖಂಡಿಸಿ ರಾಷ್ಟ್ರವ್ಯಾಪಿ, ಕಾರ್ಮಿಕ, ರೈತ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿರುವ ಮುಷ್ಕರದ ಅಂಗವಾಗಿ ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಸತ್ಯಾಗ್ರಹ

ಉತ್ತರಪ್ರಭ ಗದಗ: ಅತಿಥಿ ಉಪನ್ಯಾಸಕರ ಖಾಯಂ ಮತ್ತು ಸೇವಾ  ಭದ್ರತೆಗಾಗಿ  ಜಿಲ್ಲಾಡಳಿತ ಭವನದ ಮುಂದೆ ಅನಿರ್ದಿಷ್ಟಾವಧಿ…

ಹೆಂಡತಿಯನ್ನು ಅಮಾನುಷ್ಯವಾಗಿ ಮಚ್ಚಿನಿಂದ ಹಲ್ಲೇ ಮಾಡಿದ ಆರೋಪಿಯ ಬಂಧನ

ಉತ್ತರಪ್ರಭ ಗದಗ: ಮಾರ್ಚ 11ರಂದು ಗದಗ ನಗರದ ಲಾಯನ್ಸ್ ಸ್ಕೂಲ್ ಸಮೀಪದ ಆಟದ ಮೈದಾನ ಒಂದರಲ್ಲಿ…

ಯೋಗಿಶ್ ಗೌಡ ಹತ್ಯೆ ಪ್ರಕರಣ: ಬೆಂಗಳೂರಿಗೆ ಶಿಫ್ಟ್

ಜಿಲ್ಲಾ ಪಂಚಾಯತಿ ಸದಸ್ಯ ಯೋಗಿಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಮೇಲಿನ ಸಾಕ್ಷನಾಶ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟಗೆ ಶಿಫ್ಟ್ ಮಾಡಲಾಗಿದೆ.