ಬಾಗಲಕೋಟೆ: ಜಮಖಂಡಿ ತಾಲ್ಲೂಕಿನ ಸಾವಳಗಿಯಲ್ಲಿ ಕೋವಿಡ್-೧೯ ಸಂದರ್ಭದಲ್ಲಿ ಸರಕಾರಿ ಆದೇಶ ಪ್ರಕಾರ ಜನ ಸಾಮಾನ್ಯರಾಗಲಿ ಹಾಗೂ ಅಧಿಕಾರಿಗಳಾಗಲಿ ಸುರಕ್ಷಿತ ಅಂತರ, ಸ್ಯಾನಿಟೈಜರ್ ಬಳಕೆ, ಮಾಸ್ಕ್ ಧರಿಸುವುದು ಕಡ್ಡಾಯವೆಂದು ಕರೋನಾ ವಾರಿಯರ್ಸ್ ಸೇವೆ ಸಲ್ಲಿಸುತ್ತಿದ್ದಾರೆ.
ಆದರೆ ಇಲ್ಲಿ ಎಲ್ಲವನ್ನು ಗಾಳಿಗೆ ತೂರಿ ಸರಕಾರಿ ಆದೇಶಕ್ಕೂ ನಮಗೂ ಸಂಬಂಧವೇ ಇಲ್ಲ ಎನ್ನುವ ರೀತಿಯಲ್ಲಿ ಸಾವಳಗಿ ವಿಭಾಗದ ಹೆಸ್ಕಾಂ ಶಾಖಾಧಿಕಾರಿ ಜೇತುಲಾಲ್ ರಾಠೋಡ ಕಚೇರಿ ಮುಂಭಾಗದಲ್ಲಿ ಸಿಬ್ಬಂದಿ ಹಾಗೂ ವಿದ್ಯುತ್ ಗುತ್ತಿಗೆದಾರರ ಜೊತೆಗೂಡಿ ಸುರಕ್ಷಿತ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದೆ ಹುಟ್ಟು ಹಬ್ಬವನ್ನು ಕಚೇರಿಯ ಮುಂಭಾಗದಲ್ಲಿ ಆಚರಿಸಿಕೊಂಡಿದ್ದಾರೆ.
ಈ ಮೂಲಕ ಸರಕಾರಿ ಆದೇಶಕ್ಕೆ ಬೆಲೆ ಇಲ್ಲದಂತೆ ಮಾಡಿದ್ದಾರೆ. ಈ ಕೂಡಲೇ ಈ ವಿಷಯಕ್ಕೆ ಸಂಬಂಧಪಟ್ಟ ಮೇಲಧಿಕಾರಿಗಳು ಪರಿಶೀಲಿಸಿ ಸೂಕ್ತ ಕ್ರಮಕೈಗೋಳ್ಳಬೇಕು ಎಂದು ಸಾವಳಗಿ ಗ್ರಾಮದ ಜನ ಆಗ್ರಹಿಸಿದ್ದಾರೆ.

ನಮ್ಮ ಸಿಬ್ಬಂದಿಗೆ ಬೇಡ ಅಂದರೂ ಒತ್ತಾಯದಿಂದ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಅದನ್ನೇ ದೊಡ್ಡದು ಮಾಡಬೇಡಿ. – ಜೇತುಲಾಲ್ ರಾಠೋಡ್, ಹೆಸ್ಕಾಂ ಶಾಖಾಧಿಕಾರಿ, ಸಾವಳಗಿ

ಗ್ರಾ.ಪಂ, ಪೊಲೀಸ್ ಇಲಾಖೆ, ಆಶಾ ಕಾರ್ಯಕರ್ತರು ಹಾಗೂ ಅನೇಕರು ಹಗಲಿರುಳು ಎನ್ನುದೆ ಶ್ರಮಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಸ್ಕ್ ಹಾಕದೆ ಹಾಗೂ ಸುರಕ್ಷಿತ ಅಂತರ ಕಾಯ್ದುಕೊಳ್ಳದೆ ಸರ್ಕಾರಿ ಆದೇಶ ಗಾಳಿಗೆ ತೂರಿ ಹುಟ್ಟು ಹಬ್ಬವನ್ನು ಆಚರಿಸುವದು ಸರಿಯಲ್ಲ.

  • ಸಿದ್ದುಬಾ ಬಂಡಿವಡ್ಡರ, ತಾಲ್ಲಕು ಅಧ್ಯಕ್ಷ, ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ
Leave a Reply

Your email address will not be published. Required fields are marked *

You May Also Like

ಜೆಡಿಎಸ್ ಸ್ಥಾನ ಕಬಳಿಸಲು ಬಿಜೆಪಿ ಹೊಂಚು – ರೇವಣ್ಣ!

ಹಾಸನ : ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಎಸ್ಟಿ ಮೀಸಲಾತಿ ಅಂತಿಮಗೊಳಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಶಾಸಕ ಎಚ್.ಡಿ. ರೇವಣ್ಣ ಆಕ್ರೋಶ ಹೊರ ಹಾಕಿದ್ದಾರೆ.

ಕೋವಿಡ್ 19 ನಿಯಮ ಉಲ್ಲಂಘನೆ: ಪಿ.ಟಿ. ಪರಮೇಶ್ವರ ನಾಯ್ಕ್ ವಿರುದ್ಧ ದೂರು ದಾಖಲು

ಹರಪನಹಳ್ಳಿ: ನಿನ್ನೆಯಷ್ಟೆ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ಪುತ್ರನ ವಿವಾಹ ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ…

ಸಚಿವ ನಾಗೇಶ ನಾಯಕತ್ವ: ಅಭಿವೃದ್ಧಿ ಪಥದಲ್ಲಿ ಶಿಕ್ಷಣ ಇಲಾಖೆ- ಸ್ಪಂದನಾಭಾವದಿಂದ ಸಮಸ್ಯೆಗಳು ಕ್ಷೀಣ…!

ಉತ್ತರಪ್ರಭ ಸುದ್ದಿಆಲಮಟ್ಟಿ: ಶಿಕ್ಷಣ ಇಲಾಖೆಯ ಅಭಿವೃದ್ಧಿ ಕಾರ್ಯಕ್ಕೆ ಇಡೀ ಇಲಾಖೆ, ಶಿಕ್ಷಕರು, ಮಕ್ಕಳು, ಸಂಘಟನೆಗಳು, ಪಾಲಕರು-ಪೋಷಕರು,…

ಮೋಟಾರ್ ರಿವೈಂಡಿಗ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ವರದಿ: ವಿಠಲ ಕೆಳೂತ್ ಮಸ್ಕಿ: ದೇವನಾಂಪ್ರಿಯ ಅಶೋಕ ಮೋಟಾರ ರಿವೈಂಡಿಗ್ ಕಾರ್ಮಿಕ ಸಂಘದ ನೂತನ ಪದಾಧಿಕಾರಿಗಳ…