ಗದಗ: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಟ ನಡೆಸಿದ್ದವರ ವಿರುದ್ಧ ಇಂದು ತಹಶೀಲ್ದಾರ್ ಗರಂ ಆದರು. ಗದಗ ತಹಶಿಲ್ದಾರ್ ಶ್ರೀನಿವಾಸ ಕುಲಕರ್ಣಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಹೋಂ ಕ್ವಾರಂಟೈನ್ ಉಲ್ಲಂಘಿಸಿದವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಗದಗ ನಗರ, ನಾಗಾವಿ ತಾಂಡಾ, ಅಡವಿಸೋಮಾಪೂರ ತಾಂಡಾ, ಕೋಟುಮಚಗಿ ಗ್ರಾಮದಲ್ಲಿ ಹೋಂ ಕ್ವಾರಂಟೈನ್ ಉಲ್ಲಂಘಿಸಿ ಓಡಾಟ ನಡೆಸುತ್ತಿದ್ದಾರೆ ಎನ್ನುವ ದೂರಿನ ಮೇಲೆ ತಹಶೀಲ್ದಾರ್, ಹೋಂ ಕ್ವಾರಂಟೈನ್ ಉಲ್ಲಂಘಿಸಿದ ಮೂವರನ್ನು ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಿದರು.
You May Also Like
ಮುಳುಗದ ರವಿ ಬೆಳಗು
ಪತ್ರಕರ್ತ, ಕವಿ, ಕತೆಗಾರ, ಅನುವಾದಕ, ವಿವಾದಾತ್ಮಕ ಬರಹಗಾರ ರವಿ ಬೆಳಗೆರೆ ನಿರೀಕ್ಷಿತವಾಗಿ ದೈಹಿಕವಾಗಿ ಹೋಗಿದ್ದಾರೆ. ಕುಡಿತ, ಸಿಗರೇಟ್, ರಸಿಕತೆ ರವಿಯನ್ನು ಬಲಿ ತೆಗೆದುಕೊಂಡಿದೆ. ಯಾವತ್ತಾದರೂ ಒಂದು ದಿನ ಸಾಯೋದೇ, ಹ್ಯಾಗ ಬದುಕಿದರೆ ಏನು? ಎಂಬ ಉಡಾಫೆಯೂ ಇತ್ತಲ್ಲ! ಆದರೆ ರವಿ very very colourful ಕನಸುಗಾರ. ಬದುಕಿನ ರಹಸ್ಯಗಳನ್ನು ಬಿಚ್ಚಿಟ್ಟ ಎದೆಗಾರ. ತುಂಬಾ ಕಾಡಿ ಕನಲಿದ ಹುಟ್ಟಿನ ರಹಸ್ಯ ಬಿಚ್ಚಿಟ್ಟು ನಿರಾಳವಾದ ಹೊತ್ತಲ್ಲಿ ಜೀವ ಬಿಟ್ಟ ಜಾದೂಗಾರ.
- ಉತ್ತರಪ್ರಭ
- November 13, 2020