ಕಾರವಾರ : ಮದುವೆಗೆ ಅಡ್ಡಿಯಾಗಲಿದೆ ಎಂಬ ಕಾರಣಕ್ಕೆ ಕೊರೊನಾ ಸೋಂಕು ಇರುವುದನ್ನು ಮುಚ್ಚಿಟ್ಟ ವ್ಯಕ್ತಿ ಸದ್ಯ ಇಹಲೋಕ ತ್ಯಜಿಸಿದ ಘಟನೆ ನಡೆದಿದೆ.

ಕೊರೊನಾ ಸೋಂಕು ಹರಡಿರುವುದನ್ನು ಮುಚ್ಚಿಟ್ಟ ಮದುಮಗ ಮದುವೆಯಾಗಿದ್ದ. ಆದರೆ, ಆತ ಮಮದುವೆಯಾಗಿದ್ದ ಮದುಮಗ ವಿವಾಹವಾದ ಐದೇ ದಿನಕ್ಕೆ ಸಾವನ್ನಪ್ಪಿದ್ದಾನೆ. ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಇದರಿಂದಾಗಿ ನೆಂಟರು ಹಾಗೂ ಆತನ ಕುಟುಂಬಕ್ಕೂ ಕಂಟಕ ಶರುವಾಗಿದೆ.

ವೃದ್ಧರಿಬ್ಬರಿಂದ ಸದ್ಯ ಕುಟುಂಬದ 20 ಜನರಿಗೆ ಸೋಂಕು ತಗುಲಿದೆ. ಇದರಲ್ಲಿ ಒಂದು ವರ್ಷದ ಮಗುವು ಸೇರಿ 18 ವರ್ಷದ ಒಳಗಿನ 8 ಜನ ಅಪ್ರಾಪ್ತರಿಗೂ ಕಂಟಕ ಶುರುವಾಗಿದೆ. ಇದಲ್ಲದೇ ಈತನ ಮದುವೆಯಲ್ಲಿ ಭಾಗಿಯಾದ 70 ಜನ ಸಂಬಂಧಿಕರು ಕ್ವಾರಂಟೈನ್ ಆಗಿದ್ದಾರೆ.

ಕುಟುಂಬವು ಮದುವೆ ಕಾರಣದಿಂದ ಸೋಂಕಿರುವುದನ್ನು ಮುಚ್ಚಿಟ್ಟು ಹಲವು ಜನರಿಗೆ ಸೋಂಕು ತಗುಲುವಂತೆ ಮಾಡಿದೆ. ಇದಲ್ಲದೇ ಇವರ ಕುಟುಂಬದ ಇಬ್ಬರು ವೃದ್ಧರ ಸ್ಥಿತಿಯೂ ಗಂಭೀರವಾಗಿದೆ. ಈ ಎಲ್ಲಾ ಹಿನ್ನೆಲೆಯನ್ನನು ಅವಲೋಕಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಅವರು ಯುವಕನ ಕುಟುಂಬಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು 9 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು 09 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 331 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 178.

ಮದ್ಯ ಮಾರಾಟ ನಿಷೇಧಕ್ಕೆ ಗೋರ್ ಸೇನಾ ಒತ್ತಾಯ

ಮದ್ಯೆ ಮಾರಾಟ ಸಂಪೂರ್ಣವಾಗಿ ನಿಶೇಧಿಸುವಂತೆ ಒತ್ತಾಯಿಸಿ ಗೋರ್ ಸೇನಾ ಸಂಘಟನೆಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು!

ಹಾಸನ: ಶತಾಯುಷಿ ಸಾಲುಮರದ ತಿಮ್ಮಕ್ಕನವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಹೊಟ್ಟೆ ನೋವು, ವಾಂತಿ,…

ಪಿಜಿ ಬಾಡಿಗೆ ಹಣ ಕೊಡದಿದ್ದಕ್ಕೆ ಮಾಲಿಕ ಮಾಡಿದ್ದೇನು?

ಪಿಜಿ ಬಾಡಿಗೆ ನೀಡಿಲ್ಲವೆಂಬ ಕಾರಣಕ್ಕೆ ಯುವತಿಯರನ್ನು ಪಿಜಿ ಮಾಲೀಕ ಕೂಡಿ ಹಾಕಿದ ಘಟನೆ ನಗರದ ಕುವೆಂಪುನಗರ ಬಡಾವಣೆಯಲ್ಲಿ ನಡೆದಿದೆ.