ಬೆಂಗಳೂರು: ಕೊರೊನಾ ತನ್ನ ಆರ್ಭಟವನ್ನು ದಿನದಿಂದ ದಿನಕ್ಕೆ ಹೆಚ್ಚಿಸುತ್ತಿದೆ. ಸದ್ಯ ಇದು ಪರಪ್ಪನ ಅಗ್ರಹಾರಕ್ಕೂ ಎಂಟ್ರಿ ಕೊಟ್ಟಿದೆ.

ಇಲ್ಲಿಯ ಸೆಂಟ್ರಲ್ ಜೈಲಿನಲಿದ್ದ 20 ಕೈದಿಗಳು ಮತ್ತು 6 ಜನ ಜೈಲು ಸಿಬ್ಬಂದಿಗೂ ಸೋಂಕು ತಗುಲಿದೆ. ಹೊಸದಾಗಿ ಬಂಧಿತರಾಗಿ ಜೈಲು ಸೇರಿರುವ ಕೈದಿಗಳಲ್ಲಿಯೂ ಸೋಂಕು ಕಾಣಿಸಿಕೊಂಡಿದೆ.

ಮೂರು ದಿನಗಳ ಹಿಂದೆ ಜೈಲಿನಲ್ಲಿದ್ದ ಸುಮಾರು 150 ಜನರ ಸ್ಯಾಂಪಲ್ ಪಡೆಯಲಾಗಿತ್ತು. ಈಗ ಇದರ ವರದಿ ಬಂದಿದ್ದು, 150 ಜನರ ಪೈಕಿ ಜೈಲು ಸಿಬ್ಬಂದಿಗೂ ಸೇರಿದಂತೆ 26 ಜನರಲ್ಲಿ ಸೋಂಕು ದೃಢಪಟ್ಟಿದೆ. ಹೊಸದಾಗಿ ಬಂದ 450 ಆರೋಪಿಗಳನ್ನು ಬೇರೆ ಕೈದಿಗಳ ಜೊತೆ ಸಂಪರ್ಕ ಇಲ್ಲದಂತೆ ಮಾಡಲಾಗಿತ್ತು. ಜೈಲಿಗೆ ಬಂದ ಪ್ರತಿ ಕೈದಿಯನ್ನು 21 ದಿನ ಕ್ವಾರಂಟೈನ್ ಮಾಡಲಾಗುತಿತ್ತು. ಕ್ವಾರಂಟೈನ್ ನಲ್ಲಿದ್ದ ಕೈದಿಗಳಿಗೆ ಈಗ ಕೋವಿಡ್ ದೃಢಪಟ್ಟಿದೆ. ನಾಳೆ ಮತ್ತಷ್ಟು ಜನರ ಸ್ಯಾಂಪಲ್ ಪಡೆಯಲಾಗುತ್ತದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ಸರಿಯಾಗಿ ಕರ್ತವ್ಯ ನಿರ್ವಹಿಸದ ಸೂಪರ್ ಸ್ಪೆಷಾಲಿಟಿ ವೈದ್ಯರುಗಳ ವಿರುದ್ಧ ಕಠಿಣ ಕ್ರಮ – ಡಾ.ಸುಧಾಕರ್

ರಾಯಚೂರು: ಒಪೆಕ್ ಆಸ್ಪತ್ರೆಯನ್ನು ದುಃಸ್ಥಿತಿಯಿಂದ ಮುಕ್ತಗೊಳಿಸಿ ಅದನ್ನು ಗುಣಮಟ್ಟದ ಶ್ರೇಷ್ಠ ಆಸ್ಪತ್ರೆಯಾಗಿ ಪರಿವರ್ತಿಸಲು ಶ್ರಮಿಸುವಂತೆ ವೈದ್ಯಕೀಯ…

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ: ಸಚಿವ ಸುರೇಶ ಕುಮಾರ್

ನಿರೀಕ್ಷೆಗಿಂತ ಮೊದಲೇ ಪಿಯುಸಿ ದ್ವಿತೀಯ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ನಾಳೆ ಮಂಗಳವಾರ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ್ ಫೇಸ್ಬುಕ್ ಮೂಲಕ ತಿಳಿಸಿದ್ದಾರೆ.

ಮೂಲಭೂತ ಸೌಲಭ್ಯ ವಂಚಿತ ಪ್ರವಾಸಿ ಮಂದಿರ

ಅತಿಥಿ ಸತ್ಕಾರಕ್ಕಾಗಿ ಪಟ್ಟಣದಲ್ಲಿ ನಿರ್ಮಿಸಿದ್ದ ಪ್ರವಾಸಿ ಮಂದಿರದ ಸಂರಕ್ಷಣೆಗೆ ನಿರ್ಲಕ್ಷ್ಯದಿಂದ ಮೂಲ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿದೆ. ವಿಶ್ರಾಂತಿಗಾಗಿ ಬಂದೀರಿ ಜೊಕೆ ಪ್ರವಾಸಿಗರೆ ಎನ್ನುವಂತಿದೆ ಗದಗ ಜಿಲ್ಲೆ ಲಕ್ಷ್ಮೆಶ್ವರ ಪಟ್ಟಣದಲ್ಲಿ ಪ್ರವಾಸಿ ಮಂದಿರ.

ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು: ಪರಬ

ಕಾಡು ಬೆಳೆಸಿ ನಾಡು ಉಳಿಸಿ ಎಂಬ ವಾಖ್ಯೆದಂತೆ ಪ್ರತಿಯೊಬ್ಬರು ಗಿಡಗಳನ್ನು ಬೆಳೆಸಿ ಉತ್ತಮವಾದ ಆರೋಗ್ಯವನ್ನು ಪಡೆದುಕೊಳ್ಳುವುದರ ಜೊತೆಗೆ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಪಪಂ ಅಧ್ಯಕ್ಷ ಪರಮೇಶ ಪರಬ ಹೇಳಿದರು.