ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ರೈಲು-ಬಸ್ ಢಿಕ್ಕಿಯಿಂದ 19 ಸಿಖ್ ಯಾತ್ರಾರ್ಥಿಗಳು ಮೃತಪಟ್ಟು ಎಂಟು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಶೇಕಪುರ್ ಜಿಲ್ಲೆಯಲ್ಲಿ ಮಾನವರಹಿತ ಕ್ರಾಸಿಂಗ್ನಲ್ಲಿ ಈ ಘಟನೆ ಸಂಭವಿಸಿದೆ. ಪೇಶಾವರ ನಗರದ ಸಿಖ್ ಯಾತ್ರಿಗಳು ಶೇಕ್ಪುರ್ನಲ್ಲಿರುವ ಸಂಕನ ಸಾಹೇಬ ಯಾತ್ರಾಸ್ಥಳಕ್ಕೆ ಭೇಟಿ ನೀಡಿ ಮರಳುವಾಗ ಈ ಅಪಘಾತ ಸಂಭವಿಸಿದೆ.