ಬೆಂಗಳೂರು: ಕೊರೊನಾ ತನ್ನ ಆರ್ಭಟವನ್ನು ದಿನದಿಂದ ದಿನಕ್ಕೆ ಹೆಚ್ಚಿಸುತ್ತಿದೆ. ಸದ್ಯ ಇದು ಪರಪ್ಪನ ಅಗ್ರಹಾರಕ್ಕೂ ಎಂಟ್ರಿ ಕೊಟ್ಟಿದೆ.

ಇಲ್ಲಿಯ ಸೆಂಟ್ರಲ್ ಜೈಲಿನಲಿದ್ದ 20 ಕೈದಿಗಳು ಮತ್ತು 6 ಜನ ಜೈಲು ಸಿಬ್ಬಂದಿಗೂ ಸೋಂಕು ತಗುಲಿದೆ. ಹೊಸದಾಗಿ ಬಂಧಿತರಾಗಿ ಜೈಲು ಸೇರಿರುವ ಕೈದಿಗಳಲ್ಲಿಯೂ ಸೋಂಕು ಕಾಣಿಸಿಕೊಂಡಿದೆ.

ಮೂರು ದಿನಗಳ ಹಿಂದೆ ಜೈಲಿನಲ್ಲಿದ್ದ ಸುಮಾರು 150 ಜನರ ಸ್ಯಾಂಪಲ್ ಪಡೆಯಲಾಗಿತ್ತು. ಈಗ ಇದರ ವರದಿ ಬಂದಿದ್ದು, 150 ಜನರ ಪೈಕಿ ಜೈಲು ಸಿಬ್ಬಂದಿಗೂ ಸೇರಿದಂತೆ 26 ಜನರಲ್ಲಿ ಸೋಂಕು ದೃಢಪಟ್ಟಿದೆ. ಹೊಸದಾಗಿ ಬಂದ 450 ಆರೋಪಿಗಳನ್ನು ಬೇರೆ ಕೈದಿಗಳ ಜೊತೆ ಸಂಪರ್ಕ ಇಲ್ಲದಂತೆ ಮಾಡಲಾಗಿತ್ತು. ಜೈಲಿಗೆ ಬಂದ ಪ್ರತಿ ಕೈದಿಯನ್ನು 21 ದಿನ ಕ್ವಾರಂಟೈನ್ ಮಾಡಲಾಗುತಿತ್ತು. ಕ್ವಾರಂಟೈನ್ ನಲ್ಲಿದ್ದ ಕೈದಿಗಳಿಗೆ ಈಗ ಕೋವಿಡ್ ದೃಢಪಟ್ಟಿದೆ. ನಾಳೆ ಮತ್ತಷ್ಟು ಜನರ ಸ್ಯಾಂಪಲ್ ಪಡೆಯಲಾಗುತ್ತದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ಸಚಿವ ಆರ್. ಅಶೋಕಗೆ ಕೋವಿಡ್ ಸೋಂಕು, ಆಸ್ಪತ್ರೆಗೆ ದಾಖಲು

ಬೆಂಗಳೂರು:  ಪದ್ಮನಾಭನಗರ ಕ್ಷೇತ್ರದ ಬಿಜೆಪಿ ಶಾಸಕ, ಕಂದಾಯ ಸಚಿವ ಆರ್. ಅಶೋಕಗೆ ಕೋವಿಡ್ ಸೋಂಕು ತಗುಲಿದೆ.…

ಎನ್ ಆರ್ ಬಿ ಸಿ 5ಎ ಕೆನಾಲ್ ಯೋಜನೆ: ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡುವಂತೆ ಒತ್ತಾಯ

ರಾಯಚೂರು: ಎನ್ ಆರ್ ಬಿ ಸಿ 5 ಕೆನಾಲ್ ಯೋಜನೆಯ ಕ್ರಿಯಾ ಯೋಜನೆಯನ್ನು ಸಚಿವ ಸಂಪುಟದಲ್ಲಿ…

ಕೊರೊನಾದಿಂದಾಗಿ ಸಪ್ತಪದಿ ಸಮಯ ಬದಲಿಸಿದ ಸರ್ಕಾರ!

ಬೆಂಗಳೂರು : ಕೊರೊನಾದ ಹಾವಳಿಯ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆಯ ಎ ದರ್ಜೆಯ ದೇವಸ್ಥಾನಗಳ ವತಿಯಿಂದ ಸಾಮೂಹಿಕ ವಿವಾಹ ಏರ್ಪಡಿಸುವ ಸರ್ಕಾರದ ಸಪ್ತಪದಿ ಯೋಜನೆಗೆ ಮುಂದೂಡಿದೆ.

ಎಲ್ಲ ಸಮುದಾಯಕ್ಕೂ ಮೀಸಲಾತಿ ಸಿಗಲಿ: ಕಾರಜೋಳ

ಸಾಂವಿಧಾನದ ಆಶಯದಂತೆ ಶೋಷಿತ ಎಲ್ಲ ಸಮುದಾಯಗಳಿಗೂ ಮುಖ್ಯವಾಹಿನಿಗೆ ಬರಲು ಮೀಸಲಾತಿ ಸಿಗಲಿ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.