ಗದಗ: ಅವಧಿ ಮುಗಿದ್ರು ಚೇರಿನ ವ್ಯಾಮೋಹ ಮುಗಿಲ್ಲವೇ..? ಆಡಳಿತಾಧಿಕಾರಿ ನೇಮಕವಾದ್ರು, ಅಧ್ಯಕ್ಷ ಪದವಿಯ ಅವಧಿ ಮುಗಿದಿರೋದು ನೆನಪಿಲ್ಲವೇ..? ಹೀಗೊಂದು ವ್ಯಂಗ್ಯ ಪ್ರಶ್ನೆಗಳು ಗದಗ ತಾಲೂಕಿನ ಲಕ್ಕುಂಡಿ ಗ್ರಾಮ ಪಂಚಾಯತಿ ಅಧ್ಯಕ್ಷರ ವರ್ತನೆಯಿಂದ ಉದ್ಭವವಾಗಿವೆ. ಈಗಾಗಲೇ ಲಕ್ಕುಂಡಿ ಗ್ರಾಮ ಪಂಚಾಯತಿಯ ಆಡಳಿತ ಮಂಡಳಿಯ ಅವಧಿ ಪೂರ್ಣಗೊಂಡಿದೆ. ಸದ್ಯ ಕೊರೊನಾ ಹಿನ್ನೆಲೆ ಚುನಾವಣೆ ಪ್ರಕ್ರಿಯೇ ಮುಂದೂಡಲಾಗಿದೆ. ಈಗಾಗಲೇ ಆಡಳಿತಾಧಿಕಾರಿ ನೇಮಕವಾಗಿದ್ದು ಲಕ್ಕುಂಡಿ ಗ್ರಾಮ ಪಂಚಾಯತಿಗೆ ಗದಗ ತಾಲೂಕಿನ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ. ಆದ್ರೆ ಆಡಳಿತಾಧಿಕಾರಿ ಕರ್ತವ್ಯಕ್ಕೆ ಹಾಜರಾಗಿ ಹೋದ ಮೇಲೂ ಗ್ರಾಮ ಪಂಚಾಯತಿ ಅಧ್ಯಕ್ಷ ಎಸ್.ಎಮ್.ಬೂದಿಹಾಳ್ ಪಂಚಾಯತಿಯಲ್ಲಿ ಅಧ್ಯಕ್ಷರ ಕೊಠಡಿಯಲ್ಲಿ ಅಧ್ಯಕ್ಷರ ಚೇರ್ ನಲ್ಲಿ ಕುಳಿತು ಜನರೊಂದಿಗೆ ಸಂಭಾಷಣೆ ನಡೆಸಿದ್ದಾರೆ. ಇದು ಗ್ರಾಮದ ಬಹುತೇಕರ ಆಕ್ಷೇಪಕ್ಕೂ ಕಾರಣವಾಗಿದೆ. ಅವಧಿ ಮುಗಿದು ಆಡಳಿತಾಧಿಕಾರಿ ನೇಮಕವಾದ ಮೇಲೂ ಅಧ್ಯಕ್ಷರಿಗೆ ಚೇರಿನ ವ್ಯಾಮೋಹ ಮುಗಿದಿಲ್ಲವೇ ಎಂದು ಜನ ವ್ಯಂಗ್ಯವಾಡುತ್ತಿದ್ದಾರೆ.
ಈ ಕುರಿತು ಗ್ರಾಮಸ್ಥ ಉಸ್ಮಾನಲಿ ನಮಾಜಿ, ಆಡಳಿತಾಧಿಕಾರಿಗಳ ನೇಮಕವಾದ ಮೇಲೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದವರು ಈ ರೀತಿ ಚೇಂಬರ್ ನಲ್ಲಿ ಅಧ್ಯಕ್ಷರ ಚೇರ್ ಗೆ ಕಳಿತುಕೊಳ್ಳುವುದು ತಪ್ಪು ಎಂದು ಸ್ವತ: ಅಧಿಕಾರಿಗಳು ಹೇಳಿದ್ದಾರೆ. ಅವಧಿ ಮುಗಿದ ಮೇಲೂ ಅಧ್ಯಕ್ಷರ ಈ ವರ್ತನೆ ಆಡಳಿತ ವಿರೋಧಿಯಾಗಿದೆ ಎಂದು ಆರೋಪಿಸಿದರು.

Leave a Reply

Your email address will not be published. Required fields are marked *

You May Also Like

ವಾರದ ಮಲ್ಲಪ್ಪನವರ ಸಮಾಜಿಕ ಸೇವೆ ಅಪಾರ : ಅಂದಾನೆಪ್ಪ ವಿಭೂತಿ

ವಾರದ ಮಲ್ಲಪ್ಪ ಅವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಧಾರ್ಮಿಕವಾಗಿ, ಔದ್ಯೋಗಿಕವಾಗಿ ಮಾಡಿದ ಸೇವೆ ಅಪಾರವಾದದ್ದು. ಎಂದು ವಿಭೂತಿ ಪತ್ರಿಕೆ ಸಂಪಾದಕ ಅಂದಾನೆಪ್ಪ ವಿಭೂತಿ ಹೇಳಿದರು.

ಅರಣ್ಯ ಹುತಾತ್ಮರ ದಿನಾಚರಣೆ”ಅರಣ್ಯ ಸಂರಕ್ಷಣೆಯಲ್ಲಿ ಅರಣ್ಯ ಸಿಬ್ಬಂದಿಗಳ ಪಾತ್ರ ಮಹತ್ವದ್ದು”

ಉತ್ತರಪ್ರಭ ಸುದ್ದಿಆಲಮಟ್ಟಿ: ಅರಣ್ಯ ಇಲಾಖೆಯ ಸಿಬ್ಬಂದಿ ಅರಣ್ಯ ಸಂರಕ್ಷಣೆಯ ಜತೆಗೆ ಅರಣ್ಯ ಬೆಳೆಸುವಲ್ಲಿಯೂ ಮಹತ್ವದ ಪಾತ್ರ…

ಧ್ವಜಾರೋಹಣ ನೆರವೇರಿಸಿದ ಸಚಿವ ಸಿ.ಸಿ.ಪಾಟೀಲ ನೀಡಿದ ಮಾಹಿತಿ

ಇಂದು ಸ್ವಾಂತಂತ್ರ್ಯ ದಿನಾಚರಣೆ ನಿಮಿತ್ಯ, ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಜಿಲ್ಲಾ ಉಸ್ತುವಾರಿ ಸಚಿವ…

ದಿಢೀರ್ ರಾಷ್ಟ್ರಪತಿ ಭೇಟಿಯಾದ ಪ್ರಧಾನಿ ಮೋದಿ: ಯುದ್ಧ ಸಿದ್ಧತೆಯೋ? ಸಂಪುಟ ವಿಸ್ತರಣೆಯೋ..?

ನವದೆಹಲಿ: ಇಂದು 11.30ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಷ್ಟ್ರಪತಿ ಭೇಟಿಗೆ ತೆರಳಿದ ಕೂಡಲೇ ರಾಜಕೀಯ ವಲಯದಲ್ಲಿ…