ಲಡಾಕ್: ಜೂನ್ 15ರಂದು ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಸಂಘರ್ಷದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಸಂಘರ್ಷ ವಲಯಗಳಾದ ಲಡಾಕ್ ಮತ್ತು ಲೇಹ್ ಪ್ರದೇಶಕ್ಕೆ ಇಂದು ಭೇಟಿ ನೀಡಿ, ದೇಶದ ಸೈನಿಕ ಪಡೆಗಳಿಗೆ ನೈತಿಕ ಸ್ಥೈರ್ಯ ತುಂಬಿದರು.
ಮೂರೂ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಭೂಸೇನೆಯ ಮುಖ್ಯಸ್ಥ ನರವಾಣೆ ಜೊತೆಗಿದ್ದರು.
ಲಡಾಖ್‍ಗೆ ಭೇಟಿ ಕೊಡುವ ಮೂಲಕ ಮೋದಿ ಲಡಾಯಿಯ ಹಾದಿ ತುಳಿದರೆ ಎಂಬ ಮಾತುಗಳೂ ಕೇಳಿ ಬಂದಿವೆ. ಸೈನಿಕರನ್ನು ಹುರಿದುಂಬಿಸಿದ ಅವರು ಕೆಲವು ಪ್ರಮುಖ ಅಂಶಗಳನ್ನು ಒತ್ತಿ ಹೇಳಿದ್ದಾರೆ.
ನೆರೆದೇಶದ ವಿಸ್ತರಣಾವಾದದ ಬಗ್ಗೆ ಎಚ್ಚರಿಕೆ ನೀಡಿರುವ ಅವರು, ಪ್ರತಿ ಭಾರತೀಯನಿಗೂ ನಮ್ಮ ಸೈನ್ಯದ ತಾಕತ್ತಿನ ಬಗ್ಗೆ ಹೆಮ್ಮೆಯಿದೆ. ನೀವು ಈಗ ಕರ್ತವ್ಯ ನಿರ್ವಹಿಸುತ್ತಿರುವ ಈ ಎತ್ತರದ ಪ್ರದೇಶಕ್ಕಿಂತಲೂ ನಿಮ್ಮ ಧೈರ್ಯ ಎತ್ತರ ಮಟ್ಟದಲ್ಲಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಜೂನ್ 15ರ ಸಂಘರ್ಷದಲ್ಲಿ ದೇಶದ 20 ಯೋಧರು ಹುತಾತ್ಮರಾದ ನಂತರ, ಸರ್ವ ಪಕ್ಷಗಳ ಸಭೆ ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ದೇಶದ ಒಂದಿಂಚೂ ನೆಲವನ್ನು ಯಾರೂ ಆಕ್ರಮಿಸಿಲ್ಲ ಎಂದಿದ್ದರು. ಆದರೆ, ಕೆಲವು ಮಾಧ್ಯಮಗಳು ಪ್ರಕಟಿಸಿದ ಉಪಗ್ರಹ ಚಿತ್ರಗಳಲ್ಲಿ ಚೀನಾ ಪೂರ್ವ ಲಡಾಕ್‍ನಲ್ಲಿ ಅತಿಕ್ರಮಣ ಮಾಡಿದ್ದು ಬಯಲಾಗಿತ್ತು.

Leave a Reply

Your email address will not be published. Required fields are marked *

You May Also Like

ಡ್ರೈವಿಂಗ್ ಲಯಸನ್ಸ್ ಪಡೆಯಲು ಬದಲಾಗಲಿವೆ ನಿಯಮಗಳು

ಡ್ರೈವಿಂಗ್ ಟೆಸ್ಟ್ ಗೆ ಒಂದು ತಿಂಗಳ ಮೊದಲು ತೋರಿಸಲಾಗುವ ಈ ವೀಡಿಯೊ ಟ್ಯುಟೋರಿಯಲ್‌ನಲ್ಲಿ ಸುರಕ್ಷಿತ ಡ್ರೈವಿಂಗ್ ಮಾಹಿತಿಯನ್ನು ನಿಮಗೆ ತಿಳಿಸಲಾಗುತ್ತದೆ.

ಬಿಜೆಪಿ ಸರ್ಕಾರದಲ್ಲಿ ಯೋಧರಿಗಿಲ್ಲ ಪ್ರಾಮುಖ್ಯತೆ : ಕಾಂಗ್ರೆಸ್ ಟೀಕೆ

ಬಿಜೆಪಿಯ ಹಮ್ ದೋ ಹಮಾರೆ ದೋ ಸರ್ಕಾರದಲ್ಲಿ ಅಂಬಾನಿಗಿರುವ ಪ್ರಾಮುಖ್ಯತೆ ಯೋಧರಿಗಿಲ್ಲ ಎಂದು ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರಕ್ಕೆ ಟೀಕಿಸಿದೆ.

ಶುಭ ಸುದ್ದಿ: ನಿಮ್ಮ ಮಗುವಿಗೆ ‘ಆಧಾರ್’ ಕಾರ್ಡ್ ಪಡೆಯಲು ಇಲ್ಲಿದೆ ಮಾಹಿತಿ

ದೇಶದಲ್ಲಿ ಜನಿಸಿದ ನವಜಾತ ಶಿಶುಗಳಿಗೆ ಆಧಾರ್ ಸೌಲಭ್ಯವನ್ನು ಒದಗಿಸಲಾಗಿದೆ.

ಶ್ರೀಲಂಕಾ ಬ್ಯಾಟ್ಸಮನ್ ಮೆಂಡಿಸ್ ಅರೆಸ್ಟ್!

ಕೊಲಂಬೊ : ಶ್ರೀಲಂಕಾ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಕುಸಲ್ ಮೆಂಡಿಸ್ ಅವರನ್ನು ಶ್ರೀಲಂಕಾ…