ಗದಗ: ಅವಧಿ ಮುಗಿದ್ರು ಚೇರಿನ ವ್ಯಾಮೋಹ ಮುಗಿಲ್ಲವೇ..? ಆಡಳಿತಾಧಿಕಾರಿ ನೇಮಕವಾದ್ರು, ಅಧ್ಯಕ್ಷ ಪದವಿಯ ಅವಧಿ ಮುಗಿದಿರೋದು ನೆನಪಿಲ್ಲವೇ..? ಹೀಗೊಂದು ವ್ಯಂಗ್ಯ ಪ್ರಶ್ನೆಗಳು ಗದಗ ತಾಲೂಕಿನ ಲಕ್ಕುಂಡಿ ಗ್ರಾಮ ಪಂಚಾಯತಿ ಅಧ್ಯಕ್ಷರ ವರ್ತನೆಯಿಂದ ಉದ್ಭವವಾಗಿವೆ. ಈಗಾಗಲೇ ಲಕ್ಕುಂಡಿ ಗ್ರಾಮ ಪಂಚಾಯತಿಯ ಆಡಳಿತ ಮಂಡಳಿಯ ಅವಧಿ ಪೂರ್ಣಗೊಂಡಿದೆ. ಸದ್ಯ ಕೊರೊನಾ ಹಿನ್ನೆಲೆ ಚುನಾವಣೆ ಪ್ರಕ್ರಿಯೇ ಮುಂದೂಡಲಾಗಿದೆ. ಈಗಾಗಲೇ ಆಡಳಿತಾಧಿಕಾರಿ ನೇಮಕವಾಗಿದ್ದು ಲಕ್ಕುಂಡಿ ಗ್ರಾಮ ಪಂಚಾಯತಿಗೆ ಗದಗ ತಾಲೂಕಿನ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ. ಆದ್ರೆ ಆಡಳಿತಾಧಿಕಾರಿ ಕರ್ತವ್ಯಕ್ಕೆ ಹಾಜರಾಗಿ ಹೋದ ಮೇಲೂ ಗ್ರಾಮ ಪಂಚಾಯತಿ ಅಧ್ಯಕ್ಷ ಎಸ್.ಎಮ್.ಬೂದಿಹಾಳ್ ಪಂಚಾಯತಿಯಲ್ಲಿ ಅಧ್ಯಕ್ಷರ ಕೊಠಡಿಯಲ್ಲಿ ಅಧ್ಯಕ್ಷರ ಚೇರ್ ನಲ್ಲಿ ಕುಳಿತು ಜನರೊಂದಿಗೆ ಸಂಭಾಷಣೆ ನಡೆಸಿದ್ದಾರೆ. ಇದು ಗ್ರಾಮದ ಬಹುತೇಕರ ಆಕ್ಷೇಪಕ್ಕೂ ಕಾರಣವಾಗಿದೆ. ಅವಧಿ ಮುಗಿದು ಆಡಳಿತಾಧಿಕಾರಿ ನೇಮಕವಾದ ಮೇಲೂ ಅಧ್ಯಕ್ಷರಿಗೆ ಚೇರಿನ ವ್ಯಾಮೋಹ ಮುಗಿದಿಲ್ಲವೇ ಎಂದು ಜನ ವ್ಯಂಗ್ಯವಾಡುತ್ತಿದ್ದಾರೆ.
ಈ ಕುರಿತು ಗ್ರಾಮಸ್ಥ ಉಸ್ಮಾನಲಿ ನಮಾಜಿ, ಆಡಳಿತಾಧಿಕಾರಿಗಳ ನೇಮಕವಾದ ಮೇಲೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದವರು ಈ ರೀತಿ ಚೇಂಬರ್ ನಲ್ಲಿ ಅಧ್ಯಕ್ಷರ ಚೇರ್ ಗೆ ಕಳಿತುಕೊಳ್ಳುವುದು ತಪ್ಪು ಎಂದು ಸ್ವತ: ಅಧಿಕಾರಿಗಳು ಹೇಳಿದ್ದಾರೆ. ಅವಧಿ ಮುಗಿದ ಮೇಲೂ ಅಧ್ಯಕ್ಷರ ಈ ವರ್ತನೆ ಆಡಳಿತ ವಿರೋಧಿಯಾಗಿದೆ ಎಂದು ಆರೋಪಿಸಿದರು.

Leave a Reply

Your email address will not be published. Required fields are marked *

You May Also Like

ಡ್ರೈವರ್ ಕಂಡಕ್ಟರ್ ಗಳ ನಿತ್ಯ ಶೋಷಣೆಗೆ ಮುಕ್ತಿ ಎಂದು?

ಕೆಎಸ್ಆರ್ಟಿಸಿ ಚಾಲಕ ಹಾಗೂ ನಿರ್ವಾಹಕರು ಕೊರೋನಾ ವಾರಿಯರ್ಸ್ ಎಂದು ಬಾಯಿ ಮಾತಿಂದ ಹೇಳಿದರೆ ಸಾಲದು. ಪಾಪ..!, ಅವರ ಸಂಕಷ್ಟಗಳಿಗೆ ಸರ್ಕಾರ ಸ್ಪಂದಿಸುವ ಅವಶ್ಯಕತೆ ಇದೆ.

ನರೇಗಲ್ಲ್ ನಲ್ಲಿ ಸಹಾಯಧನ ಬಾರದೆ ಅರ್ಧಕ್ಕೆ ನಿಂತ ಮನೆಗಳು!

ನರೇಗಲ್‌: ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ವಿವಿಧ ಯೋಜನೆಯ ಅಡಿಯಲ್ಲಿ 2013/14,2017/18, ಹಾಗೂ 2018/19 ಪಿ.ಎಮ್.ವೈ ಪ್ರಧಾನ ಮಂತ್ರಿ ಆವಾಸ್ ಯೋಜನೆ, ವಾಜಪೇಯಿ ವಸತಿ ಯೋಜನೆ, ಅಂಬೇಡ್ಕರ್ ಆವಾಸ್ ಯೋಜನೆ, ಅಡಿಯಲ್ಲಿ ಐದು ನೂರಕ್ಕೂ ಹೆಚ್ಚು ಫಲಾನುಭವಿಗಳು ಆಯ್ಕೆ ಆಗಿದ್ದು ಹಲವು ವರ್ಷಗಳು ಕಳೆದರು ಯಾವುದೇ ಫಲಾನುಭವಿಗಳಿಗೆ ಸಂಪೂರ್ಣ ಸಹಾಯಧನ ಬಂದಿಲ್ಲ. ಇದರಲ್ಲಿ ಅರ್ಧ ಮನೆಗಳು ಕಟ್ಟಡ ಸಂಪೂರ್ಣ ಮುಗಿದಿದ್ದು ಇನ್ನುಳಿದ ಮನೆಗಳು ಅರ್ಧಕ್ಕೆ ನಿಂತಿವೆ. ಸೂರು ಇಲ್ಲದವರಿಗೆ ಸೂರು ಒದಗಿಸಲು ಅರ್ಜಿ ಆಹ್ವಾನ ಮಾಡಿದ್ದು ಅದರಂತೆ ಅರ್ಜಿಯನ್ನು ಹಾಕಿದ ಫಲಾನುಭವಿಗಳಿಗೆ ಒಂದೊ-ಎರಡು ಕಂತು ಹಣ ಬಂದಿದ್ದು ಇನ್ನುಳಿದ ಕಂತುಗಳ ಸಹಾಯಧನ ಬಾರದೆ ಅರ್ಧಕ್ಕೆ ನಿಂತ ಮನೆಗಳ ಫಲಾನುಭವಿಗಳ ಗೋಳು ಕೇಳೋರು ಯಾರು? ಎನ್ನುವಂತಾಗಿದೆ.

ಲೈವ್ ಮೀಟಿಂಗನ್ಯಾಗ ಹೆಂಡತಿ ಕೊಟ್ ಮುತ್ತಿನಿಂದ ಪಾಪ ಪೇಚಿಗೆ ಸಿಲುಕಿದ ಪತಿರಾಯ!

ಎಂತೆಂಥ ಚಿತ್ರವಿಚಿತ್ರ ಘಟನೆಗಳು ನಮ್ ನಡುವ ನಡೆದಿರ್ತಾವು. ಇಂಥದ್ದ ಒಂದು ವಿಚಿತ್ರ ಘಟನೆ ನಡೆದೈತಿ ನೋಡ್ರಿ.

ಗದಗ-ಬೆಟಗೇರಿ ರೈಲ್ವೆ ಹೋರಾಟ ಸಮಿತಿಯಿಂದ ಮನವಿ

ನಗರದ ರೈಲು ನಿಲ್ದಾಣಕ್ಕೆ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಜಯ್‌ಕುಮಾರ್ ಸಿಂಗ್ ಶುಕ್ರವಾರ ಭೇಟಿ ನೀಡಿ, ನಿಲ್ದಾಣದ ಆವರಣದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.