ಬೆಂಗಳೂರು: ಕೋವಿಡ್-19 ಸೋಂಕಿನಿಂದ ಗುಣಪಡಿಸಲು ಬೆಂಗಳೂರಿನ ಆಯುರ್ವೇದ ವೈದ್ಯರೊಬ್ಬರು ಸಣ್ಣದೊಂದು ಹೆಜ್ಜೆ ಇಟ್ಟಿದ್ದಾರೆ. ಭೌಮ್ಯ ಮತ್ತು ಸಾಸ್ತೈ ಎಂಬ ಹೆಸರಿನ ಮಾತ್ರೆಗಳನ್ನು ಸಂಶೋಧಿಸಿದ್ದು, ಇದಕ್ಕೆ ಇನ್ನೂ ಅಪ್ರೂವಲ್ ಸಿಕ್ಕಿಲ್ಲ ಎಂಬುದನ್ನು ಆ ವೈದ್ಯರೇ ಸ್ಪಷ್ಟಪಡಿಸಿದ್ದಾರೆ.

ನಗರದ ಡಾ. ಗಿರಿಧರ್ ಕಜೆ ಎಂಬುವವರು 14 ಔಷಧಿ ಸಸ್ಯಗಳ ಪದಾರ್ಥಗಳಿಂದ ಮಾತ್ರೆ ತಯಾರಿಸಿದ್ದು, ನಗರದ ವಿಕ್ಟೋರಿಯಾ-ಕೋವಿಡ್ ಆಸ್ಪತ್ರೆಯಲ್ಲಿ ಹತ್ತು ಪಾಸಿಟಿವ್ ರೋಗಿಗಳ ಮೇಲೆ ಪ್ರಯೋಗ ಮಾಡಲಾಗಿದ್ದು, ಅವರೆಲ್ಲ 3-10 ದಿನದಲ್ಲಿ ಗುಣಮುಖರಾಗಿದ್ದು, ಈಗ ಅವರ ವರದಿ ನೆಗೆಟಿವ್ ಬಂದಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಮೆಡಿಕಲ್ ಕಾಲೇಜ್ ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್‌ಐ) ಕೋವಿಡ್ ಎಥಿಕ್ಸ್ ಕೋರ್ ಕಮಿಟಿ ಕ್ಲಿನಿಕಲ್ ಟ್ರಯಲ್ಸ್ ಗೆ ಅನುಮತಿ ನೀಡಿತ್ತು. ಆಯುರ್ವೇದ ಮತ್ತು ಆಯುಷ್‌ನಲ್ಲಿ ಕೊರೋನಾಕ್ಕೆ ಔಷಧಿ ಕಂಡು ಹಿಡಿಯುವ ಪ್ರಯೋಗಗಳು ನಡೆದಿವೆ. ಈಗ ಈ ಮಾತ್ರೆಗಳನ್ನು ನಿಗದಿತ ಚಿಕಿತ್ಸೆಯಲ್ಲಿ ಪೂರಕವಾಗಿ ನೀಡಬಹುದಷ್ಟೇ. ಸದ್ಯಕ್ಕೆ ಇನ್ನಷ್ಟು ಪ್ರಯೋಗಗಳು ನಡೆಯಬೇಕು ಎಂದು ಸಮಿತಿ ಸದಸ್ಯೆ ಡಾ. ಸ್ಮಿತಾ ತಿಳಿಸಿದ್ದಾರೆ.

ಯಾವುದೇ ಹೊಸ ಔಷಧಿ ಅಪ್ರೂವಲ್ ಪಡೆಯಬೇಕಾದರೆ ಸಾಕಷ್ಟು ಸಂಖ್ಯೆಯ ರೋಗಿಗಳ (ಸ್ಯಾಂಪಲ್ ಸೈಜ್ ದೊಡ್ಡದಾಗಿರಬೇಕು) ಮೇಲೆ ಅದನ್ನು ಪ್ರಯೋಗಿಸಿ ಯಶಸ್ಸು ಪಡೆಯಬೇಕು. ಹೀಗಾಗಿ ಡಾ. ಗಿರಿಧರ್ ಅವರು ವಿಭಿನ್ನ ವಯೋಮಾನದ ಸಾವಿರಾರು ಪಾಸಿಟಿವ್‌ಗಳ ಮೇಲೆ ಪ್ರಯೋಗ ಮಾಡಿ ಯಶಸ್ಸು ಕಂಡ ನಂತರವಷ್ಟೇ ಇದರ ಮಾರಾಟ ಅನುಮತಿ ಸಿಗಲಿದೆ.

Leave a Reply

Your email address will not be published. Required fields are marked *

You May Also Like

ರಷ್ಯಾ ಲಸಿಕೆ ಸುದ್ದಿ ನಂಬಿ ದಿಕ್ಕು ತಪ್ಪಿದ ‘ದೊಡ್ಡ’ ಮಾಧ್ಯಮ: ಅವಸರದ ನಡುವೆಯೂ ಉತ್ತರಪ್ರಭ ಸಂಯಮ

ಕಳೆದ ಭಾನುವಾರ ಮತ್ತು ಸೋಮವಾರ ಕೋರೊನಾ ಲಸಿಕೆ ಕುರಿತಂತೆ ಫೇಕ್ ಸುದ್ದಿಯನ್ನು ನಂಬಿದ ದೈತ್ಯ ಮೀಡಿಯಾ ಕಂಪನಿಗಳು ಎಡವಟ್ಟು ಮಾಡಿಕೊಂಡವು. ಆದರೆ ಉತ್ತರಪ್ರಭ ಸತ್ಯ ಪ್ರಕಟಿಸಿತ್ತು. ಈಗ ಅದನ್ನೇ ದೇಶದ ಮುಂಚೂಣಿ ಫ್ಯಾಕ್ಟ್ ಚೆಕ್ ಕಂಪನಿ ಅಲ್ಟ್ ನ್ಯೂಸ್ ಹೇಳಿದೆ.

ಪದ್ಮಶ್ರೀ ಇಬ್ರಾಹಿಂ ಸುತಾರ್ ಇನ್ನಿಲ್ಲ

ಮಹಾಲಿಂಗಪುರ:ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಹೃದಯಾಘಾತದಿಂದ ಪದ್ಮಶ್ರೀ ಪುರಸ್ಕೃತ, ಸೂಫಿ ಸಂತ, ತತ್ವಪದ…

ಚೀನಾ ಕುತಂತ್ರ – ಸರ್ವ ಪಕ್ಷಗಳ ಸಭೆ ಕರೆದ ಪ್ರಧಾನಿ!

ಹೊಸದೆಹಲಿ: ಗಡಿಯಲ್ಲಿ ಚೀನಾ ಕಿರಿಕ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷಗಳ ಸಭೆ…

ಮದ್ಯ ಮಾರಾಟ ನಿಷೇಧಕ್ಕೆ ಗೋರ್ ಸೇನಾ ಒತ್ತಾಯ

ಮದ್ಯೆ ಮಾರಾಟ ಸಂಪೂರ್ಣವಾಗಿ ನಿಶೇಧಿಸುವಂತೆ ಒತ್ತಾಯಿಸಿ ಗೋರ್ ಸೇನಾ ಸಂಘಟನೆಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.