ಗದಗ: ಜಿಲ್ಲೆಯಲ್ಲಿ ಇಂದು 19 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಗ್ರಾಮೀಣ ಭಾಗದಲ್ಲೂ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ.

ಗದಗ
ಗದಗ ನಗರದ ಸಿದ್ದರಾಮೇಶ್ವರ ನಗರ ನಿವಾಸಿ 31 ವರ್ಷದ ಪುರುಷ (ಪಿ-10148) ಸೋಂಕಿತರ ಸಂಪರ್ಕದಿಂದಾಗಿ ಅದೇ ಪ್ರದೇಶದ 31 ವರ್ಷದ ಪುರುಷ (ಪಿ-18272) ಹಾಗೂ 24 ವರ್ಷದ ಮಹಿಳೆ((ಪಿ-18273)ಗೆ ಸೋಂಕು ದೃಢವಾಗಿದೆ.
ಗುಜರಾತ್ ರಾಜ್ಯದಿಂದ ಜುಲೈ 2ರಂದು ಜಿಲ್ಲೆಗೆ ಆಗಮಿಸಿದ್ದ ಗದಗ ತಾಲ್ಲೂಕಿನ ಮಲ್ಲಸಮುದ್ರದ ಜಿಮ್ಸ್ ಹಾಸ್ಟೆಲ್‌ನ 19 ವರ್ಷದ ಯುವಕ (ಪಿ-18283), ಮಹರಾಷ್ಟ್ರದಿಂದ ಜೂನ್ 30ರಂದು ಆಗಮಿಸಿದ್ದ ಕಳಸಾಪುರ ರಿಂಗ್ ರೋಡ್ ಪ್ರದೇಶದ 33 ವರ್ಷದ ಪುರುಷ (ಪಿ-18289) ಹಾಗೂ ಹಾವೇರಿ ಜಿಲ್ಲೆಯಿಂದ ಜೂನ್ 26 ರಂದು ಜಿಲ್ಲೆಗೆ ಆಗಮಿಸಿದ ಗದಗ-ಬೆಟಗೇರಿಯ ನರಸಾಪುರದ ರಂಗಪ್ಪಜ್ಜ ಮಠದ ಹತ್ತಿರದ ನಿವಾಸಿ 60 ವರ್ಷದ ಮಹಿಳೆ (ಪಿ-18271) ಇವರಿಗೆ ಜ್ವರ ಹಾಗೂ ಕೆಮ್ಮು ರೋಗ ಲಕ್ಷಣದಿಂದಾಗಿ ಕೋವಿಡ್-19 ಸೋಂಕು ದೃಢಪಟ್ಟಿದೆ.
ಇನ್‌ಪ್ಲೂಯೆಂಜಾ ರೋಗ ಲಕ್ಷಣಗಳಿರುವ ಜ್ವರ ಮತ್ತು ಶೀತದಿಂದ ಬಳಲುತ್ತಿದ್ದ ಮಲ್ಲಸಮುದ್ರದ ಅಂಜುಮನ್ ಕಾಲೇಜ್ ಹತ್ತಿರದ ನಿವಾಸಿ 31 ವರ್ಷದ ಪುರುಷ(ಪಿ-18280), ಗದಗ ನಗರದ ಕಾಗದಗೆರೆ ನಿವಾಸಿ 60 ವರ್ಷದ ಮಹಿಳೆ (ಪಿ-18281) ಹಾಗೂ ಹರ್ತಿ ಗ್ರಾಮದ ಈರಣ್ಣ ದೇವಸ್ಥಾನ ಹತ್ತಿರದ ನಿವಾಸಿ 22 ವರ್ಷದ ಮಹಿಳೆ (ಪಿ-18287)ಗೆ ಸೋಂಕು ದೃಢಪಟ್ಟಿದೆ.
ತಾಲ್ಲೂಕಿನ ಬೆಳದಡಿ ಗ್ರಾಮದ ಶಾಲೆಯ ಹಿಂಭಾಗದ ನಿವಾಸಿ 40 ವರ್ಷದ ಪುರುಷ (ಪಿ-18286), ಅಡವಿ ಸೋಮಾಪುರ ತಾಂಡಾ ನಿವಾಸಿ 60 ವರ್ಷದ ಮಹಿಳೆ (ಪಿ-18288)ಗೆ ಸೋಂಕು ದೃಢವಾಗಿದೆ. ಸೋಂಕಿನ ಪತ್ತೆ ಕಾರ್ಯ ನಡೆಯುತ್ತಿದೆ.

ನರಗುಂದ
ನರಗುಂದ ಪಟ್ಟಣದ ಗಡಿ ಓಣಿ ನಿವಾಸಿ 39 ವರ್ಷದ ಪುರುಷ (ಪಿ-15320) ಸಂಪರ್ಕದಿಂದ ಅದೇ ಪ್ರದೇಶದ 7 ವರ್ಷದ ಬಾಲಕಿ (ಪಿ-18275), 65 ವರ್ಷದ ಮಹಿಳೆ (ಪಿ-18276), 36 ವರ್ಷದ ಮಹಿಳೆ (ಪಿ-18277), 15 ವರ್ಷದ ಯುವಕ (ಪಿ-18278), 42 ವರ್ಷದ ಪುರುಷ (ಪಿ-18279) ಸೋಂಕು ದೃಢಪಟ್ಟಿದೆ. ಧಾರವಾಡ ಜಿಲ್ಲೆಯಿಂದ ಜೂನ್ 30ರಂದು ಆಗಮಿಸಿದ ನರಗುಂದ ಗುಡ್ಡದಕೇರಿ ಅಂಬಾಭವಾನಿ ದೇವಸ್ಥಾನದ ಹತ್ತಿರದ ನಿವಾಸಿ 25 ವರ್ಷದ ಮಹಿಳೆ (ಪಿ-18274) ಕೋವಿಡ್-19 ಸೋಂಕು ದೃಢವಾಗಿದೆ.
ಜಿಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಧಾರವಾಡ ಜಿಲ್ಲೆ ನವಲಗುಂದ ತಾಲ್ಲೂಕಿನ ಅಡ್ನೂರು ಗ್ರಾಮದ 31 ವರ್ಷದ ಪುರುಷ (ಪಿ-18284) ಇನ್‌ಪ್ಲೂಯೆಂಜಾ ರೋಗ ಲಕ್ಷಣದಿಂದಾಗಿ ಸೋಂಕು ದೃಢವಾಗಿದೆ.

ಲಕ್ಷ್ಮೇಶ್ವರ
ಲಕ್ಷ್ಮೇಶ್ವರದ 39 ವರ್ಷದ ಪುರುಷ (ಪಿ-11230) ಸಂಪರ್ಕದಿAದಾಗಿ ಲಕ್ಷ್ಮೇಶ್ವರ ಹೊಸ ಬಸ್ ನಿಲ್ದಾಣದ ಹತ್ತಿರದ ಇಂದಿರಾ ನಗರ ನಿವಾಸಿ 40 ವರ್ಷದ ಮಹಿಳೆ (ಪಿ-18285) ಸೋಂಕು ದೃಢವಾಗಿದೆ.

ಶಿರಹಟ್ಟಿ
ಶಿರಹಟ್ಟಿ ತಾಲ್ಲೂಕಿನ ಗೊಜನೂರು ಗ್ರಾಮದ 23 ವರ್ಷದ ಮಹಿಳೆ (ಪಿ-18282) ಸೋಂಕು ದೃಢವಾಗಿದ್ದು, ಸೋಂಕಿನ ಪತ್ತೆ ಕಾರ್ಯ ನಡೆಯುತ್ತಿದೆ.
ಇವರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

1 comment
  1. ಇದರಲ್ಲಿ ಮುಂಡರಗಿ ತಾಲೂಕಿನ ಮಾಹಿತಿಯನ್ನೇ ಕೊಟ್ಟಿಲ್ವಲ್ಲಾ ಸರ್……

Leave a Reply

Your email address will not be published. Required fields are marked *

You May Also Like

ಚುನಾವಣೆ ಮುಂದೂಡಲು ಸರ್ಕಾರದ ಹುನ್ನಾರ: ತಾಪಂ ರದ್ದು ವಿಚಾರಕ್ಕೆ ಶಾಸಕ ಎಚ್.ಕೆ. ಪಾಟೀಲ ಕಿಡಿ

ರಾಜ್ಯ ಸರ್ಕಾರ ತಾಲೂಕು ಪಂಚಾಯತಿಯನ್ನು ರದ್ದು ಪಡಸಲು ಮುಂದಾಗಿದ್ದು, ಸAವಿಧಾನದಲ್ಲಿ ತಿದ್ದುಪಡಿಯಾಗಿದ್ದನ್ನು ರಾಜ್ಯ ಸರಕಾರ ರದ್ದು ಪಡಿಸೋಕೆ ಬರುವದಿಲ್ಲ. ಆದರೆ ಯಾವ ಆಧಾರದ ಮೇಲೆ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ ಎಂದು ಮಾಜಿ ಸಚಿವ, ಶಾಸಕ ಎಚ್.ಕೆ.ಪಾಟೀಲ್ ಪ್ರಶ್ನಿಸಿದರು.

ಗೊಂದಲ ಮೂಡಿಸಿದ ಆರೋಗ್ಯ ಸಚಿವ, ಮೇಯರ್ ಹೇಳಿಕೆ ಐಶ್ವರ್ಯಾ ರೈ, ಮಗಳು ಆರಾಧ್ಯ ಪಾಸಿಟಿವ್ ಪಕ್ಕಾ!

ಆರೋಗ್ಯ ಸಚಿವ ಮತ್ತು ಮೇಯರ್ ಸೃಷ್ಟಿಸಿದ ಗೊಂದಲಕ್ಕೆ ತೆರೆ ಬಿದ್ದಿದ್ದು, ಐಶ್ವರ್ಯಾ ಮತ್ತು ಮಗಳಿಗೆ ಪಾಸಿಟಿವ್ ಇರುವುದು ಪಕ್ಕಾ ಎಂದು ಎರಡನೇ ಪರೀಕ್ಷಾ ವರದಿ ತಿಳಿಸಿದೆ. 

ತಾಜ್ ಮಹಲ್ ಗೆ ಸಿಡಿಲು – ಹಾನಿ!

ಆಗ್ರಾ: ಸಿಡಿಲು ಬಡಿದ ಪರಿಣಾಮ ವಿಶ್ವ ವಿಖ್ಯಾತ ತಾಜ್ ಮಹಲ್ ಗೆ ಹಾನಿಯಾಗಿರುವ ಘಟನೆ ಉತ್ತರ…

ಚೀನಾ ಹಿಂದಿಕ್ಕಿ ಸಾಗುತ್ತಿದೆ ಭಾರತ!

ನವದೆಹಲಿ: ಮಹಾಮಾರಿ ಕೊರೊನಾ ಭಾರತದಲ್ಲಿ ತನ್ನ ಉಗ್ರ ಪ್ರತಾಪ ಮುಂದುವರೆಸಿದ್ದು, ದೇಶದಲ್ಲಿ 24 ಗಂಟೆಗಳಲ್ಲಿ 3,904…