ನವದೆಹಲಿ : ಹಣಕಾಸು ಇಲಾಖೆ ಜಿಎಸ್‌ಟಿ ಸಂಗ್ರಹದ ಮಾಹಿತಿ ಬಿಡುಗಡೆ ಮಾಡಿದ್ದು, ಜೂನ್ ತಿಂಗಳಲ್ಲಿ ಒಟ್ಟು ರೂ. 90,918 ಕೋಟಿ ಸಂಗ್ರಹವಾಗಿದೆ ಎಂದು ಹೇಳಿದೆ.
ಲಾಕ್‌ಡೌನ್‌ ಪರಿಣಾಮದಿಂದ ಏಪ್ರಿಲ್ ನಲ್ಲಿ ರೂ. 32,294 ಕೋಟಿ, ಹಾಗೂ ಮೇ ತಿಂಗಳಿನಲ್ಲಿ ರೂ. 62,009 ಕೋಟಿ ಜಿಎಸ್ ಟಿ ಸಂಗ್ರಹವಾಗಿದೆ. ಆರ್ಥಿಕ ಚಟುವಟಿಕೆಗಳು ನಿಧಾನವಾಗಿ ವೇಗ ಪಡೆದುಕೊಳ್ಳುತ್ತಿದ್ದು ಜೂನ್ ನಲ್ಲಿ ಜಿಎಸ್‌ಟಿ ಸಂಗ್ರಹ ಗಣನೀಯವಾಗಿ ಸುಧಾರಿಸಿದೆ.
ಕೇಂದ್ರದ ಜಿಎಸ್‌ಟಿ ರೂ. 18,980 ಕೋಟಿ, ರಾಜ್ಯದ ಜಿಎಸ್‌ಟಿ ರೂ. 23,970 ಹಾಗೂ ಆಮದು ವಸ್ತುಗಳ ಮೇಲಿನ ಜಿಎಸ್‌ಟಿ ರೂ. 15,709 ಕೋಟಿ ಒಳಗೊಂಡಂತೆ ಐಜಿಎಸ್‌ಟಿ ರೂ. 40,302 ಕೋಟಿ, ರೂ. 7,655 ಕೋಟಿ ಸೆಸ್ ಸಂಗ್ರಹ ಸೇರಿದಂತೆ ಜೂನ್ ತಿಂಗಳಲ್ಲಿ ರೂ. 90,918 ಕೋಟಿ ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ.
ಐಜಿಎಸ್‌ಟಿಯಿಂದ ಸಂಗ್ರವಾದ ತೆರಿಗೆಯಲ್ಲಿ ರೂ. 11,117 ಕೋಟಿ ಹಣವನ್ನು ರಾಜ್ಯ ಸರ್ಕಾರಗಳಿಗೆ ಕೇಂದ್ರ ನೀಡಲಿದೆ. ಒಟ್ಟು ಜೂನ್ ತಿಂಗಳ ಒಟ್ಟು ವ್ಯವಹಾರದ ಬಳಿಕ ಕೇಂದ್ರ ರೂ. 32,305 ಕೋಟಿ ಹಾಗೂ ರಾಜ್ಯಗಳು ರೂ. 35,087 ಕೋಟಿ ಪಾಲು ಹೊಂದಿವೆ.
ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸಲು ಸರ್ಕಾರ ಸಮಯಾವಕಾಶ ನೀಡಿರುವ ಹಿನ್ನೆಲೆಯಲ್ಲಿ ಏಪ್ರಿಲ್, ಮಾರ್ಚ್ ಮತ್ತು ಫೆಬ್ರವರಿ ಕೆಲವು ರಿಟರ್ನ್ಸ್ ಜುಲೈನಲ್ಲಿ ಪಾವತಿಯಾಗುವ ಸಾಧ್ಯತೆಗಳಿದೆ.
ಕರ್ನಾಟಕದಲ್ಲಿ 2019ರ ಜೂನ್‌ ತಿಂಗಳಲ್ಲಿ ರೂ. 6,659 ಕೋಟಿ ಸಂಗ್ರಹವಾಗಿದ್ದರೆ ಈ ವರ್ಷದ ಜೂನ್‌ನಲ್ಲಿ ಶೇ.1 ರಷ್ಟು ಹೆಚ್ಚಳವಾಗಿದ್ದು ರೂ. 6,710 ಕೋಟಿ ಸಂಗ್ರಹವಾಗಿದೆ.

Leave a Reply

Your email address will not be published. Required fields are marked *

You May Also Like

ಬಿಎಂಟಿಸಿ ಪಾಸ್ ದರ ಇಳಿಕೆ: ಇನ್ಮುಂದೆ ಟಿಕೇಟ್ ಬದಲಾಗಿ ಪಾಸ್, ಯಾವುದಕ್ಕೆ ಎಷ್ಟು?

ಕೊನೆಗೂ ಪ್ರಯಾಣಿಕರ ಮನವಿಗೆ ಸ್ಪಂದಿಸಿದ ಬಿಎಂಟಿಸಿ ಪಾಸ್ ದರವನ್ನು ಇಳಿಕೆಗೆ ಮುಂದಾಗಿದೆ. ನಾಳೆಯಿಂದಲೇ ಹೊಸ ದರ ಅನ್ವಯವಾಗಲಿದೆ. ಹೀಗಾಗಿ ನಿತ್ಯ ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ ಬಸ್ ಗಳನ್ನೆ ನೆಚ್ಚಿಕೊಂಡಿದ್ದ ಲಕ್ಷಾಂತರ ಜನರಿಗೆ ಇಂದು ಬಿಎಂಟಿಸಿ ಸಿಹಿ ಸುದ್ದಿ ನಿಡಿದೆ.

ಶ್ರೀಶೈಲಂ ಪವರ್ ಸ್ಟೇಷನ್ ನಲ್ಲಿ ಅಗ್ನಿ ಅವಘಡ!

ಶ್ರೀಶೈಲಂ ಪವರ್‌ ಸ್ಟೇಷನ್‌ನಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 10 ಜನರನ್ನು ರಕ್ಷಿಸಲಾಗಿದೆ. ಅಲ್ಲದೇ, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸದ್ಯ 6 ಜನ ಶ್ರೀಶೈಲಂನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಜನ ಒಳಗೆ ಸಿಲುಕಿ ಹಾಕಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ. ತೆಲಂಗಾಣದ ನಾಗರ ಕರ್ನೂಲ್ ಜಿಲ್ಲೆಯಲ್ಲಿರುವ ಶ್ರೀಶೈಲಂ ಡ್ಯಾಂ ಕೆನೆಲ್ ನಲ್ಲಿ ಬೆಳಿಗ್ಗೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.

ಹಸಿರು ವಲಯದಲ್ಲಿದ್ದ ಚಾಮರಾಜನಗರದಲ್ಲಿ ಮನೆ ಮಾಡಿದ ಆತಂಕ!

ಇಲ್ಲಿಯವರೆಗೂ ಹಸಿರು ವಲಯದಲ್ಲಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ. ಕೊರೊನಾ ಸೋಂಕಿತ ಪೊಲೀಸ್ ಪೇದೆ ಚಾಮರಾಜನಗರಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 22 ಜನರನ್ನು ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ಕೇಂದ್ರ ಸಚಿವ ಕಿಶನ್ ರೆಡ್ಡಿ ಸಂತಾಪ

ವಿಶಾಖಪಟ್ಟಣ: ವಿಷಾನಿಲ ಸೋರಿಕೆ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಕೇಂದ್ರ ಸಚಿವ ಕಿಶನ್ ರೆಡ್ಡಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.