ಮಂಗಳೂರು : ಅಪ್ರಾಪ್ತೆಯನ್ನು ಅಪಹರಿಸಿ ಮದುವೆಯಾದ ಆರೋಪಿಗೆ ಕೊರೊನಾ ಸೋಂಕು ತಗುಲಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.

ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಯುವಕನೊಬ್ಬ ಬಾಲಕಿಯನ್ನು ಕಿಡ್ನಾಪ್ ಮಾಡಿ ವಿವಾಹ ಮಾಡಿಕೊಂಡಿದ್ದ. ಹೀಗಾಗಿ ಬಾಲಕಿಯ ಮನೆಯವರು ಯುವಕನ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸರು ಯುವಕನನ್ನು ಬಂಧಿಸಿದ್ದು, ಬಂಧಿತನಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಕೊರೊನಾ ಪರೀಕ್ಷೆ ಮಾಡಿಸಿದಾಗ ಸೋಂಕು ದೃಢಪಟ್ಟಿದೆ.

ಬಂಧಿತ ಆರೋಪಿಗೆ ಸೋಂಕು ತಗುಲಿದ್ದು ತಿಳಿಯುತ್ತಿದ್ದಂತೆ ಆತನನ್ನು ಬಂಧಿಸಿದ್ದ ಐವರು ಪೊಲೀಸರನ್ನು ಕ್ವಾರಂಟೈನ್ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಮುಂದುವರಿದ ಸಾರಿಗೆ ನೌಕರರ ಮುಷ್ಕರ: ಬಿಕೋ ಎನ್ನುತ್ತಿದೆ ಗಜೇಂದ್ರಗಡ ಬಸ್ ನಿಲ್ದಾಣ

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಸಾರಿಗೆ ನೌಕರರ ಅನಿರ್ಧಿಷ್ಠಾವಧಿ ಮುಷ್ಕರ ಮೂರನೇ ದಿನಕ್ಕೆ ಮುಂದುವರೆದಿದೆ. ಹೀಗಾಗಿ ಗಜೇಂದ್ರಗಡ ಬಸ್ ನಿಲ್ದಾಣದಲ್ಲಿ ಸಾರಿಗೆ ಸಂಚಾರ ಇಲ್ಲದೇ, ಬಿಕೋ ಎನ್ನುತ್ತಿತ್ತು.

ಕಟ್ಟಡ ಕಾರ್ಮಿಕರು ಲಾಕ್ ಡೌನ್ ಪರಿಹಾರಧನ ಪಡೆಯಲು ಇರುವ ಷರತ್ತುಗಳೇನು?

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಘೋಷಿಸಿರುವಂತೆ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ರೂ.3,000 ಲಾಕ್ ಡೌನ್ ವಿಶೇಷ ಪರಿಹಾರಧನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಕೇಂದ್ರ ಸರ್ಕಾರದ ಅನುಮತಿ : ಸಚಿವ ಎಸ್.ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ ಹಾಗೂ ಮೈಸೂರಿನಲ್ಲಿ ಪ್ಲಾಸ್ಮಾಥೆರಪಿ ಚಿಕಿತ್ಸೆಯನ್ನು ಪ್ರಾಯೋಗಿಕವಾಗಿ ಆರಂಭಿಸಲು ಕೇಂದ್ರ…