ಗದಗ: ಕೋವಿಡ್-19 ಸೋಂಕು ನಿಯಂತ್ರಣ ಕ್ರಮವಾಗಿ ಜುಲೈ 31 ರವರೆಗೆ ನಿಷೇದಾಜ್ಞೆಯ ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರವು ಉಲ್ಲೇಖಿತ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಪ್ರತಿ ದಿನ ರಾತ್ರಿ 8:00 ರಿಂದ ಬೆಳಿಗ್ಗೆ 5:00 ಗಂಟೆಯವರೆಗೆ ಅವಶ್ಯಕ ಕಾರಣಗಳಲ್ಲದ ಹೊರತು ಎಲ್ಲ ವ್ಯಕ್ತಿಗಳ ಸಂಚಾರವನ್ನು ನಿಷೇಧಿಸಿದೆ. ಜುಲೈ 5 ಆಗಸ್ಟ 2ರವರೆಗೆ ಅನ್ವಯವಾಗುವಂತೆ ಪ್ರತಿ ರವಿವಾರದ ಪೂರ್ತಿ ದಿನದಂದು ಎಲ್ಲ ಪ್ರದೇಶಗಳಲ್ಲಿ ಸಂಪೂರ್ಣ ಲಾಕ್‌ಡೌನ್ ದಿನವೆಂದು ಘೋಷಿಸಿ ಅನಿವಾರ್ಯ ಕಾರಣಗಳಲ್ಲದ ಹೊರತು ಎಲ್ಲ ವ್ಯಕ್ತಿಗಳ ಸಂಚಾರವನ್ನು ನಿಷೇಧಿಸಲಾಗಿರುತ್ತದೆ. ಸಂಪೂರ್ಣ ಲಾಕ್‌ಡೌನ್ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಗದಗ ಜಿಲ್ಲೆಯಾದ್ಯಂತ ಜುಲೈ5, 12, 19, 26 ಮತ್ತು ಆಗಸ್ಟ್ 2ರಂದು ಇರುವ ಭಾನುವಾರಗಳಂದು ಮದ್ಯ ಮಾರಾಟ ಹಾಗೂ ಮದ್ಯ ಸಾಗಾಟವನ್ನು ನಿಷೇಧಿಸಿ ಗದಗ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಆದೇಶ ಹೊರಡಿಸಿದ್ದಾರೆ. ಅಬಕಾರಿ ಉಪ-ಆಯುಕ್ತರು, ಗದಗ ಇವರು ತಮ್ಮ ವ್ಯಾಪ್ತಿಯಲ್ಲಿ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಕೈಕೊಳ್ಳತಕ್ಕದ್ದು.
ಮದ್ಯ ಸಾಗಾಟ ಮತ್ತು ಮಾರಾಟವನ್ನು ನಿಷೇಧಿಸಿದ ಭಾನುವಾರಗಳ ಹಿಂದಿನ ದಿನ ಅಂದರೆ ಶನಿವಾರ ರಾತ್ರಿ 08-00 ಗಂಟೆಯಿಂದ ಸೋಮವಾರ ಬೆಳಿಗ್ಗೆ 5-00 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಎಷ್ಟು..?

ಬೆಂಗಳೂರು: ಜಗತ್ತಿನ ಆತಂಕಕ್ಕೆ ಕಾರಣವಾಗಿರುವ ಕೊರೊನಾ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮುಂದುವರೆಸಿದೆ. ಸದ್ಯ ಕೊರೊನಾಗೆ…

ಕೊರೋನಾ ವೈರಸ್ ಗೆ ಗ್ಲೆನ್ ಮಾರ್ಕ್ ಸಂಸ್ಥೆಯ ಫ್ಯಾಬಿಫ್ಲೂ ಅಸ್ತ್ರ

ದೆಹಲಿ: ಜಗತ್ತಿನ ಬಹುತೇಕ ರಾಷ್ಟ್ರಗಳನ್ನು ತನ್ನ ತೆಕ್ಕೆಗೆ ಎಳೆದುಕೊಂಡು ಜನರನ್ನು ಬಾಧಿಸುತ್ತಿರುವ ಕೊರೊನಾಗೆ ಗ್ಲೆನ್ ಮಾರ್ಕ್…

ಶಿಶುವಿನ ಜೀವ ಉಳಿಸಿದ ವೈದ್ಯರಿಗೆ ಸಚಿವ ಸಿ .ಸಿ .ಪಾಟೀಲರ ಅಭಿನಂದನೆ

ಉತ್ತರಪ್ರಭ ಸುದ್ದಿಗದಗ: ಮಹಿಳೆಯೊಬ್ಬರು ಮೃತ ಪಟ್ಟರೂ ಸಹ ಅತ್ಯಂತ ಕಾಳಜಿಯಿಂದ ಅಪರೂಪದ ಶಸ್ತ್ರಚಿಕಿತ್ಸೆ ನಡೆಸಿ ಅವರ…

ಉಡುಪಿಯಲ್ಲಿ ಆತಂಕ ಹೆಚ್ಚಿಸಿದ ಕೊರೊನಾ!

ಉಡುಪಿ ಜನರಿಗೆ ಕೊರೊನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಹಾರಾಷ್ಟ್ರದಿಂದ ಉಡುಪಿ ಜಿಲ್ಲೆಗೆ ಬಂದು ಕ್ವಾರಂಟೈನ್ನಿಲ್ಲಿ ಇರುವವರಲ್ಲಿ ಹೆಚ್ಚು ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಕೊರೊನಾ ಸ್ಫೋಟವಾಗುತ್ತಿದೆ. ಇಂದು ಕೂಡ ಬರೋಬ್ಬರಿ 25 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.