ಬೆಂಗಳೂರು: ರಾಜ್ಯದಲ್ಲಿ ದಿನೆದಿನೇ ಸೋಂಕಿನ ಹಬ್ಬುವಿಕೆ ಹೆಚ್ಚುತ್ತಿದೆ. 40 ಸಾವಿರ ಪ್ರಕರಣಗಳ ಟೆಸ್ಟ್ ಫಲಿತಾಂಶ ಬಾಕಿಯಿದೆ. ಸಾವಿನ ಆತಂಕವೂ ಹೆಚ್ಚಿದೆ. ಹೀಗಾಗಿ ರಾಜ್ಯ ಸರಕಾರ ಕೂಡಲೇ ಎಲ್ಲರಿಗೂ ಕೋವಿಡ್ ವಿಮೆ ಒದಗಿಸಬೇಕು ಎಂದು ಗದಗ ಶಾಸಕ ಎಚ್.ಕೆ. ಪಾಟೀಲ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಈ ಸಂಕಷ್ಟದ ಸಮಯದಲ್ಲಿ ಸರಕಾರ ಜನರ ಜೊತೆಗೆ ನಿಲ್ಲಬೇಕು. ಎಲ್ಲರಿಗೂ ವಿಮೆ ಒದಗಿಸಲು 2 ಸಾವಿರ ಕೋಟಿ ರೂಪಾಯಿ ಸಾಕು ಎಂದು ಅವರು ತಿಳಿಸಿದರು.

ಇಂತಹ ಸಂದರ್ಭದಲ್ಲೂ ಪಿಪಿಇ ಕಿಟ್ ಖರೀದಿ ಮತ್ತು ಇತರ ವಿಷಯಗಳಲ್ಲಿ ಭ್ರಷ್ಟಾಚಾರ ನಡೆಸುತ್ತಾರೆ ಎಂದರೆ ನಾಚಿಕೆಗೇಡು. ಜನ ತಿರುಗಿ ಬೀಳುವ ಮುನ್ನ ಸರಕಾರ ಎಚ್ಚರಗೊಳ್ಳಲಿ ಎಂದು ಅವರು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ನಂಜಯ್ಯನಮಠ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಟಿಕ್ ಟಾಕ್ App ಬ್ಯಾನ್ ಗೆ ಟಿಕ್ ಟಾಕ್ ನೀಡಿದ ಸ್ಪಷ್ಟಿಕರಣ

ನವದೆಹಲಿ: ಕೇಂದ್ರ ಸರ್ಕಾರವು 59 App ಗಳನ್ನು ನಿಷೇಧಿಸಿ‌ ಮದ್ಯಂತರ ಆದೇಶ ಹೊರಡಿಸಿದೆ. 59 App…

ಗದಗ ಜಿಲ್ಲೆಯ 15 ಕಂಟೇನ್ಮೆಂಟ್ ಪ್ರದೇಶಗಳ ನಿರ್ಬಂಧ ತೆರವು

ಗದಗ: ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 15 ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು.

ಸಂಗೀತಾಳಿಗೆ ಬೇಕಿದೆ ಸಹಾಯ: ಪಿಯಸಿಯಲ್ಲಿ ಶೇ.90 ಅಂಕ; ಬೆಂಬಿಡದ ಬಡತನದಿಂದ ಶಿಕ್ಷಣ ನಿಲ್ಲಿಸಲು ಮುಂದಾದ ವಿದ್ಯಾರ್ಥಿನಿ..!

ಪಿಯುಸಿ ಪರೀಕ್ಷೆಯಲ್ಲಿ ಶೇ.90 ಅಂಕ ಪಡೆದ ಪ್ರತಿಭಾವಂತೆಯ ಕಥೆ ಇದು. ಪಿಯುಸಿಯಲ್ಲಿನ ಹೆಚ್ಚು ಅಂಕದ ಉತ್ಸಾಹದಲ್ಲಿದ್ದ ವಿದ್ಯಾರ್ಥಿನಿಗೆ ಕುಟುಂಬದ ಆರ್ಥಿಕ ಸ್ಥಿತಿ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸುವ ಹಂತಕ್ಕೆ ತಂದಿದೆ. ಹೀಗಾಗಿ ಬದುಕಿನಲ್ಲಿ ಓದಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹತ್ತು ಹಲವು ಕನಸು ಕಟ್ಟಿಕೊಂಡಿದ್ದ ವಿದ್ಯಾರ್ಥಿನಿ ಸಂಗೀತಾಳಿಗೆ ಓದು ಮುಂದುವರೆಸುವುದು ಕಷ್ಟವಾಗಿದೆ.

ಗೃಹ ರಕ್ಷಕ ದಳದ ಸದಸ್ಯ ಸ್ಥಾನಗಳ ನೋಂದಣಿಗೆ ಅರ್ಜಿ ಆಹ್ವಾನ

ಜಿಲ್ಲೆಯ ಗೃಹ ರಕ್ಷಕದಳದ ವಿವಿಧ ಘಟಕಗಳಲ್ಲಿ ಖಾಲಿ ಇರುವ 194 ಸ್ವಯಂ ಸೇವಕ ಗೃಹ ರಕ್ಷಕ ಸದಸ್ಯ ಸ್ಥಾನಗಳಿಗೆ ನೋಂದಣಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ಎಲ್ಲಾ ತಾಲೂಕಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಜಿಲ್ಲಾ ಗೃಹ ರಕ್ಷಕ ದಳದ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 9 ರಂದು ಸಂಜೆ 4 ಗಂಟೆಯೊಳಗೆ ಸಲ್ಲಿಸಬೇಕು.