ಗದಗ: ಜಿಲ್ಲೆಯಲ್ಲಿ 180 ಪಾಸಿಟಿವ್ ಕೇಸ್ ಪತ್ತೆಯಾದ ಹಿನ್ನಲೆ ಹಳ್ಳಿ ಹಳ್ಳಿಗೂ ಕೊರೋನಾ ಭಯ ಶುರುವಾಗಿದೆ. ಕೊರೋನಾ ತಡೆಗಟ್ಟಲು ಜಿಲ್ಲಾಡಳಿತ ಹಳ್ಳಿಯ ಗಲ್ಲಿ ಗಲ್ಲಿಯಲ್ಲೂ ಔಷಧ ಸಿಂಪಡಣೆ ಕಾರ್ಯ ನಡೆಸಿದೆ. ಗದಗ ಜಿಲ್ಲೆಯ ಏಳು ತಾಲೂಕಿನ ಗ್ರಾಮಗಳಲ್ಲಿ ಔಷಧ ಸಿಂಪಡಣೆ ಕಾರ್ಯ ಆರಂಭಿಸಿದೆ.

ನರಗುಂದ ತಾಲೂಕಿನ ಬೆನಕನಕೊಪ್ಪ , ಸಂಕದಾಳ ಗ್ರಾಮದಲ್ಲಿ ಔಷಧೀಯ ಸಿಂಪಡಣೆ ಮಾಡಲಾಗಿದೆ. ಗದಗ ತಾಲೂಕಿನ ಹೊಂಬಳ, ಲಕ್ಕುಂಡಿ ಗ್ರಾಮದಲ್ಲಿ ಔಷಧೀಯ ಸಿಂಪಡಣೆ ನಡೆಸಿದ್ದು, ಕೋವಿಡ್-19 ವೈರಸ್ ತಡೆಗಟ್ಟಲ್ಲು ಜಿಲ್ಲಾಡಳಿತ ಹರಸಾಹಸ ಪಡುತ್ತಿದೆ. ಧ್ವನಿ ವರ್ಧಕದ ಮೂಲಕ ಮಾಸ್ಕ್, ಸ್ಯಾನಿಟೈಸರ್ ಬಳಸುವಂತೆ ಸೂಚನೆ ನೀಡಲಾಗುತ್ತಿದೆ. ಜನ್ರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.

ಗ್ರಾಮದಲ್ಲಿ ಗುಟಕಾ, ತಂಬಾಕಿನಂತಹ ಮಾದಕ ವಸ್ತುಗಳನ್ನು ಮಾರಾಟ ಮಾಡಿದ್ರೆ 100 ದಂಡ ವಿಧಿಸಲಾಗುವುದೆಂದು ಎಚ್ಚರಿಕೆ ನೀಡಲಾಗುತ್ತಿದೆ. ಗ್ರಾಮ ಪಂಚಾಯತ ನಿಂದ ದಂಡ ವಸೂಲಿಗೆ ಸೂಚನೆ ನೀಡಲಾಗುತ್ತಿದೆ. ಈ ಮೂಲಕ ಜನರ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದೆ.

Leave a Reply

Your email address will not be published. Required fields are marked *

You May Also Like

ಒಮಿಕ್ರಾನ ಭಿತಿ ಇಂದಲ್ಲಾ ನಾಳೆಯಿಂದ ಶುರು..!

ಉತ್ತರಪ್ರಭ ಗದಗ: ಇಂದು ಗದಗ-ಬೇಟಗೆರಿ ನಗರಸಭೆ ಚುಣಾವಣೆಗೆ ಮತದಾನ ನಡೆಯುತ್ತಿದ್ದು, ನಗರದ 35 ವಾರ್ಡಗಳಲ್ಲಿ ನಡಿಯುತ್ತಿರುವ…

ಸಿಡಿ ಹುಡುಗಿ ಕಿಡ್ನಾಪ್ ಕೇಸ್ : ಪ್ರಕರಣ ವರ್ಗಾವಣೆ

ಮಾಜಿ ಸಚಿನ ರಮೇಶ ಜಾರಕಿಹೋಳಿ ಅವರ ಸಿಡಿ ಪ್ರಕರಣದಲ್ಲಿ ಸಿಲುಕಿಕೊಂಡ ಹುಡುಗಿ ಕಿಡ್ನಾಪ್ ಕೇಸ್ ಈಗ ಬೆಂಗಳೂರಿನ ಆರ್.ಟಿ ನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ.

ರಾಜ್ಯದಲ್ಲಿಂದು 12 ಕೊರೋನಾ ಪಾಸಿಟಿವ್ ಕೇಸ್ ಪತ್ತೆ

ಕೊರೋನಾ ಸೋಂಕಿಗೆ ಸಂಬಂಧಪಟ್ಟಂತೆ ಇವತ್ತಿನ ಅಂಕಿಸಂಖ್ಯೆಯನ್ನು ಗಮನಿಸಿದರೆ ತುಸು ಸಮಾಧಾನವೇ ಸರಿ.

ಹೀಗೆ ಮುಂದುವರೆದರೆ ಸೋಂಕಿತರ ಸಂಖ್ಯೆ ಆಗಷ್ಟ್ ನಲ್ಲಿ ಎಷ್ಟಾಗಲಿದೆ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಹೀಗೆ ಮುಂದುವರೆದರೆ ಆಗಸ್ಟ್ 15ರ ವೇಳೆಗೆ ಸೋಂಕಿತರ ಸಂಖ್ಯೆ 25 ಸಾವಿರಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕೋವಿಡ್-19 ವಾರ್ ರೂಂ ಮುಖ್ಯಸ್ಥ ಮುನೀಶ್ ಮೌದ್ಗಿಲ್ ಅಂದಾಜಿಸಿದ್ದಾರೆ.