ಗದಗ: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಟ ನಡೆಸಿದ್ದವರ ವಿರುದ್ಧ ಇಂದು ತಹಶೀಲ್ದಾರ್ ಗರಂ ಆದರು. ಗದಗ ತಹಶಿಲ್ದಾರ್ ಶ್ರೀನಿವಾಸ ಕುಲಕರ್ಣಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಹೋಂ ಕ್ವಾರಂಟೈನ್ ಉಲ್ಲಂಘಿಸಿದವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಗದಗ ನಗರ, ನಾಗಾವಿ ತಾಂಡಾ, ಅಡವಿಸೋಮಾಪೂರ ತಾಂಡಾ, ಕೋಟುಮಚಗಿ ಗ್ರಾಮದಲ್ಲಿ ಹೋಂ ಕ್ವಾರಂಟೈನ್ ಉಲ್ಲಂಘಿಸಿ ಓಡಾಟ ನಡೆಸುತ್ತಿದ್ದಾರೆ ಎನ್ನುವ ದೂರಿನ ಮೇಲೆ ತಹಶೀಲ್ದಾರ್, ಹೋಂ ಕ್ವಾರಂಟೈನ್ ಉಲ್ಲಂಘಿಸಿದ ಮೂವರನ್ನು ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಿದರು.
You May Also Like
ತರಬೇತಿಗೆ ಅರ್ಜಿ ಆಹ್ವಾನ
ಕೌಶಲ್ಯಾಭಿವೃದ್ಧಿ , ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಂಸ್ಥೆಯಾದ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ ( ಸಿಡಾಕ) ಧಾರವಾಡ ಹಾಗೂ ಸಿಡಾಕ್ ಜಿಲ್ಲಾ ಕಚೇರಿ ಗದಗ ಇವರ ಸಹಯೋಗದಲ್ಲಿ ಉದ್ಯಮ ಕ್ಷೇತ್ರದಲ್ಲಿ ಆಸಕ್ತಿ ಇರುವ ಅಬ್ಯರ್ಥಿಗಳಿಗೆ 30 ದಿನಗಳ ಉಚಿತ ಬ್ಯೂಟಿಷಿಯನ್ ಹಾಗೂ ಕಾಸ್ಮೆಟಾಲಜಿ ಕೌಶಲ್ಯಾಧಾರಿತ ಉದ್ಯಮಶೀಲತಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
- ಉತ್ತರಪ್ರಭ
- February 22, 2021