ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.
ಪ್ರತಿಜ್ಞಾ ದಿನ ಎಂಬ ಕಾರ್ಯಕ್ರಮದಡಿ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಕಾಂಗ್ರೆಸ್ ನ ಸಾರಥ್ಯ ವಹಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ನಾಯಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗಾಗಿ ಬೇರೆ ವಿಧಾನಗಳ ಮೂಲಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.
ಗ್ರಾಮ ಪಂಚಾಯ್ತಿ, ನಗರ ಸಭೆ ಹಾಗೂ ಪುರಸಭೆ ಸೇರಿದಂತೆ ಸುಮಾರು 10 ಸಾವಿರಕ್ಕೂ ಅಧಿಕ ಸ್ಥಳಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ಭಾಗಿಯಾದರು.
ಈ ಸಂದರ್ಭದಲ್ಲಿ ಭಾರತ-ಚೀನಾ ಗಡಿಯಲ್ಲಿ ಸಂಭವಿಸಿದ ಘರ್ಷಣೆಯಲ್ಲಿ ಹುತಾತ್ಮರಾದ 20 ಭಾರತೀಯ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ರಾಜ್ಯದಾದ್ಯಂತ ಎಲ್ಲಾ ಕೇಂದ್ರಗಳಲ್ಲಿ ಕೆಪಿಸಿಸಿ ಕಾರ್ಯಕರ್ತರು ಹಾಗೂ ಮುಖಂಡರು ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂವಿಧಾನದ ಪೂರ್ವ ಪೀಠಿಕೆಯನ್ನು ಒಕ್ಕೊರಲಿನಿಂದ ಪಠಿಸಲಾಯಿತು.
ಮಾಜಿ ಸಿಎಂ ಸಿದ್ದರಾಮಯ್ಯ, ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು. ನಿಕಟ ಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಂದ ಡಿ.ಕೆ. ಶಿವಕುಮಾರ್ ಧ್ವಜ ಪಡೆದರು.

Leave a Reply

Your email address will not be published. Required fields are marked *

You May Also Like

ವಾಹನ ಸವಾರರಿಗೆ ಆರ್ ಟಿ ಒ ಶಾಕ್..!

ವಾಹನದ ನಮಬರ್ ಪ್ಲೇಟ್ ಮೇಲೆ ನೋಂದಣಿ ಸಂಖ್ಯೆ ಬಿಟ್ಟು ಬೇರೆ ಏನೇ ಇದ್ದರು ಅಂತಹ ವಾಹನ ಸವಾರರ ಮೇಲೆ ಕ್ರಮ ಜರುಗುಸಲಾಗುವುದು ಎಂದು ಪ್ರದೇಶಿಕ ಸಾರಿಗೆ ಕಚೇರಿ (ಆರ್ ಟಿ ಒ) ಆದೇಶ ಹೊರಡಿಸಿದ್ದು, ಮೇ 12 ರಿಂದಲೇ ಈ ನಿಯಮ ಜಾರಿಗೆ ಬರಲಿದೆ.

ಲಾರಿ ಬೈಕ್ ಅಪಘಾತ ವ್ಯಕ್ತಿ ಸಾವು ಅಪಘಾತಕ್ಕೆ ಪೋಲಿಸ್ ಪೆದೆ ಕಾರಣ, ಗ್ರಾಮಸ್ಥರ ಆರೋಪ

ಮುಳಗುಂದ : ಲಕ್ಷ್ಮೇಶ್ವರ ಕಡೆಯಿಂದ ಮುಳಗುಂದಕ್ಕೆ ಬರುತ್ತಿದ್ದ ಮರಳು ತುಂಬಿದ್ದ ಲಾರಿ ಹಿಂದಕ್ಕೆ ಚಲಿಸಿದ ಪರಿಣಾಮ…

ಕನ್ನಡ ಸಾಹಿತ್ಯ ಸಮ್ಮೇಳನ ತಾಲೂಕಾಧ್ಯಕ್ಷರಾಗಿ ಸಿದ್ದು ಆಯ್ಕೆ.

ನವಲಿ ರಸ್ತೆಯ ಸರಕಾರಿ ಪದವಿ ಪೂರ್ವ ಕಾಲೇಜು ಆವರಣಲ್ಲಿ ಮಾ.7 ರಂದು ನಡೆಯಲಿರುವ ಪ್ರಪ್ರಥಮ ತಾಲೂಕಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಇಂಗ್ಲಿಷ್ ಪ್ರಾಧ್ಯಾಪಕ, ಪ್ರಗತಿ ಪರ ಬರಹಗಾರ ಹಾಗೂ ಗದುಗಿನ ಕನಕದಾಸ ಶಿಕ್ಷಣ ಸಮಿತಿಯ ಪದವಿ ಪೂರ್ವ ಕಾಲೇಜ್‌ನ ಪ್ರಾಚಾರ್ಯ, ಗೌರವ ಸಂಪಾದಕ ಪ್ರೊ.ಸಿದ್ದು ಯಾಪಲಪರವಿ ಆಯ್ಕೆಯಾಗಿದ್ದಾರೆ.

ಸಿಮೆಂಟ್ ಮಿಕ್ಸರ್ ಟ್ರಕ್ ಮೂಲಕ ಪ್ರಯಾಣ – 18 ಜನರ ಬಂಧನ!

ಕೊರೊನಾ ವೈರಸ್ ನ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಹಲವರು ಮನೆ ತಲುಪಲು ಆಗದೆ ತಾವು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಸಿಲುಕಿದ್ದಾರೆ. ಹೀಗೆ ಸಿಲುಕಿ ಹತಾಶರಾಗಿದ್ದ ಕಾರ್ಮಿಕರ ಗುಂಪೊಂದು ಮಹಾರಾಷ್ಟ್ರದಿಂದ ಲಖನೌಗೆ ತೆರಳುತ್ತಿದ್ದ ಸಿಮೆಂಟ್ ಮಿಕ್ಸರ್ ಟ್ರಕ್‌ ಮೂಲಕ ಪ್ರಯಾಣಿಸಲು ತೆರಳಿ ಸಿಕ್ಕಿ ಬಿದ್ದಿದ್ದಾರೆ.