ಲಡಾಕ್: ಜೂನ್ 15ರಂದು ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಸಂಘರ್ಷದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಸಂಘರ್ಷ ವಲಯಗಳಾದ ಲಡಾಕ್ ಮತ್ತು ಲೇಹ್ ಪ್ರದೇಶಕ್ಕೆ ಇಂದು ಭೇಟಿ ನೀಡಿ, ದೇಶದ ಸೈನಿಕ ಪಡೆಗಳಿಗೆ ನೈತಿಕ ಸ್ಥೈರ್ಯ ತುಂಬಿದರು.
ಮೂರೂ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಭೂಸೇನೆಯ ಮುಖ್ಯಸ್ಥ ನರವಾಣೆ ಜೊತೆಗಿದ್ದರು.
ಲಡಾಖ್‍ಗೆ ಭೇಟಿ ಕೊಡುವ ಮೂಲಕ ಮೋದಿ ಲಡಾಯಿಯ ಹಾದಿ ತುಳಿದರೆ ಎಂಬ ಮಾತುಗಳೂ ಕೇಳಿ ಬಂದಿವೆ. ಸೈನಿಕರನ್ನು ಹುರಿದುಂಬಿಸಿದ ಅವರು ಕೆಲವು ಪ್ರಮುಖ ಅಂಶಗಳನ್ನು ಒತ್ತಿ ಹೇಳಿದ್ದಾರೆ.
ನೆರೆದೇಶದ ವಿಸ್ತರಣಾವಾದದ ಬಗ್ಗೆ ಎಚ್ಚರಿಕೆ ನೀಡಿರುವ ಅವರು, ಪ್ರತಿ ಭಾರತೀಯನಿಗೂ ನಮ್ಮ ಸೈನ್ಯದ ತಾಕತ್ತಿನ ಬಗ್ಗೆ ಹೆಮ್ಮೆಯಿದೆ. ನೀವು ಈಗ ಕರ್ತವ್ಯ ನಿರ್ವಹಿಸುತ್ತಿರುವ ಈ ಎತ್ತರದ ಪ್ರದೇಶಕ್ಕಿಂತಲೂ ನಿಮ್ಮ ಧೈರ್ಯ ಎತ್ತರ ಮಟ್ಟದಲ್ಲಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಜೂನ್ 15ರ ಸಂಘರ್ಷದಲ್ಲಿ ದೇಶದ 20 ಯೋಧರು ಹುತಾತ್ಮರಾದ ನಂತರ, ಸರ್ವ ಪಕ್ಷಗಳ ಸಭೆ ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ದೇಶದ ಒಂದಿಂಚೂ ನೆಲವನ್ನು ಯಾರೂ ಆಕ್ರಮಿಸಿಲ್ಲ ಎಂದಿದ್ದರು. ಆದರೆ, ಕೆಲವು ಮಾಧ್ಯಮಗಳು ಪ್ರಕಟಿಸಿದ ಉಪಗ್ರಹ ಚಿತ್ರಗಳಲ್ಲಿ ಚೀನಾ ಪೂರ್ವ ಲಡಾಕ್‍ನಲ್ಲಿ ಅತಿಕ್ರಮಣ ಮಾಡಿದ್ದು ಬಯಲಾಗಿತ್ತು.

Leave a Reply

Your email address will not be published. Required fields are marked *

You May Also Like

ಮುಂಬಯಿನ ಮೀನು ಮಾರುಕಟ್ಟೆಯಿಂದ ಬಂದ ಕೊರೊನಾ!

ಮುಂಬಯಿನ ಮೀನದ ಮಾರುಕಟ್ಟೆಯಲ್ಲಿ ಮೀನು ಮಾರುಕಟ್ಟೆಯಲ್ಲಿ ಕೆಲಸ ಮಾಡಿ ಮರಳಿ ಬಂದಿದ್ದ ಜಿಲ್ಲೆಯ 11 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ನಿತ್ಯೋತ್ಸವ ಕವಿ ನಿಸಾರ್ ಅಹ್ಮದ್ ಇನ್ನಿಲ್ಲ..!

ನಿತ್ಯೋತ್ಸವ ಕವಿ ಎಂದೇ ಖ್ಯಾತರಾಗಿದ್ದ ಕನ್ನಡದ ಹಿರಿಯ ಕವಿ ಕೆ.ಎಸ್.ನಿಸಾರ್ ಅಹ್ಮದ್ ಇಂದು ನಿಧನ ಹೊಂದಿದ್ದಾರೆ. ಹಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ನಿಸಾರ ಅಹ್ಮದ್ ಇಂದು ಕೊನೆ ಉಸಿರೆಳೆದರು.

ಬಿರಿಯಾನಿಯಲ್ಲಿ ಲೆಗ್ ಪೀಸ್ ಕಡಿಮೆ ಕೊಟ್ಟಿದ್ದಕ್ ಈ ಭೂಪ್ ಏನ್ ಮಾಡಿದ ನೋಡಿ..!

ಹೈದರಾಬಾದ್: ಯಾಕೋ ಇವತ್ ಬಿರಿಯಾನಿ ಬೇಡ ಜೀವಕ್ಕ ಕೊಂಚ ನಿರಾಶೆಯಾಗೈತಿ ನೋಡ್ರಿ. ಆನ್ ಲೈನ್ ನ್ಯಾಗ್ ಬಿರಿಯಾನಿ ಬುಕ್ ಮಾಡಿದ ಮ್ಯಾಲೆ ಮನಿಗ್ ಬಂದ್ ಬಿರಿಯಾನ್ ಪ್ಯಾಕೇಟ್ ಬಿಚ್ಚಿ ಗಡದ್ ಆಗಿ ತಿಂದ್ರಾತು, ಅಂತ ಹೊಂಟ ವ್ಯಕ್ತಿಗೆ ಅದ್ಯಾಕೋ ಸಿಟ್ ಬಂದೈತಿ ನೋಡ್ರಿ.

ಮಧುಮಗನ ತಾಯಿಗೆ ಕೊರೊನಾ ಪಾಸಿಟಿವ್ ಮದುವೆ ರದ್ದು

ಬಾಗಲಕೋಟೆ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ನಡೆಯಬೇಕಿದ್ದ ಮದುವೆ ಯನ್ನು ಗುಳೇದಗುಡ್ಡ ತಾಲೂಕು ಆಡಳಿತದ ಅಧಿಕಾರಿಗಳು…