ಬೆಂಗಳೂರು: ಕೊರೊನಾ ತನ್ನ ಆರ್ಭಟವನ್ನು ದಿನದಿಂದ ದಿನಕ್ಕೆ ಹೆಚ್ಚಿಸುತ್ತಿದೆ. ಸದ್ಯ ಇದು ಪರಪ್ಪನ ಅಗ್ರಹಾರಕ್ಕೂ ಎಂಟ್ರಿ ಕೊಟ್ಟಿದೆ.

ಇಲ್ಲಿಯ ಸೆಂಟ್ರಲ್ ಜೈಲಿನಲಿದ್ದ 20 ಕೈದಿಗಳು ಮತ್ತು 6 ಜನ ಜೈಲು ಸಿಬ್ಬಂದಿಗೂ ಸೋಂಕು ತಗುಲಿದೆ. ಹೊಸದಾಗಿ ಬಂಧಿತರಾಗಿ ಜೈಲು ಸೇರಿರುವ ಕೈದಿಗಳಲ್ಲಿಯೂ ಸೋಂಕು ಕಾಣಿಸಿಕೊಂಡಿದೆ.

ಮೂರು ದಿನಗಳ ಹಿಂದೆ ಜೈಲಿನಲ್ಲಿದ್ದ ಸುಮಾರು 150 ಜನರ ಸ್ಯಾಂಪಲ್ ಪಡೆಯಲಾಗಿತ್ತು. ಈಗ ಇದರ ವರದಿ ಬಂದಿದ್ದು, 150 ಜನರ ಪೈಕಿ ಜೈಲು ಸಿಬ್ಬಂದಿಗೂ ಸೇರಿದಂತೆ 26 ಜನರಲ್ಲಿ ಸೋಂಕು ದೃಢಪಟ್ಟಿದೆ. ಹೊಸದಾಗಿ ಬಂದ 450 ಆರೋಪಿಗಳನ್ನು ಬೇರೆ ಕೈದಿಗಳ ಜೊತೆ ಸಂಪರ್ಕ ಇಲ್ಲದಂತೆ ಮಾಡಲಾಗಿತ್ತು. ಜೈಲಿಗೆ ಬಂದ ಪ್ರತಿ ಕೈದಿಯನ್ನು 21 ದಿನ ಕ್ವಾರಂಟೈನ್ ಮಾಡಲಾಗುತಿತ್ತು. ಕ್ವಾರಂಟೈನ್ ನಲ್ಲಿದ್ದ ಕೈದಿಗಳಿಗೆ ಈಗ ಕೋವಿಡ್ ದೃಢಪಟ್ಟಿದೆ. ನಾಳೆ ಮತ್ತಷ್ಟು ಜನರ ಸ್ಯಾಂಪಲ್ ಪಡೆಯಲಾಗುತ್ತದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ಹಿರಿಯ ಅಭಿಮಾನಿ ಭೇಟಿ ಮಾಡಿ ಭಾವುಕರಾದ ಅಪ್ಪು!

ಕಾರವಾರ : ತಮ್ಮ ನೆಚ್ಚಿನ ನಾಯಕ ನಟನಿಗಾಗಿ ಹಿರಿಯ ಜೀವವೊಂದು ಬರೋಬ್ಬರಿ 12 ವರ್ಷಗಳಿಂದ ಕಾಯುತ್ತಿತ್ತು. ಕೊನೆಗೂ ಶಬರಿಗೆ, ಅಯ್ಯಪ್ಪನ ದರ್ಶನವಾದಂತೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕುಮಾರ್ ತಮ್ಮ ಅಭಿಮಾನಿಗೆ ಭೇಟಿಯಾಗಿದ್ದಾರೆ.

ಗದಗ ಎಸ್ಪಿ ಯತೀಶ ಎನ್ ವರ್ಗಾವಣೆ

ಉತ್ತರಪ್ರಭ ಸುದ್ದಿ ಗದಗ: ಗದಗ ಜಿಲ್ಲೆಗೆ ನೂತನ ಎಸ್ಪಿ ಯಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿವಪ್ರಕಾಶ್ ದೇವರಾಜು ಅವರನ್ನು ನೂತನ ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಆಗಮಿಸಲಿದ್ದು .ಎನ್ ಯತೀಶರವರನ್ನು ಮಂಡ್ಯ ಜಿಲ್ಲೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ .ಎನ್ ಯತೀಶರವರು ಕೊವಿಡ್ ಸಮಯದಲ್ಲಿ ಮಾಡಿದ ಕಾರ್ಯ ಗದುಗಿನ ಜನತೆ ಮರೆಯಲಾರರು.

ರೈತರ ಹೋರಾಟಕ್ಕೆ ಸ್ಪಂದಿಸಿ ಶೀರ್ಘದಲ್ಲೆ ರೈತರ ಬೇಡಿಕೆಗಳನ್ನ ಈಡೇರಿಸಲು ಭರವಸೆ

ಉತ್ತರಪ್ರಭ ಸುದ್ದಿ ಗದಗ: ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ರೈತರು ಶಿಂಗಟಾಲೂರ ಏತ ನೀರಾವರಿ ಎಡದಂಡೆ…

ಕೊರೋನಾ ಸೊಂಕು: ಪೊಲೀಸರಲ್ಲೂ ಆತಂಕ

ಕೊರೋನಾ ಸೊಂಕು: ಪೊಲೀಸರಲ್ಲೂ ಆತಂಕ ಬೆಂಗಳೂರು : ಬೇಗೂರು ಪೊಲೀಸ್ ಠಾಣೆಯ ಪೇದೆಯೊಬ್ಬರಿಗೆ ಕೊರೊನಾ ಸೋಂಕು…