ಬಾಗಲಕೋಟೆ: ಜಮಖಂಡಿ ತಾಲ್ಲೂಕಿನ ಸಾವಳಗಿಯಲ್ಲಿ ಕೋವಿಡ್-೧೯ ಸಂದರ್ಭದಲ್ಲಿ ಸರಕಾರಿ ಆದೇಶ ಪ್ರಕಾರ ಜನ ಸಾಮಾನ್ಯರಾಗಲಿ ಹಾಗೂ ಅಧಿಕಾರಿಗಳಾಗಲಿ ಸುರಕ್ಷಿತ ಅಂತರ, ಸ್ಯಾನಿಟೈಜರ್ ಬಳಕೆ, ಮಾಸ್ಕ್ ಧರಿಸುವುದು ಕಡ್ಡಾಯವೆಂದು ಕರೋನಾ ವಾರಿಯರ್ಸ್ ಸೇವೆ ಸಲ್ಲಿಸುತ್ತಿದ್ದಾರೆ.
ಆದರೆ ಇಲ್ಲಿ ಎಲ್ಲವನ್ನು ಗಾಳಿಗೆ ತೂರಿ ಸರಕಾರಿ ಆದೇಶಕ್ಕೂ ನಮಗೂ ಸಂಬಂಧವೇ ಇಲ್ಲ ಎನ್ನುವ ರೀತಿಯಲ್ಲಿ ಸಾವಳಗಿ ವಿಭಾಗದ ಹೆಸ್ಕಾಂ ಶಾಖಾಧಿಕಾರಿ ಜೇತುಲಾಲ್ ರಾಠೋಡ ಕಚೇರಿ ಮುಂಭಾಗದಲ್ಲಿ ಸಿಬ್ಬಂದಿ ಹಾಗೂ ವಿದ್ಯುತ್ ಗುತ್ತಿಗೆದಾರರ ಜೊತೆಗೂಡಿ ಸುರಕ್ಷಿತ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದೆ ಹುಟ್ಟು ಹಬ್ಬವನ್ನು ಕಚೇರಿಯ ಮುಂಭಾಗದಲ್ಲಿ ಆಚರಿಸಿಕೊಂಡಿದ್ದಾರೆ.
ಈ ಮೂಲಕ ಸರಕಾರಿ ಆದೇಶಕ್ಕೆ ಬೆಲೆ ಇಲ್ಲದಂತೆ ಮಾಡಿದ್ದಾರೆ. ಈ ಕೂಡಲೇ ಈ ವಿಷಯಕ್ಕೆ ಸಂಬಂಧಪಟ್ಟ ಮೇಲಧಿಕಾರಿಗಳು ಪರಿಶೀಲಿಸಿ ಸೂಕ್ತ ಕ್ರಮಕೈಗೋಳ್ಳಬೇಕು ಎಂದು ಸಾವಳಗಿ ಗ್ರಾಮದ ಜನ ಆಗ್ರಹಿಸಿದ್ದಾರೆ.

ನಮ್ಮ ಸಿಬ್ಬಂದಿಗೆ ಬೇಡ ಅಂದರೂ ಒತ್ತಾಯದಿಂದ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಅದನ್ನೇ ದೊಡ್ಡದು ಮಾಡಬೇಡಿ. – ಜೇತುಲಾಲ್ ರಾಠೋಡ್, ಹೆಸ್ಕಾಂ ಶಾಖಾಧಿಕಾರಿ, ಸಾವಳಗಿ

ಗ್ರಾ.ಪಂ, ಪೊಲೀಸ್ ಇಲಾಖೆ, ಆಶಾ ಕಾರ್ಯಕರ್ತರು ಹಾಗೂ ಅನೇಕರು ಹಗಲಿರುಳು ಎನ್ನುದೆ ಶ್ರಮಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಸ್ಕ್ ಹಾಕದೆ ಹಾಗೂ ಸುರಕ್ಷಿತ ಅಂತರ ಕಾಯ್ದುಕೊಳ್ಳದೆ ಸರ್ಕಾರಿ ಆದೇಶ ಗಾಳಿಗೆ ತೂರಿ ಹುಟ್ಟು ಹಬ್ಬವನ್ನು ಆಚರಿಸುವದು ಸರಿಯಲ್ಲ.

  • ಸಿದ್ದುಬಾ ಬಂಡಿವಡ್ಡರ, ತಾಲ್ಲಕು ಅಧ್ಯಕ್ಷ, ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ
Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಶರವೇಗದಲ್ಲಿ ಸೋಂಕು: ಇಂದು 72 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 72 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ 774…

ಗದಗ ಜಿಲ್ಲೆಯಲ್ಲಿ 73 ಪ್ರಕರಣ: ಯಾವ ಊರಲ್ಲಿ ಎಷ್ಟು?

ಗದಗ: ಜಿಲ್ಲೆಯಲ್ಲಿ ದಿ. 28 ರಂದು ಕೋವಿಡ್-19 ಸೋಂಕಿನ ಒಟ್ಟು 73 ಪ್ರಕರಣಗಳು ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.

ಸುಮಲತಾಗೆ ಪಾಸಿಟಿವ್: ಸಂಪರ್ಕಿತರಿಂದ ಪರೀಕ್ಷೆಗೆ ರಶ್.!

ಮಂಡ್ಯ: ಸಂಸದೆ ಸುಮಲತಾ ತಮಗೆ ಪಾಸಿಟಿವ್ ಬಂದಿದೆ ಎಂದು ಸೋಮವಾರ ಘೋಷಿಸಿದ್ದರು. ತಮ್ಮ ಸಂಪರ್ಕಿತರ ಪಟ್ಟಿಯನ್ನು…

ಸಂಘಟನಾ ಶಕ್ತಿಯಿಂದ ಬೇಡಿಕೆಗಳನ್ನು ಈಡೇರಿಸಿಕೊಳ್ಳಬಹುದಾಗಿದೆ

ಒಗ್ಗಟ್ಟು ಮತ್ತು ಸಂಘಟನಾ ಶಕ್ತಿಯಿಂದ ಧೈರ್ಯ, ಆತ್ಮವಿಶ್ವಾಸ ಹೆಚ್ಚಿ ನ್ಯಾಯ ಸಮ್ಮತವಾದ ಬೇಡಿಕೆಗಳನ್ನು ಈಡೇರಿಸಿಕೊಳ್ಳಬಹುದಾಗಿದೆ ಎಂದು ಮಾಜಿ ಶಾಸಕ ಎಸ್.ಎನ್.ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು.