ಗದಗ: ಜಿಲ್ಲೆಯ ಮುಂಡರಗಿ ತಾಲೂಕಿಗೆ ಖಾಲಿ ಇದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಹುದ್ದೆಗೆ ಯುವರಾಜ್ ನಾಯ್ಕ್ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ಶಿರಹಟ್ಟಿ ತಾಲೂಕಿಗೆ ವೀರಯ್ಯ ಸಾಲಿಮಠ ಅವರ ಜಾಗಕ್ಕೆ ಆರ್.ಎಸ್.ಬುರಡಿ ಅವರನ್ನು ವರ್ಗಾಯಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿನ ಕಾರ್ಯದರ್ಶಿ ಎಂ.ಧನಂಜಯ ಇಂದು ಆದೇಶಿಸಿದ್ದಾರೆ.
ಎಸ್.ಎಸ್.ಎಲ್.ಸಿ ಪರೀಕ್ಷೆಯ ಮುಗಿದ ನಂತರ ಶಿರಹಟ್ಟಿ ಬಿಇಓ ಕರ್ತವ್ಯಕ್ಕೆ ಹಾಜರಾಗಬೇಕಿದ್ದು, ಮುಂಡರಗಿ ಬಿಇಓ ಕೂಡಲೇ ಕರ್ತವ್ಯಕ್ಕೆ ಹಾಜರಾಗಲು ಆದೇಶದಲ್ಲಿ ತಿಳಿಸಲಾಗಿದೆ.