ಬೆಂಗಳೂರು: ಕೊರೊನಾ ಕಾರಣದಿಂದ ಗ್ರಾಮ ಪಂಚಾಯತಿ ಚುನಾವಣೆ ಮುಂದೂಡಲಾಗಿತ್ತು. ಇದಕ್ಕೆ ವಿರೋಧ ಪಕ್ಷದಿಂದ ವ್ಯಾಪಕ ವಿರೋಧವು ವ್ಯಕ್ತವಾಗಿತ್ತು. ಆದರೆ ಕೊರೊನಾ ಮುಂಜಾಗೃತೆಗಾಗಿ ಚುನಾವಣೆಯನ್ನು ಮುಂದೂಡಿ ಆಡಳಿತಾಧಿಕಾರಿ ನೇಮಿಸಲಾಗಿತ್ತು. ಆದರೆ ಇದೀಗ ಅಕ್ಟೋಬರ್ ಮೊದಲ ವಾರದಲ್ಲಿ ಅವಧಿ ಮುಗಿದ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಚುನಾವಣೆ ಮುಂದೂಡಿದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದ್ದು, ವಿಚಾರಣೆ ಕೋರ್ಟ್ ಕೈಗೆತ್ತಿಕೊಂಡಿದೆ. ಹೀಗಾಗಿ ಮಾಹಿತಿಯ ಪ್ರಕಾರ ಜುಲೈ 25ಕ್ಕೆ ಗ್ರಾಮ ಪಂಚಾಯತಿ ಚುನಾವಣೆ ಮೀಸಲಾತಿ ನೋಟಿಫಿಕೇಶನ್ ಕಾರ್ಯ ಮುಕ್ತಾಯವಾಗಲಿದ್ದು, ಸೆಪ್ಟೆಂಬರ್ ವೇಳೆಗೆ ಮತದಾರರ ಅಂತಿಮ ಪಟ್ಟಿ ಸಿದ್ಧವಾಗಲಿದೆ. ಇದಾದ ನಂತರ 5800 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ಘೋಷಣೆ ಮಾಡಲಾಗುವುದು. ಕೊರೋನಾ ಪರಿಸ್ಥಿತಿ ಆಧರಿಸಿ ಅಕ್ಟೋಬರ್ ಮೊದಲ ವಾರದ ವೇಳೆಗೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗದ ವತಿಯಿಂದ ಪ್ರಮಾಣ ಪತ್ರ ಸಲ್ಲಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಪೈಕಿ ಕೊರೊನಾಗೆ ಬಲಿಯಾದವರು ಎಷ್ಟು ಜನ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಸದ್ಯ ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಪೈಕಿ ಶೇ. 11ರಷ್ಟು ಸಿಬ್ಬಂದಿಗೆ ಸೋಂಕು ತಗುಲಿದ್ದು, ಈ ಪೈಕಿ 87 ಜನ ಬಲಿಯಾಗಿದ್ದಾರೆ.

ಶಾಮನೂರು ಒಡೆತನದ ಮೆಡಿಕಲ್ ಕಾಲೇಜುಗಳ ಮೇಲೆ ಐಟಿ ರೈಡ್

ಮಾಜಿ ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಒಡೆತನದ ಮೆಡಿಕಲ್ ಕಾಲೇಜುಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಕ್ವಾರಂಟೈನ್ ಗೆ ಒಳಪಡಿಸಲು ಸೋಂಕಿತ ಮಹಿಳೆ ಸಂಪರ್ಕಕ್ಕೆ ಸಿಗುತ್ತಿಲ್ಲ: ಡಿಸಿ ಸುಂದರೇಶ್ ಬಾಬು

ಮಹಿಳೆ ಕ್ವಾರಂಟೈನ್ ನಿಂದ ತಪ್ಪಿಸಿಕೊಂಡಿದ್ದಾಳೆ ಎಂದು ಏಕಾಏಕಿ ಹೇಳಬಾರದು. ಅವರನ್ನು ಕ್ವಾರಂಟೈನ್ ಗೆ ಒಳಪಡಿಸಲೆಂದೇ ಸಂಪರ್ಕಿಸಿದಾಗ ಆ ವಿಳಾಸದಲ್ಲಿ ಅವರಿಲ್ಲ. ಸ್ವಲ್ಪ ಕಾಯುವ ತಾಳ್ಮೆ ಇರಲಿ.

9 ರಿಂದ 12ನೇ ತರಗತಿಗಳು ಸದ್ಯದಲ್ಲಿ ಆಗಲಿವೆ ಓಪನ್!

ಬೆಂಗಳೂರು : ಹೈಸ್ಕೂಲ್ ಹಾಗೂ ಪದವಿ ಪೂರ್ವ ಕಾಲೇಜು ತೆರೆಯುವ ಸಿದ್ಧತೆ ರಾಜ್ಯದಲ್ಲಿ ನಡೆದಿದೆ. ಮುಂದಿನ ತಿಂಗಳಿನಿಂದ ಒಂಭತ್ತರಿಂದ 12ನೇ ತರಗತಿಯವರೆಗೆ ತರಗತಿಗಳನ್ನು ಆರಂಭಿಸಲು ಸದ್ಯ ಖಾಸಗಿ ಶಾಲಾ ಆಡಳಿತ ಮಂಡಳಿಗಳು ಒಪ್ಪಿಗೆ ಸೂಚಿಸಿವೆ.