ಗದಗ: ಕಾರ್ ಅಪಘಾತದಲ್ಲಿ ಮೂವರು ಶಿಕ್ಷಕರು ಗಂಭೀರ ಗಾಯಗೊಂಡ ಘಟನೆ ಗದಗ ತಾಲೂಕಿನ ನರ್ಸಾಪೂರ ಗ್ರಾಮದ ಬಳಿ ನಡೆದಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಡ್ಯೂಟಿ ಮುಗಿಸಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ತಡೆಗೋಡೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು
ಗದಗ ತಾಲೂಕಿನ ಕೋಟುಮಚಗಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಿ.ಆರ್.ಬಂಡಾ, ಸಹ ಶಿಕ್ಷಕರಾದ ಮಾರುತಿ ಅಸುಂಡಿ, ನೇರಲಗಿ ಗಾಯಗೊಂಡವರು ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ಗದಗನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಭೇಟಿ ಮಾಡಿ ಆರೋಗ್ಯ ವಿಚಾರಣೆ ನಡೆಸಿದ್ದಾರೆ. ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

You May Also Like

ಕೋರಾನಾ: ಭಾರತೀಯ ಔಷಧಿಗೆ ತಡೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ!

ಜಿನೆವಾ: ಕೊರೊನಾ ವೈರಸ್ ಗೆ ಪರಿಣಾಮಕಾರಿ ಮದ್ದು ಎನ್ನಲಾಗುತ್ತಿದ್ದ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧದ ವೈದ್ಯಕೀಯ ಪ್ರಯೋಗಕ್ಕೆ ವಿಶ್ವ…

ಕರ್ನಾಟಕದಲ್ಲಿ ಕಿಕ್ಕಿರಿಯುತ್ತಿದೆ ಸೋಂಕು!: ಇಂದು 5030 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 5030 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ…

ನರೇಗಲ್ಲ್: ರಸಪ್ರಶ್ನೆ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ರೋಣ ಶಿಕ್ಷಣ ಇಲಾಖೆ ವತಿಯಿಂದ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ, ನರೆಗಲ್ ನ ಕು.ರಕ್ಷಿತಾ ಪಾಟೀಲ ಹಾಗೂ ಕುಮಾರಿ ನಿವೇದಿತಾ ಕಿಟಗೇರಿ, ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.