ಗದಗ: ಅವಧಿ ಮುಗಿದ್ರು ಚೇರಿನ ವ್ಯಾಮೋಹ ಮುಗಿಲ್ಲವೇ..? ಆಡಳಿತಾಧಿಕಾರಿ ನೇಮಕವಾದ್ರು, ಅಧ್ಯಕ್ಷ ಪದವಿಯ ಅವಧಿ ಮುಗಿದಿರೋದು ನೆನಪಿಲ್ಲವೇ..? ಹೀಗೊಂದು ವ್ಯಂಗ್ಯ ಪ್ರಶ್ನೆಗಳು ಗದಗ ತಾಲೂಕಿನ ಲಕ್ಕುಂಡಿ ಗ್ರಾಮ ಪಂಚಾಯತಿ ಅಧ್ಯಕ್ಷರ ವರ್ತನೆಯಿಂದ ಉದ್ಭವವಾಗಿವೆ. ಈಗಾಗಲೇ ಲಕ್ಕುಂಡಿ ಗ್ರಾಮ ಪಂಚಾಯತಿಯ ಆಡಳಿತ ಮಂಡಳಿಯ ಅವಧಿ ಪೂರ್ಣಗೊಂಡಿದೆ. ಸದ್ಯ ಕೊರೊನಾ ಹಿನ್ನೆಲೆ ಚುನಾವಣೆ ಪ್ರಕ್ರಿಯೇ ಮುಂದೂಡಲಾಗಿದೆ. ಈಗಾಗಲೇ ಆಡಳಿತಾಧಿಕಾರಿ ನೇಮಕವಾಗಿದ್ದು ಲಕ್ಕುಂಡಿ ಗ್ರಾಮ ಪಂಚಾಯತಿಗೆ ಗದಗ ತಾಲೂಕಿನ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ. ಆದ್ರೆ ಆಡಳಿತಾಧಿಕಾರಿ ಕರ್ತವ್ಯಕ್ಕೆ ಹಾಜರಾಗಿ ಹೋದ ಮೇಲೂ ಗ್ರಾಮ ಪಂಚಾಯತಿ ಅಧ್ಯಕ್ಷ ಎಸ್.ಎಮ್.ಬೂದಿಹಾಳ್ ಪಂಚಾಯತಿಯಲ್ಲಿ ಅಧ್ಯಕ್ಷರ ಕೊಠಡಿಯಲ್ಲಿ ಅಧ್ಯಕ್ಷರ ಚೇರ್ ನಲ್ಲಿ ಕುಳಿತು ಜನರೊಂದಿಗೆ ಸಂಭಾಷಣೆ ನಡೆಸಿದ್ದಾರೆ. ಇದು ಗ್ರಾಮದ ಬಹುತೇಕರ ಆಕ್ಷೇಪಕ್ಕೂ ಕಾರಣವಾಗಿದೆ. ಅವಧಿ ಮುಗಿದು ಆಡಳಿತಾಧಿಕಾರಿ ನೇಮಕವಾದ ಮೇಲೂ ಅಧ್ಯಕ್ಷರಿಗೆ ಚೇರಿನ ವ್ಯಾಮೋಹ ಮುಗಿದಿಲ್ಲವೇ ಎಂದು ಜನ ವ್ಯಂಗ್ಯವಾಡುತ್ತಿದ್ದಾರೆ.
ಈ ಕುರಿತು ಗ್ರಾಮಸ್ಥ ಉಸ್ಮಾನಲಿ ನಮಾಜಿ, ಆಡಳಿತಾಧಿಕಾರಿಗಳ ನೇಮಕವಾದ ಮೇಲೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದವರು ಈ ರೀತಿ ಚೇಂಬರ್ ನಲ್ಲಿ ಅಧ್ಯಕ್ಷರ ಚೇರ್ ಗೆ ಕಳಿತುಕೊಳ್ಳುವುದು ತಪ್ಪು ಎಂದು ಸ್ವತ: ಅಧಿಕಾರಿಗಳು ಹೇಳಿದ್ದಾರೆ. ಅವಧಿ ಮುಗಿದ ಮೇಲೂ ಅಧ್ಯಕ್ಷರ ಈ ವರ್ತನೆ ಆಡಳಿತ ವಿರೋಧಿಯಾಗಿದೆ ಎಂದು ಆರೋಪಿಸಿದರು.

Leave a Reply

Your email address will not be published. Required fields are marked *

You May Also Like

ಗಣೇಶೋತ್ಸವ ಆಚರಣೆ ಮಾರ್ಗಸೂಚಿಗಳು: ನಿಯಮ ಪಾಲನೆಗೆ ಡಿಸಿ ಸೂಚನೆ

ಗಣೇಶೋತ್ಸವ ಆಚರಿಸುವ ಸಂಬಂಧ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಗಳನ್ನು ನೀಡಿದ್ದು, ಅವುಗಳನ್ನು ಸಾರ್ವಜನಿಕರು ಪಾಲಿಸುವ ಮೂಲಕ ಸರಳ ಗಣೇಶೋತ್ಸವ ಆಚರಿಸುವಂತೆ ಜಿಲ್ಲಾಧಿಕಾರಿ ಎಂ ಸುಂದರೇಶ್ ಬಾಬು ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ವಿವಿಧ ಸ್ಥಳಗಳ ಪರಿಶೀಲನೆ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಇಂದು ಭೇಟಿ ನೀಡಿ ಗದಗ ನಗರದಲ್ಲಿ ವಲಸೆ ಕಾರ್ಮಿಕರಿಗೆ ಒದಗಿಸಲಾದ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.

ಸತ್ತಲ್ಲಿ 20 ಜನರಿರಬೇಕು…ಮದ್ಯಕ್ಕೆ ಮಾತ್ರ ಸಾವಿರ ಜನರಿದ್ದರೂ ಸೈ!!

ಅಂತ್ಯ ಸಂಸ್ಕಾರಕ್ಕೆ 20 ಜನರ ಸೇರುವಂತಿಲ್ಲ. ಆದರೆ, ಮದ್ಯದಂಗಡಿಯ ಮುಂದೆ 1 ಸಾವಿರ ಜನರು ನಿಲ್ಲಬಹುದೇ ಎಂದು ಕೇಂದ್ರ ಸರ್ಕಾರದ ವಿರುದ್ಧ ಶಿವಸೇನೆ ಟೀಕೆ ಮಾಡಿದೆ.

ನರೇಗಾ ಕೂಲಿಗಾಗಿ ಗ್ರಾಮ ಪಂಚಾಯತಿಗೆ ಬೀಗ ಜಡಿದು ಪ್ರತಿಭಟನೆ

ಉದ್ಯೋಗಕ್ಕೆ ಖಾತ್ರಿಯಾಗಬೇಕಿದ್ದ ಯೋಜನೆ ಉದ್ಯೋಗಕ್ಕೆ ಕತ್ತರಿಯಾದರೆ ಹೇಗೆ? ಎನ್ನುವ ಪ್ರಶ್ನೆ ಉದ್ಭವವಾಗಿದೆ.