ಗದಗ: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಟ ನಡೆಸಿದ್ದವರ ವಿರುದ್ಧ ಇಂದು ತಹಶೀಲ್ದಾರ್ ಗರಂ ಆದರು. ಗದಗ ತಹಶಿಲ್ದಾರ್ ಶ್ರೀನಿವಾಸ ಕುಲಕರ್ಣಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಹೋಂ ಕ್ವಾರಂಟೈನ್ ಉಲ್ಲಂಘಿಸಿದವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಗದಗ ನಗರ, ನಾಗಾವಿ ತಾಂಡಾ, ಅಡವಿಸೋಮಾಪೂರ ತಾಂಡಾ, ಕೋಟುಮಚಗಿ ಗ್ರಾಮದಲ್ಲಿ ಹೋಂ ಕ್ವಾರಂಟೈನ್ ಉಲ್ಲಂಘಿಸಿ ಓಡಾಟ ನಡೆಸುತ್ತಿದ್ದಾರೆ ಎನ್ನುವ ದೂರಿನ ಮೇಲೆ ತಹಶೀಲ್ದಾರ್, ಹೋಂ ಕ್ವಾರಂಟೈನ್ ಉಲ್ಲಂಘಿಸಿದ ಮೂವರನ್ನು ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಿದರು.
You May Also Like
ಗೃಹ ರಕ್ಷಕ ದಳದ ಸದಸ್ಯ ಸ್ಥಾನಗಳ ನೋಂದಣಿಗೆ ಅರ್ಜಿ ಆಹ್ವಾನ
ಜಿಲ್ಲೆಯ ಗೃಹ ರಕ್ಷಕದಳದ ವಿವಿಧ ಘಟಕಗಳಲ್ಲಿ ಖಾಲಿ ಇರುವ 194 ಸ್ವಯಂ ಸೇವಕ ಗೃಹ ರಕ್ಷಕ ಸದಸ್ಯ ಸ್ಥಾನಗಳಿಗೆ ನೋಂದಣಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ಎಲ್ಲಾ ತಾಲೂಕಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಜಿಲ್ಲಾ ಗೃಹ ರಕ್ಷಕ ದಳದ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 9 ರಂದು ಸಂಜೆ 4 ಗಂಟೆಯೊಳಗೆ ಸಲ್ಲಿಸಬೇಕು.
- ಉತ್ತರಪ್ರಭ
- September 30, 2020
ತಮ್ಮ ಅಭ್ಯರ್ಥಿಗಳು ಗೆಲ್ಲಲಿ ಎಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ!
ಬೆಂಗಳೂರು : ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಮೂರೂ ಪಕ್ಷಗಳ ನಡುವೆ ಪೈಪೋಟಿ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
- ಉತ್ತರಪ್ರಭ
- November 4, 2020