ಗದಗ: ಜಿಲ್ಲೆಯಲ್ಲಿ ಇಂದು 19 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಗ್ರಾಮೀಣ ಭಾಗದಲ್ಲೂ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ.

ಗದಗ
ಗದಗ ನಗರದ ಸಿದ್ದರಾಮೇಶ್ವರ ನಗರ ನಿವಾಸಿ 31 ವರ್ಷದ ಪುರುಷ (ಪಿ-10148) ಸೋಂಕಿತರ ಸಂಪರ್ಕದಿಂದಾಗಿ ಅದೇ ಪ್ರದೇಶದ 31 ವರ್ಷದ ಪುರುಷ (ಪಿ-18272) ಹಾಗೂ 24 ವರ್ಷದ ಮಹಿಳೆ((ಪಿ-18273)ಗೆ ಸೋಂಕು ದೃಢವಾಗಿದೆ.
ಗುಜರಾತ್ ರಾಜ್ಯದಿಂದ ಜುಲೈ 2ರಂದು ಜಿಲ್ಲೆಗೆ ಆಗಮಿಸಿದ್ದ ಗದಗ ತಾಲ್ಲೂಕಿನ ಮಲ್ಲಸಮುದ್ರದ ಜಿಮ್ಸ್ ಹಾಸ್ಟೆಲ್‌ನ 19 ವರ್ಷದ ಯುವಕ (ಪಿ-18283), ಮಹರಾಷ್ಟ್ರದಿಂದ ಜೂನ್ 30ರಂದು ಆಗಮಿಸಿದ್ದ ಕಳಸಾಪುರ ರಿಂಗ್ ರೋಡ್ ಪ್ರದೇಶದ 33 ವರ್ಷದ ಪುರುಷ (ಪಿ-18289) ಹಾಗೂ ಹಾವೇರಿ ಜಿಲ್ಲೆಯಿಂದ ಜೂನ್ 26 ರಂದು ಜಿಲ್ಲೆಗೆ ಆಗಮಿಸಿದ ಗದಗ-ಬೆಟಗೇರಿಯ ನರಸಾಪುರದ ರಂಗಪ್ಪಜ್ಜ ಮಠದ ಹತ್ತಿರದ ನಿವಾಸಿ 60 ವರ್ಷದ ಮಹಿಳೆ (ಪಿ-18271) ಇವರಿಗೆ ಜ್ವರ ಹಾಗೂ ಕೆಮ್ಮು ರೋಗ ಲಕ್ಷಣದಿಂದಾಗಿ ಕೋವಿಡ್-19 ಸೋಂಕು ದೃಢಪಟ್ಟಿದೆ.
ಇನ್‌ಪ್ಲೂಯೆಂಜಾ ರೋಗ ಲಕ್ಷಣಗಳಿರುವ ಜ್ವರ ಮತ್ತು ಶೀತದಿಂದ ಬಳಲುತ್ತಿದ್ದ ಮಲ್ಲಸಮುದ್ರದ ಅಂಜುಮನ್ ಕಾಲೇಜ್ ಹತ್ತಿರದ ನಿವಾಸಿ 31 ವರ್ಷದ ಪುರುಷ(ಪಿ-18280), ಗದಗ ನಗರದ ಕಾಗದಗೆರೆ ನಿವಾಸಿ 60 ವರ್ಷದ ಮಹಿಳೆ (ಪಿ-18281) ಹಾಗೂ ಹರ್ತಿ ಗ್ರಾಮದ ಈರಣ್ಣ ದೇವಸ್ಥಾನ ಹತ್ತಿರದ ನಿವಾಸಿ 22 ವರ್ಷದ ಮಹಿಳೆ (ಪಿ-18287)ಗೆ ಸೋಂಕು ದೃಢಪಟ್ಟಿದೆ.
ತಾಲ್ಲೂಕಿನ ಬೆಳದಡಿ ಗ್ರಾಮದ ಶಾಲೆಯ ಹಿಂಭಾಗದ ನಿವಾಸಿ 40 ವರ್ಷದ ಪುರುಷ (ಪಿ-18286), ಅಡವಿ ಸೋಮಾಪುರ ತಾಂಡಾ ನಿವಾಸಿ 60 ವರ್ಷದ ಮಹಿಳೆ (ಪಿ-18288)ಗೆ ಸೋಂಕು ದೃಢವಾಗಿದೆ. ಸೋಂಕಿನ ಪತ್ತೆ ಕಾರ್ಯ ನಡೆಯುತ್ತಿದೆ.

ನರಗುಂದ
ನರಗುಂದ ಪಟ್ಟಣದ ಗಡಿ ಓಣಿ ನಿವಾಸಿ 39 ವರ್ಷದ ಪುರುಷ (ಪಿ-15320) ಸಂಪರ್ಕದಿಂದ ಅದೇ ಪ್ರದೇಶದ 7 ವರ್ಷದ ಬಾಲಕಿ (ಪಿ-18275), 65 ವರ್ಷದ ಮಹಿಳೆ (ಪಿ-18276), 36 ವರ್ಷದ ಮಹಿಳೆ (ಪಿ-18277), 15 ವರ್ಷದ ಯುವಕ (ಪಿ-18278), 42 ವರ್ಷದ ಪುರುಷ (ಪಿ-18279) ಸೋಂಕು ದೃಢಪಟ್ಟಿದೆ. ಧಾರವಾಡ ಜಿಲ್ಲೆಯಿಂದ ಜೂನ್ 30ರಂದು ಆಗಮಿಸಿದ ನರಗುಂದ ಗುಡ್ಡದಕೇರಿ ಅಂಬಾಭವಾನಿ ದೇವಸ್ಥಾನದ ಹತ್ತಿರದ ನಿವಾಸಿ 25 ವರ್ಷದ ಮಹಿಳೆ (ಪಿ-18274) ಕೋವಿಡ್-19 ಸೋಂಕು ದೃಢವಾಗಿದೆ.
ಜಿಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಧಾರವಾಡ ಜಿಲ್ಲೆ ನವಲಗುಂದ ತಾಲ್ಲೂಕಿನ ಅಡ್ನೂರು ಗ್ರಾಮದ 31 ವರ್ಷದ ಪುರುಷ (ಪಿ-18284) ಇನ್‌ಪ್ಲೂಯೆಂಜಾ ರೋಗ ಲಕ್ಷಣದಿಂದಾಗಿ ಸೋಂಕು ದೃಢವಾಗಿದೆ.

ಲಕ್ಷ್ಮೇಶ್ವರ
ಲಕ್ಷ್ಮೇಶ್ವರದ 39 ವರ್ಷದ ಪುರುಷ (ಪಿ-11230) ಸಂಪರ್ಕದಿAದಾಗಿ ಲಕ್ಷ್ಮೇಶ್ವರ ಹೊಸ ಬಸ್ ನಿಲ್ದಾಣದ ಹತ್ತಿರದ ಇಂದಿರಾ ನಗರ ನಿವಾಸಿ 40 ವರ್ಷದ ಮಹಿಳೆ (ಪಿ-18285) ಸೋಂಕು ದೃಢವಾಗಿದೆ.

ಶಿರಹಟ್ಟಿ
ಶಿರಹಟ್ಟಿ ತಾಲ್ಲೂಕಿನ ಗೊಜನೂರು ಗ್ರಾಮದ 23 ವರ್ಷದ ಮಹಿಳೆ (ಪಿ-18282) ಸೋಂಕು ದೃಢವಾಗಿದ್ದು, ಸೋಂಕಿನ ಪತ್ತೆ ಕಾರ್ಯ ನಡೆಯುತ್ತಿದೆ.
ಇವರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

1 comment
  1. ಇದರಲ್ಲಿ ಮುಂಡರಗಿ ತಾಲೂಕಿನ ಮಾಹಿತಿಯನ್ನೇ ಕೊಟ್ಟಿಲ್ವಲ್ಲಾ ಸರ್……

Leave a Reply

Your email address will not be published. Required fields are marked *

You May Also Like

ಶಿರಹಟ್ಟಿ ಕಟ್ಟಿಗೆ ಅಡ್ಡೆಗಳ ವಿಚಾರದಲ್ಲಿ ಪತ್ರಗಳ ತಾಪತ್ರೆಯ ತಪ್ಪೋದು ಯಾವಾಗ?

ಒಂದು ಮಾದ್ಯಮವಾಗಿ ಉತ್ತರಪ್ರಭ ಜನಪರವಾಗಿ ಕಾರ್ಯ ಮಾಡುತ್ತಿರುವಾಗ ಆಡಳಿತ ಯಂತ್ರಕ್ಕೆ ಮಾತ್ರ ಈ ವಿಚಾರದ ಗಂಭೀರತೆಯ ಅರ್ಥವಾಗುತ್ತಿಲ್ಲವೇ ಎನ್ನುವ ಪ್ರಶ್ನೆ ಉದ್ಭವವಾಗಿದೆ. ಇದಕ್ಕೆ ಕಾರಣ ಈಗಾಗಲೇ ಶಿರಹಟ್ಟಿ ಪಟ್ಟಣದಲ್ಲಿರುವ ಕಟ್ಟಿಗೆ ಅಡ್ಡೆಗಳ ವಿಚಾರವಾಗಿ ಸೂಕ್ತ ಕ್ರಮಕ್ಕಾಗಿ ಶಿರಹಟ್ಟಿ ತಹಶೀಲ್ದಾರ್ ಸ್ಥಳೀಯ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗೆ ಆದೇಶಿಸಿದ್ದರು.

ಗದಗ ಜಿಲ್ಲೆಗೆ ಶೇ.40 ರಷ್ಟು ಮಳೆಯ ಕೊರತೆ!: ಬಿತ್ತನೆಯಾಗಿದ್ದು ಶೇ.47 ರಷ್ಟು ಮಾತ್ರ!

ಗದಗ: ಜಿಲ್ಲೆಯಲ್ಲಿ ಈಗಾಗಲೇ ಕೆಲವೆಡೆ ಉತ್ತಮ ಮಳೆಯಾಗಿದ್ದು ಇನ್ನು ಕೆಲವು ಭಾಗದಲ್ಲಿ ಮಳೆಯ ದರ್ಶನವಾಗಿಲ್ಲ. ಮಳೆ…

ಹೊರ ರಾಜ್ಯಗಳಿಗೆ ಹೋಗಲು -ಬುರವಿಕೆಗೆ ಅನುಮತಿ

ಹೊರ ರಾಜ್ಯಗಳಲ್ಲಿ ಸಿಲುಕಿರುವ ಅಥವಾ ಸ್ವಂತ ರಾಜ್ಯಕ್ಕೆ ಸ್ಥಳಕ್ಕೆ ಹೋಗಲು ಬಯಸುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು,ಪ್ರವಾಸಿಗರು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅಭಿಮಾನಕ್ಕಾಗಿ ನನ್ನ ಕಣ್ಣಾಲೆಗಳು ತುಂಬಿಕೊಂಡ ಕ್ಷಣ ಅದು..

ಉತ್ತರ ಪ್ರಭ ನ್ಯೂಸ್ ಪೋರ್ಟಲ್ ಬಗೆಗೆ ನೀವೆಲ್ಲ ತೋರಿಸುತ್ತಿರುವ ಅಕ್ಕರೆ, ಅಭಿಮಾನ ನಮ್ಮ ಉತ್ಸಾಹ ಹೆಚ್ಚಿಸಿದೆ. ಇನ್ನು ಕೆಲ ದಿನಗಳಲ್ಲಿಯೇ ಪತ್ರಿಕೆಯನ್ನು ಆರಂಭಿಸುವ ನಮ್ಮ ಕನಸಿಗೆ ನಿಮ್ಮ ಅಭಿಮಾನ ಬಣ್ಣ ತುಂಬಿದೆ