ರಾಯಚೂರು : ಕೊರೊನಾ ಸೋಂಕಿನಿಂದ ಗುಣಮುಖನಾಗಿದ್ದ ವ್ಯಕ್ತಿ ಮನನೊಂದು ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ರಾಗಲಪರ್ವಿ ಗ್ರಾಮದಲ್ಲಿ ನಡೆದಿದೆ.

65 ವರ್ಷದ ವ್ಯಕ್ತಿ ತಮ್ಮ ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಬಳ್ಳಾರಿಯಲ್ಲಿ ಕ್ವಾರಂಟೈನ್ ಆಗಿದ್ದ ವೃದ್ಧನಿಗೆ ಇತ್ತೀಚೆಗೆ ಸೋಂಕು ತಗುಲಿತ್ತು. ಕ್ವಾರಂಟೈನ್ ಅವಧಿ ಮುಗಿದು ಸೋಂಕಿನಿಂದ ಗುಣಮುಖನಾಗಿದ್ದ ಕೂಡ. ಆದರೆ ಗುಣಮುಖರಾದರೂ ಜನರು ಬೇರೆ ದೃಷ್ಟಿಯಿಂದ ನೋಡುತ್ತಿದ್ದ ಕಾರಣ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿದಿದ್ದರು ಎಂಬ ಮಾಹಿತಿ ಲಭಿಸಿದೆ.

ಈ ಕುರಿತು ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಕುರಿತು ತನಿಖೆ ನಡೆಸಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ದಾಖಲಾದ ಮೊದಲ ಪ್ರಕರಣ ಇದಾಗಿದೆ.

Leave a Reply

Your email address will not be published. Required fields are marked *

You May Also Like

ಸುಮಲತಾಗೆ ಪಾಸಿಟಿವ್: ಸಂಪರ್ಕಿತರಿಂದ ಪರೀಕ್ಷೆಗೆ ರಶ್.!

ಮಂಡ್ಯ: ಸಂಸದೆ ಸುಮಲತಾ ತಮಗೆ ಪಾಸಿಟಿವ್ ಬಂದಿದೆ ಎಂದು ಸೋಮವಾರ ಘೋಷಿಸಿದ್ದರು. ತಮ್ಮ ಸಂಪರ್ಕಿತರ ಪಟ್ಟಿಯನ್ನು…

ಗಡಿಯಲ್ಲಿ ಕ್ಯಾತೆ ಆರಂಭಿಸಿದ ಚೀನಾ!

ನವದೆಹಲಿ: ಉತ್ತರ ಸಿಕ್ಕಿಂ ನಲ್ಲಿ ಚೀನಾದ ಸೈನಿಕರು ಭಾರತೀಯ ಸೈನಿಕರೊಂದಿಗೆ ಕ್ಯಾತಿ ತೆಗೆದಿದ್ದಾರೆ. ಪರಿಣಾಮವಾಗಿ ಭಾರತೀಯ…

ಭಾರತದಲ್ಲಿ ಕೋವಿಡ್ ಗುಣಮುಖರು: ಈಗ ಹೃದಯ, ಶ್ವಾಸಕೋಸ ಸಮಸ್ಯೆಗಳತ್ತ…

ಕೋವಿಡ್ ನಿಂದ ತೀವ್ರ ಬಾಧಿತರಾಗಿ ಗುಣಮುಖರಾದ ಹಲವರಲ್ಲಿ ಇಂತಹ ಸಮಸ್ಯೆಗಳನ್ನು ವೈದ್ಯರು ಗುರುತಿಸುತ್ತಿದ್ದಾರೆ. ಕೋವಿಡ್ ಪರಿಣಾಮ ಇನ್ ಫ್ಲುಯೆಂಜಾಗಿಂತ ಹೆಚ್ಚಿನ ಕಾಲ ಕಾಡಬಹುದು

ರಾಜ್ಯದಲ್ಲಿ ಅಬ್ಬರಿಸುತ್ತಿದೆ ಮಹಾಮಾರಿ – ಇಂದು ಮತ್ತೆ 10 ಸಾವಿರ ಗಡಿ ದಾಟಿದ ಸೋಂಕು!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಕಾಣುತ್ತಿದೆ. ಇಂದು ಕೂಡ ರಾಜ್ಯದಲ್ಲಿ ದಾಖಲೆಯ ಸೋಂಕಿತರು ಪತ್ತೆಯಾಗಿದ್ದಾರೆ.