ಲಡಾಕ್: ಜೂನ್ 15ರಂದು ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಸಂಘರ್ಷದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಸಂಘರ್ಷ ವಲಯಗಳಾದ ಲಡಾಕ್ ಮತ್ತು ಲೇಹ್ ಪ್ರದೇಶಕ್ಕೆ ಇಂದು ಭೇಟಿ ನೀಡಿ, ದೇಶದ ಸೈನಿಕ ಪಡೆಗಳಿಗೆ ನೈತಿಕ ಸ್ಥೈರ್ಯ ತುಂಬಿದರು.
ಮೂರೂ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಭೂಸೇನೆಯ ಮುಖ್ಯಸ್ಥ ನರವಾಣೆ ಜೊತೆಗಿದ್ದರು.
ಲಡಾಖ್‍ಗೆ ಭೇಟಿ ಕೊಡುವ ಮೂಲಕ ಮೋದಿ ಲಡಾಯಿಯ ಹಾದಿ ತುಳಿದರೆ ಎಂಬ ಮಾತುಗಳೂ ಕೇಳಿ ಬಂದಿವೆ. ಸೈನಿಕರನ್ನು ಹುರಿದುಂಬಿಸಿದ ಅವರು ಕೆಲವು ಪ್ರಮುಖ ಅಂಶಗಳನ್ನು ಒತ್ತಿ ಹೇಳಿದ್ದಾರೆ.
ನೆರೆದೇಶದ ವಿಸ್ತರಣಾವಾದದ ಬಗ್ಗೆ ಎಚ್ಚರಿಕೆ ನೀಡಿರುವ ಅವರು, ಪ್ರತಿ ಭಾರತೀಯನಿಗೂ ನಮ್ಮ ಸೈನ್ಯದ ತಾಕತ್ತಿನ ಬಗ್ಗೆ ಹೆಮ್ಮೆಯಿದೆ. ನೀವು ಈಗ ಕರ್ತವ್ಯ ನಿರ್ವಹಿಸುತ್ತಿರುವ ಈ ಎತ್ತರದ ಪ್ರದೇಶಕ್ಕಿಂತಲೂ ನಿಮ್ಮ ಧೈರ್ಯ ಎತ್ತರ ಮಟ್ಟದಲ್ಲಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಜೂನ್ 15ರ ಸಂಘರ್ಷದಲ್ಲಿ ದೇಶದ 20 ಯೋಧರು ಹುತಾತ್ಮರಾದ ನಂತರ, ಸರ್ವ ಪಕ್ಷಗಳ ಸಭೆ ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ದೇಶದ ಒಂದಿಂಚೂ ನೆಲವನ್ನು ಯಾರೂ ಆಕ್ರಮಿಸಿಲ್ಲ ಎಂದಿದ್ದರು. ಆದರೆ, ಕೆಲವು ಮಾಧ್ಯಮಗಳು ಪ್ರಕಟಿಸಿದ ಉಪಗ್ರಹ ಚಿತ್ರಗಳಲ್ಲಿ ಚೀನಾ ಪೂರ್ವ ಲಡಾಕ್‍ನಲ್ಲಿ ಅತಿಕ್ರಮಣ ಮಾಡಿದ್ದು ಬಯಲಾಗಿತ್ತು.

Leave a Reply

Your email address will not be published. Required fields are marked *

You May Also Like

ಕೆ.ಎಸ್ಆರ.ಟಿ.ಸಿ ನೌಕರರಿಗೆ ಸಂಬಳರಹಿತ ರಜೆ ಅಮಾನವೀಯ:ಸರ್ಕಾರ ದಿವಾಳಿಯಾಗಿದೆಯೇ?: ಸಿದ್ದರಾಮಯ್ಯ ಆಕ್ರೋಶ

ಕೆ.ಎಸ್.ಆರ.ಟಿ.ಸಿ ನೌಕರರಿಗೆ 1 ವರ್ಷ ಸಂಬಳರಹಿತ ರಜೆ ನೀಡಲು ಹೊರಟಿರುವುದು ಕಾರ್ಮಿಕ ವಿರೋಧಿ ನಡೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.ಸರ್ಕಾರದ ಯೋಚನೆ ಕಾರ್ಮಿಕ ವಿರೋಧಿ ಮತ್ತು ಅಮಾನವೀಯ

ಲಾಕ್ ಡೌನ್ ಮಾನದಂಡ ಸಡಿಲಿಕೆಯಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆಯಾ?

ಲಾಕ್‌ಡೌನ್ ಮಾನದಂಡಗಳನ್ನು ಸಡಿಲಿಸಿದ ನಂತರ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಏರಿಕೆಯಾಗಿದೆಯೇ ಎಂಬುವುದನ್ನು ಖಚಿತಪಡಿಸಿಕೊಳ್ಳಲು, ಆರೋಗ್ಯ ಇಲಾಖೆ ಎಲ್ಲ ನಾಗರಿಕರ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿದೆ.

ಪಾಕ್, ಅಪ್ಘಾನಿಸ್ತಾನ ರಾಷ್ಟ್ರಗಳ ಮುಂದೆ ಕೊರೊನಾ ವಿಷಯದಲ್ಲಿ ನಾವು ಸೋತಿದ್ದೇವೆ – ರಾಹುಲ್

ನವದೆಹಲಿ : ಕೊರೊನಾ ವಿಷಯದಲ್ಲಿ ನಾವು ಸೋಲು ಕಂಡಿದ್ದೇವೆ. ನಮ್ಮ ಶತೃ ರಾಷ್ಟ್ರ ಪಾಕ್ ವಿರುದ್ಧ ನಮಗೆ ಮುಖಭಂಗವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ಮೋಸ – ವಿವಾಹಿತೆ ಆತ್ಮಹತ್ಯೆಗೆ ಶರಣು!

ಮಂಡ್ಯ : ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬ ಮೋಸ ಮಾಡಿದ್ದರ ಹಿನ್ನೆಲೆಯಲ್ಲಿ ನೊಂದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.