ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.
ಪ್ರತಿಜ್ಞಾ ದಿನ ಎಂಬ ಕಾರ್ಯಕ್ರಮದಡಿ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಕಾಂಗ್ರೆಸ್ ನ ಸಾರಥ್ಯ ವಹಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ನಾಯಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗಾಗಿ ಬೇರೆ ವಿಧಾನಗಳ ಮೂಲಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.
ಗ್ರಾಮ ಪಂಚಾಯ್ತಿ, ನಗರ ಸಭೆ ಹಾಗೂ ಪುರಸಭೆ ಸೇರಿದಂತೆ ಸುಮಾರು 10 ಸಾವಿರಕ್ಕೂ ಅಧಿಕ ಸ್ಥಳಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ಭಾಗಿಯಾದರು.
ಈ ಸಂದರ್ಭದಲ್ಲಿ ಭಾರತ-ಚೀನಾ ಗಡಿಯಲ್ಲಿ ಸಂಭವಿಸಿದ ಘರ್ಷಣೆಯಲ್ಲಿ ಹುತಾತ್ಮರಾದ 20 ಭಾರತೀಯ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ರಾಜ್ಯದಾದ್ಯಂತ ಎಲ್ಲಾ ಕೇಂದ್ರಗಳಲ್ಲಿ ಕೆಪಿಸಿಸಿ ಕಾರ್ಯಕರ್ತರು ಹಾಗೂ ಮುಖಂಡರು ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂವಿಧಾನದ ಪೂರ್ವ ಪೀಠಿಕೆಯನ್ನು ಒಕ್ಕೊರಲಿನಿಂದ ಪಠಿಸಲಾಯಿತು.
ಮಾಜಿ ಸಿಎಂ ಸಿದ್ದರಾಮಯ್ಯ, ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು. ನಿಕಟ ಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಂದ ಡಿ.ಕೆ. ಶಿವಕುಮಾರ್ ಧ್ವಜ ಪಡೆದರು.

Leave a Reply

Your email address will not be published. Required fields are marked *

You May Also Like

ರೈತರ ಮೇಲೆ ಕಾನೂನು ಕ್ರಮದ ಬೆದರಿಕೆಗೆ ಕುಮಾರಸ್ವಾಮಿ ವಿರೋಧ

ರೈತರ ಮೇಲೆ ದೌರ್ಜನ್ಯ ಎಸಗುವ, ಗುಂಡಿಕ್ಕುವ, ಕಾನೂನು ಕ್ರಮದ ಅಸ್ತ್ರ ಪ್ರಯೋಗಿಸಲು ಈ ಸರ್ಕಾರ ತುದಿಗಾಲಿನ ಮೇಲೆ ನಿಂತಂತೆ ಕಾಣುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

1xChoice Официальный Сайт Регистрация И Вход В Личный Кабинет 1хбет

1xBet Вход Вход В 1хбет На Официальный Сайт Через Актуальное Зеркало Под…

ನೌಕರರ ವಲಯದಲ್ಲಿ ನಿರಾಸೆ ಕಾಮೋ೯ಡ ಮೂಡಿಸಿದ ಬಜೆಟ್-ಚಂದ್ರಶೇಖರ ನುಗ್ಲಿ

ಆಲಮಟ್ಟಿ : ಮುಖ್ಯ ಮಂತ್ರಿಗಳು ಇಂದು ಮಂಡಿಸಿದ ಬಜೆಟ್ ರಾಜ್ಯದ ನೌಕರರಿಗೆ ಹಾಗೂ ಶಿಕ್ಷಕರ ಸಮೂಹಕ್ಕೆ…

ಗದಗನಲ್ಲಿ ಕೊರೊನಾ ಭೀತಿ: ನರಳುತ್ತಿರುವ ವ್ಯಕ್ತಿಗೆ ನೆರವು ನೀಡಲು ಭಯಪಟ್ಟ ಜನತೆ!

ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚುತ್ತಿದ್ದು ಜನತೆಯಲ್ಲಿ ಆತಂಕ ಹೆಚ್ಚಿಸಿದೆ. ಹೊಟ್ಟೆ ನೋವಿನಿಂದ ನರಳುತ್ತಿದ್ದ ವ್ಯಕ್ತಿ ನೆರುವಿಗೆ ಯಾರೊಬ್ಬರು ಮುಂದಾಗದ ಅಮಾನವೀಯ ಘಟನೆ ಗದಗ ನಗರದ ಬೆಟಗೇರಿಯಲ್ಲಿ ನಡೆದಿದೆ.