ಕಾರವಾರ : ಮದುವೆಗೆ ಅಡ್ಡಿಯಾಗಲಿದೆ ಎಂಬ ಕಾರಣಕ್ಕೆ ಕೊರೊನಾ ಸೋಂಕು ಇರುವುದನ್ನು ಮುಚ್ಚಿಟ್ಟ ವ್ಯಕ್ತಿ ಸದ್ಯ ಇಹಲೋಕ ತ್ಯಜಿಸಿದ ಘಟನೆ ನಡೆದಿದೆ.

ಕೊರೊನಾ ಸೋಂಕು ಹರಡಿರುವುದನ್ನು ಮುಚ್ಚಿಟ್ಟ ಮದುಮಗ ಮದುವೆಯಾಗಿದ್ದ. ಆದರೆ, ಆತ ಮಮದುವೆಯಾಗಿದ್ದ ಮದುಮಗ ವಿವಾಹವಾದ ಐದೇ ದಿನಕ್ಕೆ ಸಾವನ್ನಪ್ಪಿದ್ದಾನೆ. ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಇದರಿಂದಾಗಿ ನೆಂಟರು ಹಾಗೂ ಆತನ ಕುಟುಂಬಕ್ಕೂ ಕಂಟಕ ಶರುವಾಗಿದೆ.

ವೃದ್ಧರಿಬ್ಬರಿಂದ ಸದ್ಯ ಕುಟುಂಬದ 20 ಜನರಿಗೆ ಸೋಂಕು ತಗುಲಿದೆ. ಇದರಲ್ಲಿ ಒಂದು ವರ್ಷದ ಮಗುವು ಸೇರಿ 18 ವರ್ಷದ ಒಳಗಿನ 8 ಜನ ಅಪ್ರಾಪ್ತರಿಗೂ ಕಂಟಕ ಶುರುವಾಗಿದೆ. ಇದಲ್ಲದೇ ಈತನ ಮದುವೆಯಲ್ಲಿ ಭಾಗಿಯಾದ 70 ಜನ ಸಂಬಂಧಿಕರು ಕ್ವಾರಂಟೈನ್ ಆಗಿದ್ದಾರೆ.

ಕುಟುಂಬವು ಮದುವೆ ಕಾರಣದಿಂದ ಸೋಂಕಿರುವುದನ್ನು ಮುಚ್ಚಿಟ್ಟು ಹಲವು ಜನರಿಗೆ ಸೋಂಕು ತಗುಲುವಂತೆ ಮಾಡಿದೆ. ಇದಲ್ಲದೇ ಇವರ ಕುಟುಂಬದ ಇಬ್ಬರು ವೃದ್ಧರ ಸ್ಥಿತಿಯೂ ಗಂಭೀರವಾಗಿದೆ. ಈ ಎಲ್ಲಾ ಹಿನ್ನೆಲೆಯನ್ನನು ಅವಲೋಕಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಅವರು ಯುವಕನ ಕುಟುಂಬಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗರಿಷ್ಠ ಮಟ್ಟದ ಇಂಧನ ತೆರಿಗೆ ಪಡೆಯುವ ರಾಷ್ಟ್ರ ಯಾವುದು ಗೊತ್ತಾ?

ಭಾರತ ಸದ್ಯ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ ಗರಿಷ್ಠ ಮಟ್ಟದ ತೆರಿಗೆ ವಿಧಿಸಿದ ರಾಷ್ಟ್ರವಾಗಿದೆ. ಭಾರತ ಮೊದಲನೇ ಸ್ಥಾನದಲ್ಲಿದ್ದರೇ ಇಟಲಿ ಎರಡನೇ ಸ್ಥಾನದಲ್ಲಿದೆ.

ಇಂದು ಕೊರೊನಾಗೆ 3 ಬಲಿ – ಸೋಂಕಿತರ ಸಂಖ್ಯೆ 135

ರಾಜ್ಯದಲ್ಲಿ ಇಂದು ಒಂದೇ ದಿನ ಬರೋಬ್ಬರಿ 135 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 2418ಕ್ಕೆ ಏರಿಕೆ ಕಂಡಿದೆ.

ಕೊರೋನಾ ಸೋಂಕಿನಿಂದ ಗುಣ ಹೊಂದಿದ 12 ದಿನದ ಮಗುವಿನ ಹೆಸರೇನು ಗೊತ್ತಾ?

ಒಂಭತ್ತು ದಿನದ ಮಗುವಿನಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿತ್ತು. ಇದೀಗ 12 ದಿನದ ಈ ಮಗು ಕೊರೋನಾ ಸೋಂಕಿನಿಂದ ಗುಣ ಹೊಂದಿದ್ದು ಮಗುವಿಗೆ ಇಂದು ಹೆಸರಿಡಲಾಗಿದೆ.

ಗದಗ ಜಿಲ್ಲೆಯ 15 ಕಂಟೇನ್ಮೆಂಟ್ ಪ್ರದೇಶಗಳ ನಿರ್ಬಂಧ ತೆರವು

ಗದಗ: ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 15 ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು.