ಬೆಂಗಳೂರು: ರಾಜ್ಯದಲ್ಲಿ ದಿನೆದಿನೇ ಸೋಂಕಿನ ಹಬ್ಬುವಿಕೆ ಹೆಚ್ಚುತ್ತಿದೆ. 40 ಸಾವಿರ ಪ್ರಕರಣಗಳ ಟೆಸ್ಟ್ ಫಲಿತಾಂಶ ಬಾಕಿಯಿದೆ. ಸಾವಿನ ಆತಂಕವೂ ಹೆಚ್ಚಿದೆ. ಹೀಗಾಗಿ ರಾಜ್ಯ ಸರಕಾರ ಕೂಡಲೇ ಎಲ್ಲರಿಗೂ ಕೋವಿಡ್ ವಿಮೆ ಒದಗಿಸಬೇಕು ಎಂದು ಗದಗ ಶಾಸಕ ಎಚ್.ಕೆ. ಪಾಟೀಲ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಈ ಸಂಕಷ್ಟದ ಸಮಯದಲ್ಲಿ ಸರಕಾರ ಜನರ ಜೊತೆಗೆ ನಿಲ್ಲಬೇಕು. ಎಲ್ಲರಿಗೂ ವಿಮೆ ಒದಗಿಸಲು 2 ಸಾವಿರ ಕೋಟಿ ರೂಪಾಯಿ ಸಾಕು ಎಂದು ಅವರು ತಿಳಿಸಿದರು.

ಇಂತಹ ಸಂದರ್ಭದಲ್ಲೂ ಪಿಪಿಇ ಕಿಟ್ ಖರೀದಿ ಮತ್ತು ಇತರ ವಿಷಯಗಳಲ್ಲಿ ಭ್ರಷ್ಟಾಚಾರ ನಡೆಸುತ್ತಾರೆ ಎಂದರೆ ನಾಚಿಕೆಗೇಡು. ಜನ ತಿರುಗಿ ಬೀಳುವ ಮುನ್ನ ಸರಕಾರ ಎಚ್ಚರಗೊಳ್ಳಲಿ ಎಂದು ಅವರು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ನಂಜಯ್ಯನಮಠ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಯತ್ನಾಳ್ ರಾಜಿನಾಮೆಗೆ ಒತ್ತಾಯಿಸಿ ಕರವೇ ಪ್ರತಿಭಟನೆ: ಭೂತ ದಹನಕ್ಕೆ ಪೊಲೀಸರ ಅಡ್ಡಿ, ಪೊಲೀಸ್ ಹಾಗೂ ಪ್ರತಿಭಟನಾಕಾರರ ಮದ್ಯೆ ವಾಗ್ವಾದ

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕನ್ನಡಪರ ಹೋರಾಟಗಾರರ ಬಗ್ಗೆ ಕೀಳಾಗಿ ಮಾತನಾಡಿರುವುದನ್ನು ಖಂಡಿಸಿ ನಗರದ ಗಾಂಧಿ ವೃತ್ತದಲ್ಲಿಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿಂದು 308 ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6824…

ಚಸ್ ಅಲ್ಲೋ ಮಾರಾಯ ಚೀಯರ್ಸ್ ಅನ್ನು ಶು..!! ಇಂಗ್ಲೀಷ್ ಬ್ಯಾಡ ಕನ್ನಡದಾಗ ಹೇಳು..!

ಶು..!, ಕರ್ನಾಟಕದಾಗ ಹುಟ್ಟಿ ಚೆಸ್ ಅಂತ ಇಂಗ್ಲೀಷ್ ನ್ಯಾಗ್ ಹೇಳ ಬ್ಯಾಡ್ರಿ ಅಂದ, ಕನ್ನಡಾಭಿಮಾನಿಗಳು ಯಾರಾದ್ರು ಕೇಳಿಸಿಕೊಂಡ್ರ ಕುಡುಕರೆಲ್ಲ ಕನ್ನಡ ಬಿಟ್ಟು ಇಂಗ್ಲೀಷ್ ಮಾತಾಡಾಕತ್ಯಾರ ಅಂತ ಸ್ಟ್ರೈಕ್ ಮಾಡಿ ಬಾರ್ ಬಂದ್ ಮಾಡಿಸಿಗಿಡಿಸ್ಯಾರೋ ಮಾರಾಯ್ರ.

ಗದಗ ಜಿಲ್ಲೆಯ 9 ಕಂಟೇನ್‍ಮೆಂಟ್ ಪ್ರದೇಶಗಳ ನಿರ್ಭಂಧ ತೆರವು

ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 9 ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು. ಇದೀಗ 9 ಪ್ರದೇಶಗಳ ನಿರ್ಭಂಧವನ್ನು ಜಿಲ್ಲಾಡಳಿತ ತೆರವುಗೊಳಿಸಲಾಗಿದೆ.