ಗದಗ: ಧಾರವಾಡ ಜಿಲ್ಲೆಯಿಂದ ಗದಗ ಜಿಲ್ಲೆಗೆ ಬಂದಿದ್ದ ಕಂಡಕ್ಟರ್ ಹಾಗೂ ಗದಗ ಮೂಲದ ಬೆಂಗಳೂರಿನ ಹೋಟೆಲ್ ಒಂದರ ಅಡುಗೆ ತಯಾರಕನಿಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದೆ.

ಧಾರವಾಡ ಜಿಲ್ಲೆಯಿಂದ ನರಗುಂದ ನಗರದ ಗಡಿ ಓಣಿಯ ನಿವಾಸಿ 39 ವರ್ಷದ ಪುರುಷ (ಪಿ-15320) ವಾಯವ್ಯ ಸಾರಿಗೆ ಸಂಸ್ಥೆ ಕಂಡಕ್ಟರ್ ಇದ್ದು ಹುಬ್ಬಳ್ಳಿ ನವನಗರ ಬಸ್ ಕಾರ್ಯನಿರ್ವಹಿಸುತ್ತಿದ್ದು ಹೊಸೂರ ಡಿಪೋಗೆ ಸೇರಿದವರು.
ಬೆಂಗಳೂರಿನ ಉತ್ತರ ಕರ್ನಾಟಕ ಊಟದ ಹೋಟೆಲ್ ಅಡುಗೆ ಕಾರ್ಯ ನಿರ್ವಹಿಸುವ ರೋಣ ನಗರದ ಬಾದಾಮಿ ರಸ್ತೆಯಲ್ಲಿರುವ ಕನ್ನಡ ಶಾಲೆ ಹತ್ತಿರದ ನಿವಾಸಿ 21 ವರ್ಷದ ಪುರುಷ (ಪಿ-15321) ಇವರಿಗೆ ಊರಿಗೆ ಬಂದ ಮೇಲೆ ಕೋವಿಡ್-19 ಸೋಂಕು ದೃಢಪಟ್ಟಿದೆ.
ಈ ಎರಡೂ ವ್ಯಕ್ತಿಗಳ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರ ಪತ್ತೆ ಕಾರ್ಯ ನಡೆದಿದೆ.

ಇವರಿಗೆ ಗದಗ ನಿಗದಿತ ಜಿಮ್ಸ್ಸ್ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಸುಂದರೇಶ್ ಬಾಬು ಎಂ. ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ನರೇಗಲ್, ಹೊಳೆಯಾಲೂರು ಹೋಬಳಿ: ರೈತರಿಂದ ತಾಡಪತ್ರಿಗೆ ಅರ್ಜಿ ಆಹ್ವಾನ

ಕೃಷಿ ಇಲಾಖೆಯಿಂದ ನರೇಗಲ್ ಹಾಗೂ ಹೊಳೆಆಲೂರ ಹೋಬಳಿಯ ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ರಿಯಾಯಿತಿ ದರದಲ್ಲಿ ಲಾಟರಿ ಮುಖಾಂತರ ತಾಡಪತ್ರಿಗಳನ್ನು ವಿತರಿಸಲು ಅರ್ಜಿ ಕರೆಯಲಾಗಿದೆ.

ನನ್ನ ಮನೆಯನ್ನು ದೇವರೇ ಕಾಪಾಡಬೇಕೆಂದು ನಟ ರವಿಶಂಕರ್ ಹೇಳಿದ್ಯಾಕೆ..?

ಬೆಂಗಳೂರು : ನನ್ನ ಮಕ್ಕಳಿರುವ ಮನೆಯನ್ನು ದೇವರೇ ಕಾಪಾಡಬೇಕು ಎಂದು ನಟ ರವಿಶಂಕರ್ ಟ್ವೀಟ್ ಮಾಡಿದ್ದಾರೆ.…

ರಾಜ್ಯಸಭೆ ಚುನಾವಣೆ ಫಲಿತಾಂಶ: ಯಾವ ರಾಜ್ಯದಲ್ಲಿ ಯಾರು ಆಯ್ಕೆ..?

ಆಂಧ್ರವೈ.ಎಸ್.ಆರ್.ಸಿ. – 4 (ಡಿಸಿಎಂ ಪಿಳ್ಳಿ ಸುಭಾಷ್ ಚಂದ್ರ ಬೋಸ್, ಸಚಿವ ಎಂ.ವಿ.ರಮಣ, ಪರಿಮಳಾ ನತವಾನಿ,…

ಲಕ್ಷ್ಮೇಶ್ವರದಲ್ಲಿ ಆಹಾರ ಕಿಟ್ ವಿತರಿಸಿದ ಶಾಸಕ ಲಮಾಣಿ

ಲಕ್ಷ್ಮೇಶ್ವರ: ಶಾಸಕ ರಾಮಣ್ಣ ಲಮಾಣಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ಸೋಂಕಿತರು ಬೇಗ ಗುಣಮುಖರಾಗಲೆಂದು ಪೌಷ್ಟಿಕ ಆಹಾರ ಕಿಟ್ ಹಾಗೂ ಮಾಸ್ಕ್ ವಿತರಣೆ ಮಾಡಿದರು.