ಕನ್ನಡದ ʻಲಾʼ ಸಿನಿಮಾ ಬಿಡುಗಡೆಯ ಬಗ್ಗೆ ಚಿತ್ರದ ನಾಯಕಿ ಬಹಳ ಉತ್ಸುಕರಾಗಿದ್ದಾರೆ. ಇದೇ ಜುಲೈ 17 ಕ್ಕೆ ಅಮೆಜಾನ್‌ ಪ್ರೈಮ್‌ನಲ್ಲಿ ಬಿಡುಗಡೆಯಾಗ್ತಿರುವ ಹಿನ್ನೆಲೆಯಲ್ಲಿ ನಟಿ ರಾಗಿಣಿ ಚಂದ್ರನ್‌ ʻಲಾʼ ಸಿನಿಮಾದಲ್ಲಿ ತಮ್ಮ ಪಾತ್ರದ ಬಗ್ಗೆ ಕೆಲ ಕುತೂಹಲಕಾರಿ ಮಾಹಿತಿಗಳನ್ನ ಹಂಚಿಕೊಂಡಿದ್ದಾರೆ.
ʻಲಾʼ ಸಿನಿಮಾ ಕ್ರೈಂ ಥ್ರಿಲ್ಲರ್‌ ಕಥೆಯನ್ನ ಹೊಂದಿದ್ದು, ಇಲ್ಲಿ ನ್ಯಾಯಕ್ಕಾಗಿ ಹೋರಾಡುವ ನಂದಿನಿ ಪಾತ್ರದ ಸುತ್ತ ಕಥೆ ಇದ್ದು, ಆಸಕ್ತಿಕರ ನಿರೂಪಣೆ ಈ ಚಿತ್ರದ ಪ್ಲಸ್‌ ಪಾಯಿಂಟ್‌ ಎನ್ನುತ್ತಾರೆ ರಾಗಿಣಿ ಚಂದ್ರನ್‌.

ನಟಿ ರಾಗಿಣಿ ಚಂದನ್


ʻಲಾʼ ಚಿತ್ರದಲ್ಲಿ ಅಭಿನಯಿಸಲು ಸಿಕ್ಕ ಅವಕಾಶದ ಬಗ್ಗೆ ಮಾತನಾಡುತ್ತಾ, ತಾವು ಈ ಸಿನಿಮಾದಲ್ಲಿ ಅಭಿನಯಿಸಲು ಈ ಚಿತ್ರಕಥೆಯೇ ಕಾರಣ. ನಿರ್ದೇಶಕ ರಘು ಸಮರ್ಥ್‌ ಚಿತ್ರದ ಬಗ್ಗೆ ಹೇಳಿದಾಗ ಸ್ಕ್ರಿಪ್ಟ್‌ ಇಷ್ಟವಾಗಿದ್ದರಿಂದ ಈ ಚಿತ್ರದಲ್ಲಿ ಅಭಿನಯಿಸಿದ್ದಾಗಿ ತಿಳಿಸಿದ್ದಾರೆ.

ಸ್ಯಾಂಡಲ್‌ವುಡ್‌ನಿಂದ ಡಿಜಿಟಲ್‌ನಲ್ಲಿ ಬಿಡುಗಡೆಯಾಗ್ತಿರುವ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರೋ ʻಲಾʼ ಪುನೀತ್‌ ರಾಜ್‌ ಕುಮಾರ್‌ ರವರ ಪಿಆರ್‌ಕೆ ಪ್ರೊಡಕ್ಷನ್‌ನಲ್ಲಿ ರೂಪುಗೊಂಡಿದೆ. ಅಮೆಜಾನ್‌ ಪ್ರೈಮ್‌ ವಿಡಿಯೋದಲ್ಲಿ ಇದೇ ಜೂನ್‌ 17 ರಂದು ಭಾರತ ಸೇರಿದಂತೆ ವಿಶ್ವದಾದ್ಯಂತ 200 ದೇಶಗಳಲ್ಲಿ ಬಿಡುಗಡೆಯಾಗಲಿದೆ.


ರೊಮ್ಯಾಂಟಿಕ್‌ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸುವುದು ನನಗೆ ಇಷ್ಟವಿರಲಿಲ್ಲ. ಚಾಲೆಂಜಿಂಗ್‌ ಪಾತ್ರ ಹಾಗೂ ಉತ್ತಮ ಚಿತ್ರಕಥೆ ಹೊಂದಿರುವ ʻಲಾʼ ಚಿತ್ರದಲ್ಲಿ ಅಭಿನಯಿಸಿರುವುದು ತಮಗೆ ಸಂತಸದ ವಿಚಾರ ಎನ್ನುತ್ತಾರೆ ರಾಗಿಣಿ ಚಂದ್ರನ್‌.


ʻಲಾʼ ಚಿತ್ರಕ್ಕೆ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಮತ್ತು ಎಂ.ಗೋವಿಂದ ನಿರ್ಮಾಪಕರಾಗಿದ್ದು, ರಘು ಸಮರ್ಥ್‌ ನಿರ್ದೇಶಕರು. ರಾಗಿಣಿ ಚಂದ್ರನ್‌ ಪ್ರಮುಖ ಪಾತ್ರದಲ್ಲಿರೋ ಈ ಚಿತ್ರದಲ್ಲಿ ಮುಖ್ಯಮಂತ್ರಿ ಚಂದ್ರ, ಅಚ್ಯುತ್‌ ಕುಮಾರ್‌, ಸುಧಾರಾಣಿ ಅಭಿನಯಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜವೀರಮದಕರಿ ನಾಯಕ ಚಿತ್ರಿಕರಣಕ್ಕೆ ಸಿದ್ಧತೆ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಜ ವೀರಮದಕರಿ ನಾಯಕ ಸಿನಿಮಾ ಮತ್ತೆ ಆಗಸ್ಟ್ ನಲ್ಲಿ ಚಿತ್ರೀಕರಣ ಆರಂಭಿಸಲು ಚಿತ್ರತಂಡ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಕೊರೋನಾದಿಂದಾಗಿ ಸಿನಿಮಾ ಚಿತ್ರಿಕರಣ ಅರ್ಧಕ್ಕೇ ಸ್ಥಗಿತಗೊಂಡಿತ್ತು. ಆಗಸ್ಟ್ ಅಷ್ಟೊತ್ತಿಗೆ ಚಿತ್ರಿಕರಣಕ್ಕೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಿಂದ ಚಿತ್ರತಂಡ ಚಿತ್ರಿಕರಣದ ತಯಾರಿ ನಡೆಸಿದೆ. ಕೊರೊನಾ ಕಾರಣದಿಂದ ಹಲವು ಮುಂಜಾಗೃತ ಕ್ರಮಗಳ ಮೂಲಕ ಸರ್ಕಾರ‌ ಚಿತ್ರಿಕರಣಕ್ಕೆ ಅನುಮತಿ ನೀಡಿದರೆ ಚಿತ್ರಿಕರಣ ಆರಂಭಿಸುವ ತಯಾರಿಯಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಇದ್ದಾರೆ.

ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕನ್ನಡಿಗನ್ನು ರಕ್ಷಿಸಿದ ನಟ!

ಕೊರೊನಾ ಲಾಕ್ ಡೌನ್ ನಿಂದಾಗಿ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕರ್ನಾಟಕದ ನೂರಾರು ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ತಲುಪಿಸಲು ಬಾಲಿವುಡ್ ನಟ ಸೋನು ಸೂದ್ ಮುಖ್ಯ ಪಾತ್ರ ವಹಿಸಿದ್ದರು.

ಲಕ್ಷ್ಮೇಶ್ವರದಲ್ಲಿ ಅನಗತ್ಯ ಓಡಾಡುವವರಿಗೆ ಮಹಮ್ಮದ್ ಗೌಸ್ ಅವರಿಂದ ವಾರ್ನಿಂಗ್

ಐದು ದಿನದ ಕಾಲ ನಗರದಲ್ಲಿ ಕಠಿಣ ಲಾಕ್ಡೌನ್ ವಿಧಿಸಲಾಗಿದ್ದ ಹಿನ್ನೆಲೆಯಲ್ಲಿ ಶುಕ್ರವಾರ ಪಟ್ಟಣದಲ್ಲಿ ಲಾಕ್ಡೌನ್ ಸ್ಥಿತಿಗತಿಯನ್ನು ಪರಿಶೀಲನೆ ಮಾಡಲು ಜಿಲ್ಲಾ ಪರೀಕ್ಷಾರ್ಥ ಅಸಿಸ್ಟೆಂಟ್ ಕಮಿಷನರ್ ಮಹಮ್ಮದ್ ಗೌಸ್ ಕೈಸರ್ ಭೇಟಿ ನೀಡಿದ್ದರು.

ಶಕುಂತಲಾ ದೇವಿ ಆದ ಹಾಟ್ ಬೆಡಗಿ ವಿದ್ಯಾಬಾಲನ್!

ಮುಂಬಯಿ: ಬಾಲಿವುಡ್‌ ಹಾಟ್ ಬೆಡಗಿ ವಿದ್ಯಾ ಬಾಲನ್ ಅವರ ಚಿತ್ರ ಶಕುಂತಲಾ ದೇವಿ ಒಟಿಟಿ (ಓವರ್…