ಬೆಂಗಳೂರು: ರಾಜ್ಯದಲ್ಲಿ ದಿನೆದಿನೇ ಸೋಂಕಿನ ಹಬ್ಬುವಿಕೆ ಹೆಚ್ಚುತ್ತಿದೆ. 40 ಸಾವಿರ ಪ್ರಕರಣಗಳ ಟೆಸ್ಟ್ ಫಲಿತಾಂಶ ಬಾಕಿಯಿದೆ. ಸಾವಿನ ಆತಂಕವೂ ಹೆಚ್ಚಿದೆ. ಹೀಗಾಗಿ ರಾಜ್ಯ ಸರಕಾರ ಕೂಡಲೇ ಎಲ್ಲರಿಗೂ ಕೋವಿಡ್ ವಿಮೆ ಒದಗಿಸಬೇಕು ಎಂದು ಗದಗ ಶಾಸಕ ಎಚ್.ಕೆ. ಪಾಟೀಲ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಈ ಸಂಕಷ್ಟದ ಸಮಯದಲ್ಲಿ ಸರಕಾರ ಜನರ ಜೊತೆಗೆ ನಿಲ್ಲಬೇಕು. ಎಲ್ಲರಿಗೂ ವಿಮೆ ಒದಗಿಸಲು 2 ಸಾವಿರ ಕೋಟಿ ರೂಪಾಯಿ ಸಾಕು ಎಂದು ಅವರು ತಿಳಿಸಿದರು.

ಇಂತಹ ಸಂದರ್ಭದಲ್ಲೂ ಪಿಪಿಇ ಕಿಟ್ ಖರೀದಿ ಮತ್ತು ಇತರ ವಿಷಯಗಳಲ್ಲಿ ಭ್ರಷ್ಟಾಚಾರ ನಡೆಸುತ್ತಾರೆ ಎಂದರೆ ನಾಚಿಕೆಗೇಡು. ಜನ ತಿರುಗಿ ಬೀಳುವ ಮುನ್ನ ಸರಕಾರ ಎಚ್ಚರಗೊಳ್ಳಲಿ ಎಂದು ಅವರು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ನಂಜಯ್ಯನಮಠ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ವಾರದ ಮಲ್ಲಪ್ಪನವರ ಸಮಾಜಿಕ ಸೇವೆ ಅಪಾರ : ಅಂದಾನೆಪ್ಪ ವಿಭೂತಿ

ವಾರದ ಮಲ್ಲಪ್ಪ ಅವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಧಾರ್ಮಿಕವಾಗಿ, ಔದ್ಯೋಗಿಕವಾಗಿ ಮಾಡಿದ ಸೇವೆ ಅಪಾರವಾದದ್ದು. ಎಂದು ವಿಭೂತಿ ಪತ್ರಿಕೆ ಸಂಪಾದಕ ಅಂದಾನೆಪ್ಪ ವಿಭೂತಿ ಹೇಳಿದರು.

ಮುಂಡರಗಿ ಮಿನಿ ವಿಧಾನಸೌಧಕ್ಕೂ ಶುರುವಾಯಿತೆ ಕೊರೊನಾ ಭೀತಿ..!

ಪಟ್ಟಣದಲ್ಲಿ ಕಳೆದ ಎರಡು ಮೂರು ದಿನಗಳಿಂದ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಇದರಿಂದ ಮುಂಡರಗಿಯ ಜನ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ದಿಂದ ಆತಂಕಕ್ಕೀಡಾಗಿದ್ದಾರೆ. ಆದರೆ ಇಂದು ಪಟ್ಟಣದ ಮಿನಿವಿಧಾನ ಸೌಧ ಕಾರ್ಯಾಲಯ ಗೇಟ್ ಗೆ ಬೀಗ ಹಾಕಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

ದಾವಣಗೆರೆಯಲ್ಲಿ ಕೊರೋನಾ ಸೋಂಕು ಸೆಂಚೂರಿ..!

ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 100 ಗಡಿ ದಾಟಿದೆ. ಇವತ್ತು ಒಂದೇ ದಿನ 19 ಪಾಸಿಟೀವ್ ಪ್ರಕರಣ ಪತ್ತೆಯಾಗಿದ್ದು, ಇದರಿಂದ ದಾವಣಗೆರೆಯಲ್ಲಿ ಸೋಂಕಿತರ ಸಂಖ್ಯೆ 109ಕ್ಕೆ ಏರಿಕೆಯಾಗಿದೆ.

ಗದಗ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ ಸಾವಿನ ಸಂಖ್ಯೆ 3 ಕ್ಕೆ ಏರಿಕೆ!

ಗದಗ: ಜಿಲ್ಲೆಯಲ್ಲಿಂದು‌ ಕೊರೊನಾ ಸೋಂಕಿಗೆ 95 ವರ್ಷದ ವೃದ್ಧೆ ಬಲಿಯಾಗಿದ್ದಾಳೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ…