ಬೆಂಗಳೂರು: ಕೊರೊನಾ ಸೋಂಕಿತರ ಶವಸಂಸ್ಕಾರದ ವೇಳೆ ಅಮಾನವೀಯ ವರ್ತನೆ ತೋರಿದ ಆರೋಪದ ಹಿನ್ನೆಲೆ ಬಳ್ಳಾರಿಯ ಆರೋಗ್ಯ ಇಲಾಖೆ 6 ವೈದ್ಯಕೀಯ ಸಿಬ್ಬಂಧಿಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅಮಾನತು ಮಾಡಿ ಆದೇಶಿಸಿದ್ದಾರೆ.
ಬಳ್ಳಾರಿಯಲ್ಲಿ ವೈದ್ಯಕೀಯ ಸಿಬ್ಬಂದಿ ಸೋಂಕಿನಿಂದ ಮೃತಪಟ್ಟವರ ಶವಗಳನ್ನು ಗುಂಡಿಯೊಳಗೆ ಎಸೆದಿರುವ
ದೃಶ್ಯಗಳು ನಿನ್ನೆ ವೈರಲ್ ಆಗಿದ್ದವು. ಅಲ್ಲದೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಈ ನಡೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.