ಗದಗ: ಜಿಲ್ಲೆಯಲ್ಲಿ ಈಗಾಗಲೇ ಕೆಲವೆಡೆ ಉತ್ತಮ ಮಳೆಯಾಗಿದ್ದು ಇನ್ನು ಕೆಲವು ಭಾಗದಲ್ಲಿ ಮಳೆಯ ದರ್ಶನವಾಗಿಲ್ಲ. ಮಳೆ ನೆಚ್ಚಿ‌ ಬಿತ್ತಿದ ರೈತನ ಆತಂಕ ಒಂದೆಡೆಯಾದರೆ ಕೆಲ ಭಾಗಗಳಲ್ಲಿ ಇನ್ನು ಬಿತ್ತಿಗೆಯೇ ಆರಂಭವಾಗಿಲ್ಲ. ಆದರೆ ಕೃಷಿ ಇಲಾಖೆ ಮಾಹಿತಿ‌ ಪ್ರಕಾರ ಜಿಲ್ಲೆಯಲ್ಲಿ ಶೇ.40 ರಷ್ಟು ಮಳೆಯ ಕೊರತೆ ಇದೆ.
ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅಧ್ಯಕ್ಷತೆಯಲ್ಲಿ
ಜಿಲ್ಲಾಡಳಿತ ಭವನದಲ್ಲಿಂದು ನಡೆದ ಕೃಷಿ ಇಲಾಖೆ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್ ಈ ಮಾಹಿತಿ ನೀಡಿದರು.

ಮಳೆಯ ವಿವರ
ಜಿಲ್ಲೆಯ ವಾರ್ಷಿಕ ಸರಾಸರಿ ಮಳೆ ಪ್ರಮಾಣ 656.0 ಮಿ.ಮೀ. ಇದ್ದು, ಜೂನ್ ಅಂತ್ಯದವರೆಗೆ 193 ಮಿ,ಮೀ ವಾಡಿಕೆಗೆ 170ಮಿ.ಮೀ. (ಶೇ.88) ಮಳೆ ಆಗಿದೆ. ಕಳೆದ ತಿಂಗಳಲ್ಲಿ 88 ಮಿಮೀ ವಾಡಿಕೆ ಮಳೆಗಿಂತ 53 ಮಿ.ಮೀ. ಮಳೆಯಾಗಿದ್ದು, ಶೇ.40ರಷ್ಟು ಮಳೆಯ ಕೊರತೆ ಆಗಿರುವುದರಿಂದ ಬೆಳೆಗಳು ಬಾಡುತ್ತಿವೆ.

ಬಿತ್ತನೆ ಪ್ರಮಾಣ
ಮುಂಗಾರು ಹಂಗಾಮಿನ ಗುರಿ 28,0600 ಹೆಕ್ಟೆರ್ ಪ್ರದೇಶದಲ್ಲಿ ವಿವಿಧ ಬೆಳೆಗಳ ಬಿತ್ತನೆ ಗುರಿ ಹೊಂದಲಾಗಿದೆ. ಇಲ್ಲಿಯವರೆಗೆ 1,32,196 ಹೆಕ್ಟೆರ್ (ಶೇ. 47) ಪ್ರದೇಶದಲ್ಲಿ ಬಿತ್ತನೆಯಾಗಿದೆ. ಜಿಲ್ಲೆಯ ಪ್ರಮುಖ ಬೆಳೆಗಳಾದ ಜೋಳ 1,128 ಹೆಕ್ಟೆರ್, 22,439, ಹೆಸರು 75,935, ಶೇಂಗಾ 14,393, ಸೂರ್ಯಕಾಂತಿ 1,831 ಹಾಗೂ ಹತ್ತಿ 12,175 ಹೆಕ್ಟೆರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ ಎಂದರು.

ಬೀಜ, ಗೊಬ್ಬರ ಕೊರತೆ ಇಲ್ಲ
ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ 20,000ಕ್ವಿಂಟಾಲ್ ಬಿತ್ತನೆ ಬೀಜ ಬೇಡಿಕೆ ಇದ್ದು, ಬಿತ್ತನೆ ಬೀಜ ವಿತರಿಸಲು 11 ರೈತ ಸಂಪರ್ಕ ಕೇಂದ್ರಗಳು, 6 ಹೆಚ್ಚುವರಿ ಕೇಂದ್ರಗಳಲ್ಲಿ 5,563 ಕ್ವಿಂಟಾಲ್ ದಾಸ್ತಾನು ಮಾಡಲಾಗಿದೆ. ಅದರಂತೆ 4,206 ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗಿದ್ದು, 1,357 ದಾಸ್ತಾನು ಇದೆ. ಖಾಸಗಿ ಮಾರಾಟಗಾರರಲ್ಲಿ 12,794 ಕ್ವಿಂಟಾಲ್ ದಾಸ್ತಾನು ಮಾಡಲಾಗಿದ್ದು, 10,189 ಕ್ವಿಂಟಾಲ್ ಬೀಜ ವಿತರಣೆಯಾಗಿದೆ.

ಮುಂಗಾರು ಹಂಗಾಮಿಗೆ 41,112 ಮೆಟ್ರಿಕ್ ಟನ್ ರಾಸಾಯನಿಕ ಗೊಬ್ಬರಗಳ ಬೇಡಿಕೆ ಇದ್ದು, ಜೂನ್ ಅಂತ್ಯದವರೆಗೆ 30,079 ಮೆಟ್ರಿಕ್ ಟನ್ ದಾಸ್ತಾನು ಮಾಡಲಾಗಿದೆ. ಈಗಾಗಲೇ 17,102 ಮೆಟ್ರಿಕ್ ಟನ್ ರಸಗೊಬ್ಬರ ಮಾರಾಟವಾಗಿದ್ದು, 12,976 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದೆ. ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಾಸಾಯನಿಕ ಗೊಬ್ಬರಗಳ ಕೊರತೆ ಇಲ್ಲ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ 2 ಸಾವಿರ ತೋಟ ನಿರ್ಮಾಣ ಗುರಿ: ಜಿ.ಪಂ ಅಧ್ಯಕ್ಷ ರಾಜೂಗೌಡ

ಗದಗ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 2 ಸಾವಿರ ಹೊಸ ತೋಟಗಳನ್ನು ನಿರ್ಮಿಸಲು ತೋಟಗಾರಿಕೆ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜೂಗೌಡ ಕೆಂಚನಗೌಡ್ರ ಸೂಚಿಸಿದರು.

ಅಗರಬತ್ತಿ ಮಾರುವ ಕುಟುಂಬದಲ್ಲಿ ಸಾಗರನ ಸಾಧನೆಯ ಸುವಾಸನೆ

ಸಾಧೆನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸಾಧಿಸಬೇಕು ಎನ್ನುವ ಛಲವೊಂದಿದ್ದರೆ, ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಅಗರಬತ್ತಿ ಮಾರುವ ಕುಟುಂಬವೊಂದವರ ಕುವರನ ಕಥೆ ತಾಜಾ ಉದಾಹರಣೆ.

ಸಿ.ಟಿ ರವಿ ಚೀಟಿ ಆಟ: ಕೊನೆಗೂ ಪಾಸಿಟಿವ್ ಅಂತೆ!

ಸಚಿವ ಸಿ.ಟಿ.ರವಿ ಎರಡು ದಿನದಿಂದ ತಮ್ಮ ಕೋರೊನಾ ಪರೀಕ್ಷೆಯ ಕುರಿತು ಟ್ವೀಟ್ ಮಾಡಿದ್ದೇ ಮಾಡಿದ್ದು. ಅವರ ಅನುಭವ ನೋಡಿದರೆ ಟೆಸ್ಟ್ ಫಲಿತಾಂಶ ‘ಪಾಸಿಟಿವ್, ನೆಗೆಟಿವ್’ ಎಂಬ ಎರಡು ಚೀಟಿಯಲ್ಲಿ ಒಂದನ್ನು ಎತ್ತಿಕೊಳ್ಳುವ ಆಟದಂತಿದೆ. ಇದು ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕನ್ನಡಿಯೂ ಆಗಿದೆ.

ವಿಶಾಖಪಟ್ಟಣ ಘಟನೆ: ಮೃತ ಕುಟುಂಬಕ್ಕೆ ಕೋಟಿ ರೂ, ಪರಿಹಾರ ಘೋಷಣೆ

ವಿಷಾನಿಲ ದುರ್ಘಟನೆಗೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಘೋಷಿಸಲಾಗಿದೆ.